Andolana originals

‘ಒಳಚರಂಡಿ ಸಮಸ್ಯೆ: ಸುಣ್ಣದ ಕೇರಿ ನಿವಾಸಿಗಳು ಹೈರಾಣ’

ನಿವಾಸಿಗಳ ದೂರಿಗೆ ಸ್ಪಂದಿಸದ ಮಹಾನಗರಪಾಲಿಕೆ ಅಧಿಕಾರಿಗಳು

ಮೈಸೂರು: ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದ ನಗರದ ಕೆಲ ನಿವಾಸಿಗಳ ಮನೆಗಳಿಗೆ ಒಳಚರಂಡಿ ನೀರು ನುಗ್ಗುತಿದ್ದು, ಸಮಸ್ಯೆಯನ್ನು ಕೇಳವವರೇಇಲ್ಲದಂತಾಗಿದೆ. ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿರು ವುದರಿಂದ ಡೆಂಗ್ಯು, ಮಲೇರಿಯಾದಂಥ ಕಾಯಿಲೆಗಳಿಗೆ ತುತ್ತಾಗಿ ಪ್ರಾಣಾಪಾಯ ಎದುರಿಸುವಂತಾಗಿದೆ.

ಈ ಸಮಸ್ಯೆಯನ್ನು ನಿವಾಸಿಗಳು ಪಾಲಿಕೆ ಗಮನಕ್ಕೆ ತಂದು ಸರಿಪಡಿಸಲು ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ತಕ್ಷಣ ಪಾಲಿಕೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಿವಾಸಿಗಳೊಡಗೂಡಿ ಪಾಲಿಕೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಎಸ್. ಬಾಲಕೃಷ್ಣ ಎಚ್ಚರಿಕೆ ನೀಡಿದ್ದಾರೆ.

ನಗರದ ಹೃದಯ ಭಾಗದಲ್ಲಿರುವ ಸುಣ್ಣದಕೇರಿಯ ಎರಡು ಮತ್ತು ಮೂರನೇ ಅಡ್ಡ ರಸ್ತೆಗಳಲ್ಲಿ ಒಳಚರಂಡಿ ನೀರು ಮೇಲೆ ಉಕ್ಕಿ ಮನೆಗಳಿಗೆ ನುಗ್ಗುತ್ತಿದೆ. ಸಮಸ್ಯೆ ಬಗೆಹರಿಸಬೇಕೆಂದು ಪಾಲಿಕೆ ಅಽಕಾರಿಗಳಿಗೆ ದೂರು ನೀಡಿದರೆ ಸಹಾಯಕರನ್ನು ಸ್ಥಳಕ್ಕೆ ಕಳುಹಿಸಿ, ಸಮಸ್ಯೆಗೆ ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಸೂಕ್ತ ಪರಿಹಾರ ಕಲ್ಪಿಸದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಮಲಿನ ನೀರು ಮನೆಗಳ ಒಳಗೆ ನುಗ್ಗುವುದರಿಂದ ದುರ್ವಾಸನೆ ಹರಡಿ, ಮನೆಯ ಪರಿಸರವೇ ಹಾಳಾಗುತ್ತಿದೆ. ದುರ್ವಾಸನೆ ನಡುವೆ ಊಟ, ತಿಂಡಿ ಸೇವಿಸುವುದೂ ಕಷ್ಟವಾಗಿದೆ.

ನಿವಾಸಿಗಳಲ್ಲಿ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು, ನಗರಪಾಲಿಕೆ ಇಲ್ಲಿನ ಜನರಿಗೆ ಸಾಂಕ್ರಾಮಿಕ ರೋಗಗಳನ್ನು ದೀಪಾವಳಿ ಉಡುಗೊರೆಯಾಗಿ ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕ್ಷೇತ್ರದ ಶಾಸಕರಿಗೆ ಕರೆ ಮಾಡಿ ಸಮಸ್ಯೆ ತಿಳಿಸಿದಾಗ ೨-೩ ತಿಂಗಳುಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದರು. ಆದರೆ ಇದುವರೆಗೂ ಯಾವ ಪ್ರಯೋಜನವೂ ಆಗಿಲ್ಲ. ಹೀಗಾದರೆ ಜನ ಸಾಮಾನ್ಯರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ.

ಒಳಚರಂಡಿ ನೀರು ಮನೆಯೊಳಗೆ ಬರುತ್ತಿರುವ ಕಾರಣ ಶೌಚಾಲಯಕ್ಕೆ ಹೋಗಲಾಗದೇ, ಸಾರ್ವಜನಿಕ ಶೌಚಾಲಯ ಬಳಸುವಂತಾಗಿದೆ. ಮಲಗುವ ವೇಳೆ ಮೂಗಿಗೆ ಬಟ್ಟೆ ಕಟ್ಟಿಕೊಂಡು ಮಲಗುವ ಪರಿಸ್ಥಿತಿಎದುರಾಗಿದೆ. ಹಲವರು ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿವಾಸಿಗಳ ಗೋಳು ಕೇಳುವರು ಯಾರು?. ಕೂಡಲೇ ಇದನ್ನು ಸರಿಪಡಿಸದಿದ್ದರೆ, ನಿವಾಸಿಗಳು ಕುಟುಂಬ ಸಮೇತರಾಗಿ ನಗರ ಪಾಲಿಕೆ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.

” ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಬಡಾವಣೆಗಳ ಬಗ್ಗೆ ಅರಿವೇ ಇಲ್ಲ. ಯಾವುದೇ ರೀತಿಯ ಸಾರ್ವಜನಿಕ ಸಭೆಯನ್ನೂ ಕರೆದಿಲ್ಲ, ಅಧಿಕಾರಿಗಳು ಸಭೆ ಕರೆದು ಮಾತನಾಡಿಲ್ಲ. ಪಾಲಿಕೆ ಚುನಾಯಿತ ಪ್ರತಿನಿಽಗಳಿಲ್ಲದಿರುವುದೇ ಇದಕ್ಕೆಲ್ಲಾ ಕಾರಣವಾಗಿದೆ.ನಿವಾಸಿಗಳು ಕರೆ ಮಾಡಿದರೆ ಸಹಾಯಕ ಇಂಜಿನಿಯರ್‌ಗಳು ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಳ್ಳುತ್ತಾರೆ.”

-೨-೩ನೇ ಕ್ರಾಸ್ ನಿವಾಸಿಗಳು, ಸುಣ್ಣದಕೇರಿ

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

22 mins ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

1 hour ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

6 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

8 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

9 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

10 hours ago