ಓದುಗರ ಪತ್ರ
ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ಅಡಳಿತ ಸೌಧದದಲ್ಲಿರುವ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳಿಗೆ ಹಿರಿಯ ನಾಗರಿಕರು, ವಿಶೇಷ ಚೇತನರು, ಸಾರ್ವಜನಿ ಕರು ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಬರುತ್ತಾರೆ. ಆದರೆ ಇಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇಲ್ಲ. ಹಾಗಾಗಿ ಕಚೇರಿ ಆವರಣದಲ್ಲಿರುವ ಮರ ಗಿಡಗಳ ಕೆಳಗೆ ಅಥವಾ ಖಾಲಿ ಜಾಗವನ್ನು ಆಶ್ರಯಿಸುತ್ತಾರೆ.
ಮಳೆಗಾಲ ಮತ್ತು ಬೇಸಿಗೆಯ ಬಿಸಿಲಿನ ಸಂದರ್ಭದಲ್ಲಿ ಜನರಿಗೆ ಬಹಳ ತೊಂದರೆ ಉಂಟಾ ಗುತ್ತಿದೆ. ಬಿಪಿ,ಶುಗರ್ ಇನ್ನಿತರ ಕಾಯಿಲೆಗಳಿರುವವರೂ ಕೂಡ ಕಚೇರಿ ಕೆಲಸಕ್ಕೆ ಬರುತ್ತಾರೆ. ಕೆಲವೊಮ್ಮೆ ಕೆಲಸ- ಕಾರ್ಯಗಳು ಆಗುವುದು ತಡವಾದಾಗ ಇಂಥವರು ಸುಸ್ತಾಗಿ ಕುಸಿದು ಬಿದ್ದಿರುವ ಘಟನೆಗಳೂ ನಡೆದಿವೆ. ಆದ್ದರಿಂದ ಕಚೇರಿ ಆವರಣದಲ್ಲಿ ಕಚೇರಿ ಕೆಲಸಗಳಿಗೆ ಬಂದು ಕಾಯುವ ಸಾರ್ವಜನಿಕರಿಗೆ ಕೂರಲು ಅನುಕೂಲವಾಗುವಂತೆ ಆಸನ ವ್ಯವಸ್ಥೆ ಮಾಡಿಕೊಡಬೇಕು, ಜೊತೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಗಳು, ಜನಪ್ರತಿನಿಽಗಳು ಗಮನ ಹರಿಸಬೇಕಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾಲ್ಲೂಕು
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…