Andolana originals

ಚರಂಡಿ ಕಾಮಗಾರಿ: ೪೫ ದಿನ ರಸ್ತೆ ಸಂಚಾರ ಬಂದ್

ಸಾಲೋಮನ್

ಆದಷ್ಟು ಬೇಗ ಕಾಮಗಾರಿಗಳನ್ನು ಮುಗಿಸಲು ಪ್ರಯತ್ನಿಸುತ್ತೇವೆ: ಇಇ ಸಿಂಧು

ಮೈಸೂರು: ನಗರದ ರಾಮಾನುಜ ರಸ್ತೆ ಹಾಗೂ ಎಂ.ಜಿ.ರಸ್ತೆ ಸಂಧಿಸುವ ಪಾತಾಳ ಆಂಜನೇಯ ಸ್ವಾಮಿ ದೇವಾಲಯದ ಸಮೀಪದ ವೃತ್ತದಲ್ಲಿ ಡೆಕ್‌ಗಳು ಹಾಗೂ ಆ ಮಾರ್ಗದ ಚರಂಡಿ ಕಾಮಗಾರಿ ಆರಂಭವಾಗಿ ೧೫ ದಿನಗಳಾಗಿದ್ದು, ಅಗ್ರಹಾರ ವೃತ್ತದಿಂದ ಜೆಎಸ್‌ಎಸ್ ಆಸ್ಪತ್ರೆಯ ಕಡೆ ಹೋಗುವ ಎಂ.ಜಿ. ರಸ್ತೆ ಬಂದ್ ಆಗಿದೆ. ಈ ಮಾರ್ಗದಲ್ಲಿ ಸಾರ್ವಜನಿಕರ ಸಂಚಾರವನ್ನು ಕಳೆದ ೧೫ ದಿನಗಳಿಂದ ನಿಲ್ಲಿಸಲಾಗಿದೆ.

ಇದರಿಂದ ಮುಖ್ಯವಾಗಿ ಜೆಎಸ್‌ಎಸ್ ಆಸ್ಪತ್ರೆಗೆ ಹೋಗಲು ಸಾರ್ವಜನಿಕರು ಭಾರೀ ತೊಂದರೆ ಅನುಭವಿಸುತ್ತಿzರೆ. ರಾಮಾನುಜ ರಸ್ತೆ, ಅಗ್ರಹಾರ ವೃತ್ತದಿಂದ ಹಾಗೂ ಶಂಕರ ಮಠದ ವೃತ್ತದಿಂದ ಎಂ.ಜಿ.ರಸ್ತೆ ಕಡೆಗೆ ಬರುವ ಮಾರ್ಗ ಸಂಪೂರ್ಣ ಬಂದ್ ಆಗಿರುವುದರಿಂದ ಸಾರ್ವಜನಿಕರು ಅನಿ ವಾರ್ಯ ವಾಗಿ ಬೇರೆ ಮಾರ್ಗಗಳಲ್ಲಿ ಹೋಗಬೇಕಾಗಿರು ವುದರಿಂದ ಬೇಸರ ವ್ಯಕ್ತ ಪಡಿಸಿದ್ದಾರೆ.

ಹದಿನೈದು ದಿನಗಳ ಹಿಂದೆ ಮೈಸೂರು ಮಹಾನಗರ ಪಾಲಿಕೆ ಈ ರಸ್ತೆಯಲ್ಲಿ ಚರಂಡಿ ಹಾಗೂ ಡೆಕ್ ನಿರ್ಮಾಣ ಕಾಮಗಾರಿ ಆರಂಭಿಸಿದೆ. ಈ ಹಿಂದೆ ಈ ಮಾರ್ಗದಲ್ಲಿ ಒಳಚರಂಡಿ ಪೈಪ್‌ಗಳನ್ನು ಅಳವಡಿಸಿ ರಸ್ತೆಯ ಡಾಂಬರೀಕರಣವನ್ನೂ ಮಾಡ ಲಾಗಿತ್ತು.

ಆದರೆ ಈ ಭಾಗದ ಮೂರು ಡೆಕ್‌ಗಳು ಕುಸಿದಿದ್ದು, ಚರಂಡಿ ನೀರು ಸರಾಗವಾಗಿ ಹರಿಯದೆ ಮಳೆ ಬಂದಾಗ ನೀರು ರಸ್ತೆಯಲ್ಲಿ ಹರಿಯುವುದು ಹಾಗೂ ರಸ್ತೆ ಮೇಲೆ ನಿಲ್ಲುತ್ತಿರುವುದರಿಂದ ರಸ್ತೆಯೂ ಹಾಳಾಗುತ್ತಿತ್ತು. ಅಲ್ಲದೇ ನೀರು ನಿಲ್ಲುವುದರಿಂದ ಸಾರ್ವಜನಿಕರಿಗೂ ಬಹಳ ತೊಂದರೆ ಆಗುತ್ತಿತ್ತು.

ಈ ಸಮಸ್ಯೆ ಬಗೆಹರಿಸಲು ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯ ಬೇಕಿರುವುದರಿಂದ ದುರಸ್ತಿ ಕಾಮಗಾರಿ ಮಾಡಲಾಗುತ್ತಿದೆ.

