ಓದುಗರ ಪತ್ರ
ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ಅಡಳಿತ ಸೌಧದದಲ್ಲಿರುವ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳಿಗೆ ಹಿರಿಯ ನಾಗರಿಕರು, ವಿಶೇಷ ಚೇತನರು, ಸಾರ್ವಜನಿ ಕರು ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಬರುತ್ತಾರೆ. ಆದರೆ ಇಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇಲ್ಲ. ಹಾಗಾಗಿ ಕಚೇರಿ ಆವರಣದಲ್ಲಿರುವ ಮರ ಗಿಡಗಳ ಕೆಳಗೆ ಅಥವಾ ಖಾಲಿ ಜಾಗವನ್ನು ಆಶ್ರಯಿಸುತ್ತಾರೆ.
ಮಳೆಗಾಲ ಮತ್ತು ಬೇಸಿಗೆಯ ಬಿಸಿಲಿನ ಸಂದರ್ಭದಲ್ಲಿ ಜನರಿಗೆ ಬಹಳ ತೊಂದರೆ ಉಂಟಾ ಗುತ್ತಿದೆ. ಬಿಪಿ,ಶುಗರ್ ಇನ್ನಿತರ ಕಾಯಿಲೆಗಳಿರುವವರೂ ಕೂಡ ಕಚೇರಿ ಕೆಲಸಕ್ಕೆ ಬರುತ್ತಾರೆ. ಕೆಲವೊಮ್ಮೆ ಕೆಲಸ- ಕಾರ್ಯಗಳು ಆಗುವುದು ತಡವಾದಾಗ ಇಂಥವರು ಸುಸ್ತಾಗಿ ಕುಸಿದು ಬಿದ್ದಿರುವ ಘಟನೆಗಳೂ ನಡೆದಿವೆ. ಆದ್ದರಿಂದ ಕಚೇರಿ ಆವರಣದಲ್ಲಿ ಕಚೇರಿ ಕೆಲಸಗಳಿಗೆ ಬಂದು ಕಾಯುವ ಸಾರ್ವಜನಿಕರಿಗೆ ಕೂರಲು ಅನುಕೂಲವಾಗುವಂತೆ ಆಸನ ವ್ಯವಸ್ಥೆ ಮಾಡಿಕೊಡಬೇಕು, ಜೊತೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಗಳು, ಜನಪ್ರತಿನಿಽಗಳು ಗಮನ ಹರಿಸಬೇಕಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾಲ್ಲೂಕು
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…