Andolana originals

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ೨ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪಟ್ಟಣ ಪಂಚಾಯಿತಿಯವರು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಉಪಯೋಗಕ್ಕೆ ಬಾರದಂತಾಗಿದೆ.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ವಾಡ್ನಲ್ಲೂ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲು ಉದ್ದೇಶಿಸಲಾಗಿತ್ತು. ಪ್ರಾರಂಭದಲ್ಲಿ ಪಟ್ಟಣ ಪಂಚಾಯಿತಿ ಖಾಸಗಿ ಬಸ್ ನಿಲ್ದಾಣದ ಸಮೀಪ ಶಾಸಕರ ಅನುದಾನದಲ್ಲಿ ೯ ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಯಿತು. ಪಟ್ಟಣಕ್ಕೆ ಬರುವ ಸಾರ್ವಜನಿಕರು, ಅಂಗಡಿ ಮಾಲೀಕರು, ಕೂಲಿ ಕಾರ್ಮಿಕರು ಇದರ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಂಡಿದ್ದರು. ಕೆಲವು ದಿನಗಳ ನಂತರ ಯಂತ್ರಗಳೆಲ್ಲ ಕೆಟ್ಟು ಹೋಗಿದ್ದವು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ನಂತರ ದುರಸ್ತಿ ಮಾಡಲಾಗಿದ್ದು, ಪಟ್ಟಣದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

ಕಳೆದ ಅವಧಿಯಲ್ಲಿ ಶಾಸಕರಾಗಿದ್ದ ಆರ್.ನರೇಂದ್ರ ಅವರು ೬ನೇ ವಾರ್ಡ್ ಮತ್ತು ೯ನೇ ವಾರ್ಡಿನ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ತಲಾ ೧೨ ಲಕ್ಷ ರೂ. ವೆಚ್ಚದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿಸಿ ಚಾಲನೆ ನೀಡಿದ್ದರು. ಕೆಲವು ದಿನಗಳ ನಂತರ ಸಮರ್ಪಕ ನಿರ್ವಹಣೆ ಮಾಡದೇ ಕೆಟ್ಟುಹೋಗಿವೆ.

ಇದಲ್ಲದೆ ಶುದ್ಧ ಕುಡಿಯುವ ನೀರಿನ ಘಟಕದ ಬಾಗಿಲಿನ ಗಾಜುಗಳನ್ನು ಯಾರೋ ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಆದರೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸಿಲ್ಲ, ಇದರಿಂದ ೨೪ ಲಕ್ಷ ರೂ. ಸಾರ್ವಜನಿಕರ ಹಣ ವ್ಯರ್ಥವಾಗಿದೆ.

ನಲ್ಲಿ ಹಾಗೂ ಕಾಯಿನ್ ಬಾಕ್ಸ್ ನಾಪತ್ತೆ: ೯ನೇ ವಾರ್ಡಿನಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ತುಂಬಿಸಿಕೊಳ್ಳಲು ಅಳವಡಿಸಲಾಗಿದ್ದ ಪೈಪ್ ಹಾಗೂ ೫ ರೂ. ನಾಣ್ಯ ಹಾಕಲು ಇಡಲಾಗಿದ್ದ ಕಾಯಿನ್ ಬಾಕ್ಸ್ ಕೂಡ ನಾಪತ್ತೆಯಾಗಿದೆ. ಸರ್ಕಾರದ ಆಸ್ತಿಯನ್ನು ಸಂರಕ್ಷಣೆ ಮಾಡಬೇಕಾದ ಹನೂರು ಪಟ್ಟಣ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಉಪಯೋಗಕ್ಕೆ ಬಾರ ದಂತಾಗಿದೆ. ಇದೀಗ ಬೇಸಿಗೆ ಪ್ರಾರಂಭವಾಗಿರುವುದರಿಂದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರಿನ ಅಗತ್ಯವಿದೆ. ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಮಾಡಿಸಬೇಕಿದೆ.

” ಹನೂರಿನ ೯ನೇ ವಾರ್ಡಿನಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ಗುಣಮಟ್ಟದಿಂದ ಕೂಡಿತ್ತು. ಇದು ಕೆಲವು ತಾಂತ್ರಿಕ ದೋಷಗಳಿಂದ ಕೆಟ್ಟಿದ್ದು, ನಂತರ ಇದನ್ನು ಅಧಿಕಾರಿಗಳು ದುರಸ್ತಿ ಮಾಡದೇ ಇರುವುದರಿಂದ ಉಪಯೋಗಕ್ಕೆ ಬಾರದಂತಾಗಿದೆ. ಬೇಸಿಗೆಕಾಲದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯಕತೆ ಇದೆ. ಪಟ್ಟಣ ಪಂಚಾಯಿತಿಯವರು ಇದನ್ನು ದುರಸ್ತಿ ಮಾಡಿದರೆ ಈ ಭಾಗದ ನಿವಾಸಿಗಳಿಗೆ ಅನುಕೂಲವಾಗಲಿದೆ.”

-ನಾಗೇಂದ್ರ, ೯ನೇ ವಾರ್ಡಿನ ನಿವಾಸಿ

” ಹನೂರು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪಟ್ಟಣ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಮಾಹಿತಿ ನೀಡುವಂತೆ ಅಭಿಯಂತರರಿಗೆ ಸೂಚನೆ ನೀಡಿದ್ದು, ಇನ್ನೂ ಮಾಹಿತಿ ನೀಡಿಲ್ಲ. ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟಿದ್ದರೆ ಶೀಘ್ರದಲ್ಲಿಯೇ ದುರಸ್ತಿ ಮಾಡಿಸಲಾಗುವುದು.”

-ರೇಖಾ, ಮುಖ್ಯಾಧಿಕಾರಿ, ಹನೂರು ಪಪಂ

 

 

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

7 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

8 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

8 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

9 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

14 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

17 hours ago