ಓದುಗರ ಪತ್ರ
ಮೈಸೂರು ನಗರದ ಜೆಎಲ್ಬಿ ರಸ್ತೆಯ ಪಂಚವಟಿ ಹೋಟೆಲ್ ಎದುರಿನ ಫುಟ್ ಪಾತ್ನಲ್ಲಿ ಹಾಗೂ ಲಕ್ಷ್ಮೀಪುರಂ ಪೊಲೀಸ್ ಠಾಣೆ ಮತ್ತು ಆರ್ಟಿಒ ಸರ್ಕಲ್ ಮಧ್ಯದ ಪುಟ್ ಪಾತ್ನಲ್ಲಿ ಸುಮಾರು ೧ ತಿಂಗಳಿನಿಂದ ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ. ಪೈಪ್ನಿಂದ ಹೊರ ಬಂದ ನೀರು ಫುಟ್ಪಾತ್ನಲ್ಲಿ ನಿರಂತರ ವಾಗಿ ಹರಿಯುವುದರಿಂದ ಪಾದಚಾರಿಗಳ ಓಡಾಟಕ್ಕೂ ತೊಂದರೆಯಾಗುತ್ತಿದೆ. ಒಂದು ತಿಂಗಳಿನಿಂದಲೂ ಈ ರೀತಿಅವ್ಯವಸ್ಥೆ ಉಂಟಾಗಿದ್ದರೂ ಸಂಬಂಧ ಮೈಸೂರು ಮಹಾನಗರ ಪಾಲಿಕೆ ಅಥವಾ ವಾಣಿವಿಲಾಸ ವಾಟರ್ ವರ್ಕ್ಸ್ನ ಅಧಿಕಾರಿಗಳು ಗಮನ ಹರಿಸದೇ ನಿರ್ಲಕ್ಷ್ಯವಹಿಸಿರುವುದು ಸರಿಯಲ್ಲ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಒಡೆದಿರುವ ಕುಡಿಯುವ ನೀರಿನ ಪೈಪ್ ಅನ್ನು ದುರಸ್ತಿಪಡಿಸಿ ನೀರು ಪೋಲಾಗುವುದನ್ನು ತಡೆಗಟ್ಟಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವರೇ ಕಾದು ನೋಡಬೇಕಿದೆ.
– ಮಂಜುನಾಥ ಹೆಗಡೆ, ೨ನೇ ಮುಖ್ಯ ರಸ್ತೆ, ಚಾಮುಂಡಿಪುರಂ, ಮೈಸೂರು
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…