ಓದುಗರ ಪತ್ರ
ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ಅಡಳಿತ ಸೌಧದದಲ್ಲಿರುವ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳಿಗೆ ಹಿರಿಯ ನಾಗರಿಕರು, ವಿಶೇಷ ಚೇತನರು, ಸಾರ್ವಜನಿ ಕರು ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಬರುತ್ತಾರೆ. ಆದರೆ ಇಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇಲ್ಲ. ಹಾಗಾಗಿ ಕಚೇರಿ ಆವರಣದಲ್ಲಿರುವ ಮರ ಗಿಡಗಳ ಕೆಳಗೆ ಅಥವಾ ಖಾಲಿ ಜಾಗವನ್ನು ಆಶ್ರಯಿಸುತ್ತಾರೆ.
ಮಳೆಗಾಲ ಮತ್ತು ಬೇಸಿಗೆಯ ಬಿಸಿಲಿನ ಸಂದರ್ಭದಲ್ಲಿ ಜನರಿಗೆ ಬಹಳ ತೊಂದರೆ ಉಂಟಾ ಗುತ್ತಿದೆ. ಬಿಪಿ,ಶುಗರ್ ಇನ್ನಿತರ ಕಾಯಿಲೆಗಳಿರುವವರೂ ಕೂಡ ಕಚೇರಿ ಕೆಲಸಕ್ಕೆ ಬರುತ್ತಾರೆ. ಕೆಲವೊಮ್ಮೆ ಕೆಲಸ- ಕಾರ್ಯಗಳು ಆಗುವುದು ತಡವಾದಾಗ ಇಂಥವರು ಸುಸ್ತಾಗಿ ಕುಸಿದು ಬಿದ್ದಿರುವ ಘಟನೆಗಳೂ ನಡೆದಿವೆ. ಆದ್ದರಿಂದ ಕಚೇರಿ ಆವರಣದಲ್ಲಿ ಕಚೇರಿ ಕೆಲಸಗಳಿಗೆ ಬಂದು ಕಾಯುವ ಸಾರ್ವಜನಿಕರಿಗೆ ಕೂರಲು ಅನುಕೂಲವಾಗುವಂತೆ ಆಸನ ವ್ಯವಸ್ಥೆ ಮಾಡಿಕೊಡಬೇಕು, ಜೊತೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಗಳು, ಜನಪ್ರತಿನಿಽಗಳು ಗಮನ ಹರಿಸಬೇಕಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾಲ್ಲೂಕು
ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…
ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…
ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಸಿಯುನ ಉಸ್ತುವಾರಿ ವೈದ್ಯರು…
ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…