Andolana originals

ಹೆದ್ದಾರಿಯಲ್ಲಿ ಹರಿಯುವ ಚರಂಡಿ ನೀರು; ವಾಹನ ಸವಾರರಲ್ಲಿ ಭೀತಿ

ಚಿಕ್ಕಹಳ್ಳಿ ಗ್ರಾಮದ ರಸ್ತೆಯಲ್ಲಿ ಅವ್ಯವಸ್ಥೆ; ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಲು ಆಗ್ರಹ
ಎಂ. ನಾರಾಯಣ

ತಿ.ನರಸೀಪುರ: ವರುಣ ವಿಧಾನಸಭಾ ಕ್ಷೇತ್ರದ ಚಿಕ್ಕಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಗೆ ಗ್ರಾಮದ ಚರಂಡಿ ನೀರು ರಸ್ತೆಗೆ ಹರಿದು ಬರುತ್ತಿದ್ದು ಅಪಘಾತಗಳು ಸಂಭವಿಸುವ ಅಪಾಯವಿದೆ.

ಜತೆಗೆ ಈ ರಸ್ತೆಯಲ್ಲಿ ಅತಿಯಾದ ವಾಹನ ಸಂಚಾರ ಇರುವುದರಿಂದ ಪಾದಚಾರಿಗಳು, ಶಾಲಾ ಮಕ್ಕಳು ವಾಹನಗಳು ಹಾದುಹೋದಾಗ ಚಿಮ್ಮುವ ಚರಂಡಿ ನೀರಿನ ಪ್ರೋಕ್ಷಣೆಯನ್ನೂ ಮಾಡಿಸಿಕೊಳ್ಳಬೇಕಾಗಿದೆ.

ಚಿಕ್ಕಹಳ್ಳಿ ಗ್ರಾಮದ ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತೆ ಸ್ಥಳೀಯ ಗ್ರಾಮ ಪಂಚಾಯಿತಿ ವ್ಯವಸ್ಥೆ ಮಾಡದ ಕಾರಣ ಮುಖ್ಯರಸ್ತೆಗೆ ನೀರು ಹರಿದು ಬಂದು ನಿಂತಿದೆ.

ಅತಿಯಾದ ನೀರು ಬಂದಾಗ ರಸ್ತೆ ಮೇಲೆ ಹರಿಯುತ್ತದೆ. ಇದರಿಂದ ವಾಹನಗಳು ಸಂಚರಿಸಿದಾಗ ಪಾದಚಾರಿ ಗಳು, ಶಾಲಾ ಮಕ್ಕಳು ಹಾಗೂ ದ್ವಿಚಕ್ರ ವಾಹನಗಳ ಸವಾರರಿಗೆ ಚರಂಡಿ ನೀರಿನ ಪ್ರೋಕ್ಷಣೆಯಾಗುತ್ತಿದೆ.

ಅಲ್ಲದೆ ನಿಂತ ಚರಂಡಿ ನೀರಿನಿಂದಾಗಿ ರಸ್ತೆಯ ಆಸುಪಾಸಿನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯೂ ಎದುರಾಗಿದೆ.

ರಾಷ್ಟ್ರೀಯ ಹೆದ್ದಾರಿಯಾಗಿರು ವುದರಿಂದ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆ ಮೇಲೆ ಚರಂಡಿ ನೀರು ಹರಿಯಲು ಆರಂಭಿಸಿದರೆ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿದೆ.

ಆದ್ದರಿಂದ ಸ್ಥಳೀಯ ಗ್ರಾಮ ಪಂಚಾಯಿತಿ ಕೂಡಲೇ ಗಮನ ಹರಿಸಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವ ಮೂಲಕ ಸಂಭವನೀಯ ಅಪಾಯ ವನ್ನು ತಪ್ಪಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ವರುಣ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಚಿಕ್ಕಹಳ್ಳಿ ಗ್ರಾಮ ಒಳಪಟ್ಟಿದ್ದು, ಈ ಸಮಸ್ಯೆ ಬಗ್ಗೆ ಈಗಾಗಲೇ ರಾಮನಗರದ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದವರಿಗೆ ಪತ್ರ ಬರೆಯಲಾಗಿದೆ. ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಜರುಗಿಸಬೇಕಿದೆ. -ಕುಮಾರ್ ಆರಾಧ್ಯ, ಪಿಡಿಒ, ವರುಣ ಗ್ರಾಪಂ.

ಕಳೆದ ಆರು ತಿಂಗಳಿಂದ ಈ ಸಮಸ್ಯೆ ಉಂಟಾಗಿದ್ದು, ನಾವು ರಸ್ತೆಯಲ್ಲಿ ನಡೆದುಕೊಂಡು ಹೋದರೆ ವಾಹನಗಳು ಚಲಿಸಿದಾಗ ಚರಂಡಿ ನೀರು ನಮ್ಮ ಮೇಲೆ ಎರಚಲ್ಪ ಡುತ್ತದೆ. ಸ್ಥಳೀಯ ಗ್ರಾಮ ಪಂಚಾಯಿತಿಯವರ ನಿರ್ಲಕ್ಷ್ಯ ದಿಂದ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಇಂತಹ ಸಮಸ್ಯೆ ಎದುರಾಗಿದೆ, ಅನಾಹುತಗಳು ಉಂಟಾಗುವ ಮುನ್ನ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು, -ಎಸ್. ಹೊಸಕೋಟೆ ರಘು, ರೈತ ಸಂಘದ ಜಿಲ್ಲಾ ಮುಖಂq

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago