Andolana originals

ರಸ್ತೆಯಲ್ಲೇ ಹರಿಯುವ ಚರಂಡಿ ನೀರು: ಕೆ.ಆರ್.ನಗರದ ಪ್ರಮುಖ ರಸ್ತೆಯಲ್ಲೇ ಅವ್ಯವಸ್ಥೆ

ಕೆ.ಆರ್.ನಗರ: ರಸ್ತೆಯಲ್ಲಿ ಗಲೀಜು ನೀರು… ಮೂಗು ಮುಚ್ಚಿಕೊಂಡು ಜನರ ಓಡಾಟ… ಇದು ಕಳೆದ 4-5 ದಿನಗಳಿಂದ ಪಟ್ಟಣದ ಪ್ರಮುಖ ಪುರಸಭೆ ವೃತ್ತದಿಂದ ಮಧುವನಹಳ್ಳಿ, ಚೀರನಹಳ್ಳಿ ರಸ್ತೆಗೆ ಸಂಪರ್ಕಿಸುವ ರಸ್ತೆಯಲ್ಲಿ ಕಂಡುಬರುತ್ತಿರುವ ಅವ್ಯವಸ್ಥೆ. ಇದರಿಂದ ಅಕ್ಕಪಕ್ಕದ ಮನೆಯ ವಾಸಿಗಳು, ಜನರು, ತರಕಾರಿ ವ್ಯಾಪಾರಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಪಟ್ಟಣದ ಐದಾರು ಕಡೆಯ ಬಡಾವಣೆಗಳಲ್ಲಿ ಒಳಚರಂಡಿ ತುಂಬಿಕೊಂಡು ಮ್ಯಾನ್‌ಹೋಲ್ ಮುಚ್ಚಳ ತೆರೆದು ಕೊಳಚೆ ನೀರು ಹರಿಯುತ್ತಿದೆ. ಮಳೆಗಾಲದ ಆರಂಭಕ್ಕೂ ಮುನ್ನ ಒಳಚರಂಡಿಗಳನ್ನು ದುರಸ್ತಿ ಮಾಡದಿದ್ದರಿಂದ ಈ ರೀತಿಯಾಗಿದೆ ಎನ್ನುವುದು ಸಾರ್ವಜನಿಕರ ಆರೋಪ.

ಜನನಿಬಿಡ ಪ್ರದೇಶ ಹಾಗೂ ವಿಧಾನ ಪರಿಷತ್‌ ಸದಸ್ಯ ಅಡಗೂರು ಹೆಚ್.ವಿಶ್ವನಾಥ್ ಅವರ ಮನೆಗೆ ಅನತಿ ದೂರದಲ್ಲಿರುವ ರಸ್ತೆಗೆ ಹೊಂದಿಕೊಂಡಂತೆ ಇರುವ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಬಿಇಒ ಕಚೇರಿ ಎದುರು ರಸ್ತೆಯಲ್ಲಿ ಮ್ಯಾನ್ ಹೋಲ್‌ಗಳಲ್ಲಿ ತುಂಬಿ ಹರಿಯುತ್ತಿದ್ದರೂ ಪುರಸಭೆ ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರು ಅದೇ ಕೊಳಚೆ ನೀರಿನಲ್ಲಿ ಓಡಾಡುವ ಅನಿವಾರ್ಯತೆ ನಿರ್ಮಾಣವಾಗಿದೆ. ಕಳೆದ 4-5 ದಿನಗಳಿಂದ ಒಳ ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದರೂ ಮ್ಯಾನ್‌ಹೋಲ್ ದುರಸ್ತಿಗೊಳಿಸುವ ಗೋಜಿಗೆ ಹೋಗದೇ ಪಟ್ಟಣದ ಪುರಸಭೆ ಕಣ್ಣುಚ್ಚಿ ಕುಳಿತಿದೆ ಎಂದು ಜನರು ದೂರಿದ್ದಾರೆ.

ಬೇಸಿಗೆಯಲ್ಲಿ ಮ್ಯಾನ್ ಹೋಲ್‌ಗಳನ್ನು ದುರಸ್ತಿ ಮಾಡಿದ್ದರೆ ಹೀಗಾಗುತ್ತಿರಲಿಲ್ಲ. ಈ ಪರಿಸ್ಥಿತಿ ಪುರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಉಂಟಾಗಿದೆ. ರಸ್ತೆಯ ಮಧ್ಯಭಾಗದಲ್ಲಿ ಒಳಚರಂಡಿ ನೀರು ತುಂಬಿಹರಿಯುತ್ತಿದೆ. ಆದರೆ ಪುರಸಭೆಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮಳೆಗಾಲಕ್ಕೂ ಮುನ್ನವೇ ಇಂತಹ ಮ್ಯಾನ್‌ಹೋಲ್‌ಗಳ ಪೈಪ್‌ಲೈನ್‌ ದುರಸ್ತಿ ಮಾಡಬೇಕಿತ್ತು. ಆಗ ಪುರಸಭೆ ಗಮನ ಹರಿಸಲಿಲ್ಲ. ಇತ್ತೀಚೆಗೆ ನಿರಂತರ ಮಳೆಯಾದ ಪರಿಣಾಮ ಪ್ರಮುಖ ಪ್ರದೇಶದಲ್ಲಿನ ಒಳಚರಂಡಿ ಮ್ಯಾನ್
ಹೋಲ್‌ಗಳು ತುಂಬಿಕೊಂಡಿವೆ.
-ಆಸಿಫ್ ಪಾಷ, ಬೈಕ್ ಮೆಕ್ಯಾನಿಕ್

ಪಟ್ಟಣದಲ್ಲಿ ಐದಾರು ಬಡಾವಣೆಗಳಲ್ಲಿ ಮಳೆ ಬಂದರೆ ಚರಂಡಿ ನೀರು ತುಂಬಿ ಮ್ಯಾನ್ ಹೋಲ್ ಮುಚ್ಚಳಗಳು ತೆರೆದು ರಸ್ತೆಯಲ್ಲಿ ನೀರು ಹರಿಯುತ್ತದೆ. ಪುರಸಭೆ ಸಿಬ್ಬಂದಿ ಇವುಗಳನ್ನು ಮುಚ್ಚಿ ಸರಿಪಡಿಸುವ ಕೆಲಸ ಮಾಡುತ್ತಿದ್ದು, ಕೆಲವು ಕಡೆಗಳಲ್ಲಿ ಪೈಪ್ ಲೈನ್ ಒಡೆದಿರುವುದರಿಂದ ಹೊಸದಾಗಿ ಪೈಪ್ ಲೈನ್ ಅಳವಡಿಸಲಾಗಿದೆ.
-ಹೇಮಂತ್‌ ಕುಮಾರ್ ಡೊಳ್ಳೆ, ಮುಖ್ಯಾಧಿಕಾರಿ, ಪುರಸಭೆ

ಭೇರ್ಯ ಮಹೇಶ್

ಮೂಲತಃ ಕೆ.ಆರ್.ನಗರ ತಾಲ್ಲೂಕಿನ ಭೇರ್ಯ ಸಮೀಪದ ಬಟಿಗನಹಳ್ಳಿ ಗ್ರಾಮದವನಾದ ನಾನು ಭೇರ್ಯ ಗ್ರಾಮದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಮುಗಿಸಿ ಹೊಸ ಅಗ್ರಹಾರದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದೇನೆ. 2002 ಹಾಗೂ 2004ರಲ್ಲಿ ಪತ್ರಿಕೋದ್ಯಮ ತರಬೇತಿ ಪಡೆದಿದ್ದೇನೆ. 1992ರಿಂದ ಆಂದೋಲನ ಮತ್ತು ಮೈಸೂರು ಮಿತ್ರ ಸೇರಿದಂತೆ ಪತ್ರಿಕಾ ಛಾಯಾಗ್ರಾಹಕನಾಗಿ ಕೆಲಸ ಮಾಡಿದ್ದು, 2000ರಲ್ಲಿ ಪ್ರಜಾನುಡಿ ದಿನ ಪತ್ರಿಕೆಯ ಕೆ.ಆರ್.ನಗರ ತಾಲ್ಲೂಕು ಗ್ರಾಮಾಂತರ ವರದಿಗಾರನಾಗಿ ತದ ನಂತರ ಆಂದೋಲನ ಮತ್ತು ಕನ್ನಡ ಪ್ರಭ ಪತ್ರಿಕೆಯ ತಾಲ್ಲೂಕು ಗ್ರಾಮಾಂತರ ಮತ್ತು ಭೇರ್ಯ ಗ್ರಾಮದ ವರದಿಗಾರನಾಗಿ ಕಾರ್ಯನಿರ್ವಹಿಸಿ ಪ್ರಸ್ತುತ 2021ರಿಂದ ಕೆ.ಆರ್.ನಗರ ತಾಲ್ಲೂಕು ಆಂದೋಲನ ಪತ್ರಿಕೆಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

11 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

11 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

11 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

11 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

12 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

12 hours ago