Andolana originals

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ೨ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪಟ್ಟಣ ಪಂಚಾಯಿತಿಯವರು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಉಪಯೋಗಕ್ಕೆ ಬಾರದಂತಾಗಿದೆ.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ವಾಡ್ನಲ್ಲೂ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲು ಉದ್ದೇಶಿಸಲಾಗಿತ್ತು. ಪ್ರಾರಂಭದಲ್ಲಿ ಪಟ್ಟಣ ಪಂಚಾಯಿತಿ ಖಾಸಗಿ ಬಸ್ ನಿಲ್ದಾಣದ ಸಮೀಪ ಶಾಸಕರ ಅನುದಾನದಲ್ಲಿ ೯ ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಯಿತು. ಪಟ್ಟಣಕ್ಕೆ ಬರುವ ಸಾರ್ವಜನಿಕರು, ಅಂಗಡಿ ಮಾಲೀಕರು, ಕೂಲಿ ಕಾರ್ಮಿಕರು ಇದರ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಂಡಿದ್ದರು. ಕೆಲವು ದಿನಗಳ ನಂತರ ಯಂತ್ರಗಳೆಲ್ಲ ಕೆಟ್ಟು ಹೋಗಿದ್ದವು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ನಂತರ ದುರಸ್ತಿ ಮಾಡಲಾಗಿದ್ದು, ಪಟ್ಟಣದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

ಕಳೆದ ಅವಧಿಯಲ್ಲಿ ಶಾಸಕರಾಗಿದ್ದ ಆರ್.ನರೇಂದ್ರ ಅವರು ೬ನೇ ವಾರ್ಡ್ ಮತ್ತು ೯ನೇ ವಾರ್ಡಿನ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ತಲಾ ೧೨ ಲಕ್ಷ ರೂ. ವೆಚ್ಚದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿಸಿ ಚಾಲನೆ ನೀಡಿದ್ದರು. ಕೆಲವು ದಿನಗಳ ನಂತರ ಸಮರ್ಪಕ ನಿರ್ವಹಣೆ ಮಾಡದೇ ಕೆಟ್ಟುಹೋಗಿವೆ.

ಇದಲ್ಲದೆ ಶುದ್ಧ ಕುಡಿಯುವ ನೀರಿನ ಘಟಕದ ಬಾಗಿಲಿನ ಗಾಜುಗಳನ್ನು ಯಾರೋ ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಆದರೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸಿಲ್ಲ, ಇದರಿಂದ ೨೪ ಲಕ್ಷ ರೂ. ಸಾರ್ವಜನಿಕರ ಹಣ ವ್ಯರ್ಥವಾಗಿದೆ.

ನಲ್ಲಿ ಹಾಗೂ ಕಾಯಿನ್ ಬಾಕ್ಸ್ ನಾಪತ್ತೆ: ೯ನೇ ವಾರ್ಡಿನಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ತುಂಬಿಸಿಕೊಳ್ಳಲು ಅಳವಡಿಸಲಾಗಿದ್ದ ಪೈಪ್ ಹಾಗೂ ೫ ರೂ. ನಾಣ್ಯ ಹಾಕಲು ಇಡಲಾಗಿದ್ದ ಕಾಯಿನ್ ಬಾಕ್ಸ್ ಕೂಡ ನಾಪತ್ತೆಯಾಗಿದೆ. ಸರ್ಕಾರದ ಆಸ್ತಿಯನ್ನು ಸಂರಕ್ಷಣೆ ಮಾಡಬೇಕಾದ ಹನೂರು ಪಟ್ಟಣ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಉಪಯೋಗಕ್ಕೆ ಬಾರ ದಂತಾಗಿದೆ. ಇದೀಗ ಬೇಸಿಗೆ ಪ್ರಾರಂಭವಾಗಿರುವುದರಿಂದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರಿನ ಅಗತ್ಯವಿದೆ. ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಮಾಡಿಸಬೇಕಿದೆ.

” ಹನೂರಿನ ೯ನೇ ವಾರ್ಡಿನಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ಗುಣಮಟ್ಟದಿಂದ ಕೂಡಿತ್ತು. ಇದು ಕೆಲವು ತಾಂತ್ರಿಕ ದೋಷಗಳಿಂದ ಕೆಟ್ಟಿದ್ದು, ನಂತರ ಇದನ್ನು ಅಧಿಕಾರಿಗಳು ದುರಸ್ತಿ ಮಾಡದೇ ಇರುವುದರಿಂದ ಉಪಯೋಗಕ್ಕೆ ಬಾರದಂತಾಗಿದೆ. ಬೇಸಿಗೆಕಾಲದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯಕತೆ ಇದೆ. ಪಟ್ಟಣ ಪಂಚಾಯಿತಿಯವರು ಇದನ್ನು ದುರಸ್ತಿ ಮಾಡಿದರೆ ಈ ಭಾಗದ ನಿವಾಸಿಗಳಿಗೆ ಅನುಕೂಲವಾಗಲಿದೆ.”

-ನಾಗೇಂದ್ರ, ೯ನೇ ವಾರ್ಡಿನ ನಿವಾಸಿ

” ಹನೂರು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪಟ್ಟಣ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಮಾಹಿತಿ ನೀಡುವಂತೆ ಅಭಿಯಂತರರಿಗೆ ಸೂಚನೆ ನೀಡಿದ್ದು, ಇನ್ನೂ ಮಾಹಿತಿ ನೀಡಿಲ್ಲ. ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟಿದ್ದರೆ ಶೀಘ್ರದಲ್ಲಿಯೇ ದುರಸ್ತಿ ಮಾಡಿಸಲಾಗುವುದು.”

-ರೇಖಾ, ಮುಖ್ಯಾಧಿಕಾರಿ, ಹನೂರು ಪಪಂ

 

 

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ : ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಏಟು ; ವಾಹನ ಜಖಂ

ಬಿಡದಿ : ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…

11 hours ago

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

16 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

16 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

23 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

23 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

23 hours ago