ಓದುಗರ ಪತ್ರ
ಪಾರಂಪರಿಕ ನಗರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ನಿತ್ಯ ಭೇಟಿ ನೀಡುವ ಭಕ್ತರು, ದೇಶ ಹಾಗೂ ವಿದೇಶಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಾರಿಯ ಆಷಾಢ ಮಾಸದಲ್ಲಂತೂ ಅತಿ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ. ಧಾರ್ಮಿಕ ಕ್ಷೇತ್ರಗಳಿಗೆ ಜನರು ಬಂದಾಗ ವಸ್ತ್ರ ಸಂಹಿತೆ ಪಾಲಿಸಬೇಕು.
ಧಾರ್ಮಿಕ ಕ್ಷೇತ್ರಗಳಿಗೆ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗ ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಹೇಳಿದ್ದಾರೆ. ಹಾಗಾಗಿ ಚಾಮುಂಡಿ ಬೆಟ್ಟದ ದೇವಸ್ಥಾನದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು. ಇದರಿಂದ ಶ್ರದ್ಧೆಯಿಂದ ಬರುವ ಇತರರಿಗೆ ಆಗುವ ಕಿರಿ ಕಿರಿಯೂ ತಪ್ಪುತ್ತದೆ. ತಿರುಪತಿ ತಿರುಮಲ ದೇವಸ್ಥಾನದ ಮಾದರಿಯಲ್ಲಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧಿಸಬೇಕು.
ಇತ್ತೀಚೆಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೆಯೋ ಚಾಮುಂಡೇಶ್ವರಿ ದೇವಿಯ ಮೂಲ ವಿಗ್ರಹದ ವೀಡಿಯೊ ಮಾಡುತ್ತಿದ್ದಾರೆ, ಇದು ಸರಿಯೇ ಎಂದು ಅವರು ಹೇಳಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ.
-ಸಿದ್ದಲಿಂಗೇಗೌಡ. ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…