ಓದುಗರ ಪತ್ರ
ಪಾರಂಪರಿಕ ನಗರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ನಿತ್ಯ ಭೇಟಿ ನೀಡುವ ಭಕ್ತರು, ದೇಶ ಹಾಗೂ ವಿದೇಶಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಾರಿಯ ಆಷಾಢ ಮಾಸದಲ್ಲಂತೂ ಅತಿ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ. ಧಾರ್ಮಿಕ ಕ್ಷೇತ್ರಗಳಿಗೆ ಜನರು ಬಂದಾಗ ವಸ್ತ್ರ ಸಂಹಿತೆ ಪಾಲಿಸಬೇಕು.
ಧಾರ್ಮಿಕ ಕ್ಷೇತ್ರಗಳಿಗೆ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗ ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಹೇಳಿದ್ದಾರೆ. ಹಾಗಾಗಿ ಚಾಮುಂಡಿ ಬೆಟ್ಟದ ದೇವಸ್ಥಾನದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು. ಇದರಿಂದ ಶ್ರದ್ಧೆಯಿಂದ ಬರುವ ಇತರರಿಗೆ ಆಗುವ ಕಿರಿ ಕಿರಿಯೂ ತಪ್ಪುತ್ತದೆ. ತಿರುಪತಿ ತಿರುಮಲ ದೇವಸ್ಥಾನದ ಮಾದರಿಯಲ್ಲಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧಿಸಬೇಕು.
ಇತ್ತೀಚೆಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೆಯೋ ಚಾಮುಂಡೇಶ್ವರಿ ದೇವಿಯ ಮೂಲ ವಿಗ್ರಹದ ವೀಡಿಯೊ ಮಾಡುತ್ತಿದ್ದಾರೆ, ಇದು ಸರಿಯೇ ಎಂದು ಅವರು ಹೇಳಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ.
-ಸಿದ್ದಲಿಂಗೇಗೌಡ. ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…