ಓದುಗರ ಪತ್ರ
ಮೈಸೂರು ನಗರದ ಜೆಎಲ್ಬಿ ರಸ್ತೆಯ ಪಂಚವಟಿ ಹೋಟೆಲ್ ಎದುರಿನ ಫುಟ್ ಪಾತ್ನಲ್ಲಿ ಹಾಗೂ ಲಕ್ಷ್ಮೀಪುರಂ ಪೊಲೀಸ್ ಠಾಣೆ ಮತ್ತು ಆರ್ಟಿಒ ಸರ್ಕಲ್ ಮಧ್ಯದ ಪುಟ್ ಪಾತ್ನಲ್ಲಿ ಸುಮಾರು ೧ ತಿಂಗಳಿನಿಂದ ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ. ಪೈಪ್ನಿಂದ ಹೊರ ಬಂದ ನೀರು ಫುಟ್ಪಾತ್ನಲ್ಲಿ ನಿರಂತರ ವಾಗಿ ಹರಿಯುವುದರಿಂದ ಪಾದಚಾರಿಗಳ ಓಡಾಟಕ್ಕೂ ತೊಂದರೆಯಾಗುತ್ತಿದೆ. ಒಂದು ತಿಂಗಳಿನಿಂದಲೂ ಈ ರೀತಿಅವ್ಯವಸ್ಥೆ ಉಂಟಾಗಿದ್ದರೂ ಸಂಬಂಧ ಮೈಸೂರು ಮಹಾನಗರ ಪಾಲಿಕೆ ಅಥವಾ ವಾಣಿವಿಲಾಸ ವಾಟರ್ ವರ್ಕ್ಸ್ನ ಅಧಿಕಾರಿಗಳು ಗಮನ ಹರಿಸದೇ ನಿರ್ಲಕ್ಷ್ಯವಹಿಸಿರುವುದು ಸರಿಯಲ್ಲ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಒಡೆದಿರುವ ಕುಡಿಯುವ ನೀರಿನ ಪೈಪ್ ಅನ್ನು ದುರಸ್ತಿಪಡಿಸಿ ನೀರು ಪೋಲಾಗುವುದನ್ನು ತಡೆಗಟ್ಟಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವರೇ ಕಾದು ನೋಡಬೇಕಿದೆ.
– ಮಂಜುನಾಥ ಹೆಗಡೆ, ೨ನೇ ಮುಖ್ಯ ರಸ್ತೆ, ಚಾಮುಂಡಿಪುರಂ, ಮೈಸೂರು
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…