ಮೂರು ಡೆಕ್‌ಗಳನ್ನು ನಿರ್ಮಾಣ ಮಾಡುವ ಮುಂಚೆ ಚರಂಡಿಗಳ ಸೈಡ್ ವಾಲ್‌ಗಳನ್ನು ಕಟ್ಟಲಾಗುತ್ತಿದೆ. ಇದರ ಕಾಮಗಾರಿ ಪೂರ್ಣವಾದ ನಂತರವೇ ರಸ್ತೆಯಲ್ಲಿ ಸಾರ್ವಜನಿಕರಿಗೆ ಓಡಾಡಲು ಅವಕಾಶ ಸಿಗಲಿದೆ. ಡೆಕ್ ಹಾಗೂ ಚರಂಡಿಗಳಿಗೆ ಕಾಂಕ್ರೀಟ್ ಹಾಕಿದ ನಂತರ ಕನಿಷ್ಠ ಒಂದು ತಿಂಗಳು ಕ್ಯೂರಿಂಗ್ ಆಗಬೇಕಿರುವುದರಿಂದ ಈ ಮಾರ್ಗ ಇನ್ನೂ ಒಂದೂವರೆ ತಿಂಗಳು ಸಾರ್ವಜನಿಕರಿಗೆ ಬಂದ್ ಆಗುವುದು ಖಚಿತವಾಗಿದೆ.

ವಿಜಯ ಬ್ಯಾಂಕ್ ವೃತ್ತ ಕಾಮಗಾರಿಗೂ ಬೇಕು ಸಮಯ: 

ಮೈಸೂರು: ಕುವೆಂಪು ನಗರದ ಅಕ್ಷಯ ಭಂಡಾರ್ ರಸ್ತೆ ಮಾರ್ಗವಾಗಿ ವಿಜಯ ಬ್ಯಾಂಕ್ ವೃತ್ತದ ಮೂಲಕ ರಾಮಕೃಷ್ಣನಗರ, ಜನತಾನಗರ, ಶಾರದಾ ದೇವಿನಗರ ಮುಂತಾದ ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗವೂ ಬಂದ್ ಆಗಿದೆ. ಇಲ್ಲಿ ವೃತ್ತ ಅಭಿವೃದ್ಧಿ ಮಾಡಲು ಪಾಲಿಕೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ವೃತ್ತದ ಸುತ್ತಲೂ ಒಳಚರಂಡಿ, ನೀರಿನ ಪೈಪ್, ಕೇಬಲ್‌ಗಳನ್ನು ಅಳವಡಿಸುವುದು ಮತ್ತು ಡೆಕ್‌ಗಳ ನಿರ್ಮಾಣ ಕಾಮಗಾರಿ ಈಗ ಆರಂಭ ವಾಗಿದೆ.

ಇದರ ನಂತರ ವೃತ್ತದ ಅಭಿವೃದ್ಧಿ ಕಾಮಗಾರಿಯೂ ಆರಂಭವಾಗಲಿದೆ. ಸದ್ಯಕ್ಕೆ ಈ ಭಾಗದಲ್ಲಿ ವಿಶ್ವ ಮಾನವ ಜೋಡಿ ರಸ್ತೆಯ ಒಂದು ಭಾಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ.

ಆದಷ್ಟು ಬೇಗ ಕಾಮಗಾರಿ ಮುಗಿಸುತ್ತೇವೆ: 

ಮೈಸೂರು: ಈ ಪ್ರಾಜೆಕ್ಟ್‌ಗೆ ದಸರಾಗೂ ಮುಂಚೆಯೇ ಅನುಮೋದನೆ ಸಿಕ್ಕಿತ್ತು. ಆದರೆ, ದಸರಾ ಮುಗಿದ ನಂತರ ಆರಂಭಿಸಲು ತೀರ್ಮಾನಿಸಲಾಯಿತು. ಆಗ ಮಳೆ ಹೆಚ್ಚಾಗಿದ್ದರಿಂದ ಕಾಮಗಾರಿ ಆರಂಭಿಸಲು ಸಾಧ್ಯವಾಗಲಿಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಇಇ ಕೆ.ಜೆ.ಸಿಂಧು ತಿಳಿಸಿದ್ದಾರೆ. ಈಗ ಮಳೆ ನಿಂತಿರುವುದರಿಂದ ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ಕಾಂಕ್ರೀಟ್ ಕೆಲಸ ಆಗಿರುವುದರಿಂದ ಕನಿಷ್ಠ ಎರಡು ತಿಂಗಳುಗಳು ಆಗುತ್ತದೆ. ಈಗಾಗಲೇ ೧೫ ದಿನಗಳಿಂದ ಕೆಲಸ ನಡೆಯುತ್ತಿದೆ. ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿರುವುದು ನಮಗೂ ಗೊತ್ತಾಗಿದೆ, ಆದರೂ ಇದು ಅನಿವಾರ್ಯ ಆಗಿರುವುದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ಕೋರುತ್ತೇನೆ. ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

3 hours ago