ಚಿಕ್ಕಹಳ್ಳಿ ಗ್ರಾಮದ ರಸ್ತೆಯಲ್ಲಿ ಅವ್ಯವಸ್ಥೆ; ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಲು ಆಗ್ರಹ
ಎಂ. ನಾರಾಯಣ
ತಿ.ನರಸೀಪುರ: ವರುಣ ವಿಧಾನಸಭಾ ಕ್ಷೇತ್ರದ ಚಿಕ್ಕಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಗೆ ಗ್ರಾಮದ ಚರಂಡಿ ನೀರು ರಸ್ತೆಗೆ ಹರಿದು ಬರುತ್ತಿದ್ದು ಅಪಘಾತಗಳು ಸಂಭವಿಸುವ ಅಪಾಯವಿದೆ.
ಜತೆಗೆ ಈ ರಸ್ತೆಯಲ್ಲಿ ಅತಿಯಾದ ವಾಹನ ಸಂಚಾರ ಇರುವುದರಿಂದ ಪಾದಚಾರಿಗಳು, ಶಾಲಾ ಮಕ್ಕಳು ವಾಹನಗಳು ಹಾದುಹೋದಾಗ ಚಿಮ್ಮುವ ಚರಂಡಿ ನೀರಿನ ಪ್ರೋಕ್ಷಣೆಯನ್ನೂ ಮಾಡಿಸಿಕೊಳ್ಳಬೇಕಾಗಿದೆ.
ಚಿಕ್ಕಹಳ್ಳಿ ಗ್ರಾಮದ ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತೆ ಸ್ಥಳೀಯ ಗ್ರಾಮ ಪಂಚಾಯಿತಿ ವ್ಯವಸ್ಥೆ ಮಾಡದ ಕಾರಣ ಮುಖ್ಯರಸ್ತೆಗೆ ನೀರು ಹರಿದು ಬಂದು ನಿಂತಿದೆ.
ಅತಿಯಾದ ನೀರು ಬಂದಾಗ ರಸ್ತೆ ಮೇಲೆ ಹರಿಯುತ್ತದೆ. ಇದರಿಂದ ವಾಹನಗಳು ಸಂಚರಿಸಿದಾಗ ಪಾದಚಾರಿ ಗಳು, ಶಾಲಾ ಮಕ್ಕಳು ಹಾಗೂ ದ್ವಿಚಕ್ರ ವಾಹನಗಳ ಸವಾರರಿಗೆ ಚರಂಡಿ ನೀರಿನ ಪ್ರೋಕ್ಷಣೆಯಾಗುತ್ತಿದೆ.
ಅಲ್ಲದೆ ನಿಂತ ಚರಂಡಿ ನೀರಿನಿಂದಾಗಿ ರಸ್ತೆಯ ಆಸುಪಾಸಿನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯೂ ಎದುರಾಗಿದೆ.
ರಾಷ್ಟ್ರೀಯ ಹೆದ್ದಾರಿಯಾಗಿರು ವುದರಿಂದ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆ ಮೇಲೆ ಚರಂಡಿ ನೀರು ಹರಿಯಲು ಆರಂಭಿಸಿದರೆ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿದೆ.
ಆದ್ದರಿಂದ ಸ್ಥಳೀಯ ಗ್ರಾಮ ಪಂಚಾಯಿತಿ ಕೂಡಲೇ ಗಮನ ಹರಿಸಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವ ಮೂಲಕ ಸಂಭವನೀಯ ಅಪಾಯ ವನ್ನು ತಪ್ಪಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.
ವರುಣ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಚಿಕ್ಕಹಳ್ಳಿ ಗ್ರಾಮ ಒಳಪಟ್ಟಿದ್ದು, ಈ ಸಮಸ್ಯೆ ಬಗ್ಗೆ ಈಗಾಗಲೇ ರಾಮನಗರದ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದವರಿಗೆ ಪತ್ರ ಬರೆಯಲಾಗಿದೆ. ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಜರುಗಿಸಬೇಕಿದೆ. -ಕುಮಾರ್ ಆರಾಧ್ಯ, ಪಿಡಿಒ, ವರುಣ ಗ್ರಾಪಂ.
ಕಳೆದ ಆರು ತಿಂಗಳಿಂದ ಈ ಸಮಸ್ಯೆ ಉಂಟಾಗಿದ್ದು, ನಾವು ರಸ್ತೆಯಲ್ಲಿ ನಡೆದುಕೊಂಡು ಹೋದರೆ ವಾಹನಗಳು ಚಲಿಸಿದಾಗ ಚರಂಡಿ ನೀರು ನಮ್ಮ ಮೇಲೆ ಎರಚಲ್ಪ ಡುತ್ತದೆ. ಸ್ಥಳೀಯ ಗ್ರಾಮ ಪಂಚಾಯಿತಿಯವರ ನಿರ್ಲಕ್ಷ್ಯ ದಿಂದ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಇಂತಹ ಸಮಸ್ಯೆ ಎದುರಾಗಿದೆ, ಅನಾಹುತಗಳು ಉಂಟಾಗುವ ಮುನ್ನ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು, -ಎಸ್. ಹೊಸಕೋಟೆ ರಘು, ರೈತ ಸಂಘದ ಜಿಲ್ಲಾ ಮುಖಂq
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…