Andolana originals

ದಾಸನೂರು ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ

 ಪಿ.ಶಿವಕುಮಾರ್

ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಗ್ರಾಮಸ್ಥರ ಆಗ್ರಹ 

ದೊಡ್ಡ ಕವಲಂದೆ: ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಜನ, ಜಾನುವಾರುಗಳು ತತ್ತರಿಸುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವಂತಾಗಿದೆ.

ದಾಸನೂರು ಗ್ರಾಮದಲ್ಲಿ ೩ ಸಾವಿರ ಜನಸಂಖ್ಯೆ ಇದ್ದು, ಎರಡು ಓವರ್‌ಹೆಡ್ ಟ್ಯಾಂಕ್‌ಗಳಿಂದ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಕಪಿಲಾ ನದಿಯಿಂದ ಶುದ್ಧೀಕರಿಸುವ ನೀರು ಬರುತ್ತಿಲ್ಲ. ದಾಸನೂರು, ದೊಡ್ಡಹೊಮ್ಮ, ಚಿಕ್ಕಹೊಮ್ಮ, ಕಾರೇಮೊಳೆ, ತೊರವಳ್ಳಿ, ಅಂಕುಶರಾಯನಪುರ, ತೊರವಳ್ಳಿ ಮೋಳೆ ಗ್ರಾಮಗಳಲ್ಲಿಯೂ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯನಿರ್ವಹಿಸದೆ ಕೆಟ್ಟು ನಿಂತಿದೆ. ತೊಂಬೆ ನಲ್ಲಿಗಳಿಗೂ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.

ಕುಡಿಯುವ ನೀರನ್ನು ನಾಲ್ಕು ದಿನಕ್ಕೆ ಒಂದು ಬಾರಿ ಮಾತ್ರ ಬಿಡುತ್ತಾರೆ. ಇದರಿಂದ ಗ್ರಾಮದಲ್ಲಿ ಜನರಿಗೆ ಮತ್ತು ಜಾನುವಾರುಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಕಳೆದ ೨-೩ ತಿಂಗಳುಗಳಿಂದಲೂ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಸ್ಥಗಿತಗೊಂಡಿರುವ ಕಪಿಲಾ ನದಿ ನೀರನ್ನು ಸರಬರಾಜು ಮಾಡಬೇಕು. ಕೆಟ್ಟು ನಿಂತಿರುವ ಗೇಟ್ ವಾಲ್ವ್ ಮತ್ತು ಶುದ್ಧ ಕುಡಿ ಯುವ ನೀರಿನ ಘಟಕವನ್ನು ದುರಸ್ತಿ ಮಾಡಿಸಬೇಕು ಎಂದು ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವುದು ಗ್ರಾಮಸ್ಥರ ಆರೋಪ.ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಗ್ರಾಮ ಪಂಚಾಯಿತಿ ಆಡಳಿತ ವಿಫಲವಾಗಿದೆ. ಇನ್ನಾದರೂ ತಾಲ್ಲೂಕು ಆಡಳಿತ ಎಚ್ಚೆತ್ತುಕೊಂಡು ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಬೇಕಿದೆ.

ಮನೆ ಮನೆಗೆ ಬಾರದ ಗಂಗೆ: ಸರ್ಕಾರದ ಮಹತ್ವಾಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮಸ್ಥರಿಗೆ ಮನೆ ಮನೆಗೆ ಗಂಗೆ ಯೋಜನೆಯಡಿ ನೀರು ಇನ್ನೂ ತಲುಪಿಲ್ಲ. ಕಪಿಲಾ ನದಿ ನೀರನ್ನು ಶುದ್ಧೀಕರಿಸಿ, ಕುಡಿಯಲು ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ, ಕಬಿನಿ ನೀರು ಪೂರೈಕೆ ಆಗುತ್ತಿಲ್ಲ. ಇದರಿಂದ ಕುಡಿಯುವ ನೀರಿಗೆ ತೊಂದರೆಯಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನವಿದೆ.

” ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರ ಇದು. ಕಪಿಲಾ ನದಿಯಿಂದ ಶುದ್ಧೀಕರಿಸಿ ಬರುವ ನೀರು ದಾಸನೂರು ಗ್ರಾಮಕ್ಕೆ ಬರುತ್ತಿಲ್ಲ. ಗೇಟ್‌ಗಳು ಕೆಟ್ಟು ನಿಂತಿವೆ. ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ಕುಡಿಯುವ ನೀರಿನ ಘಟಕ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಿದ್ದು, ಇದನ್ನು ಸರಿಪಡಿಸಿ ನೀರನ್ನು ಪೂರೈಕೆ ಮಾಡಬೇಕು.”

-ಪ್ರಮೋದ್, ದಾಸನೂರು ಗ್ರಾಮಸ್ಥರು.

” ಕಪಿಲಾ ನದಿ ನೀರಿನ ಗೇಟ್ ವಾಲ್ವ್‌ಗಳು ಕೆಟ್ಟು ನಿಂತಿವೆ. ಇದರಿಂದ ನೀರು ಬರುತ್ತಿಲ್ಲ. ಈಗಾಗಲೇ ಇದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇನ್ನೆರಡು ದಿನಗಳಲ್ಲಿ ದುರಸ್ತಿ ಮಾಡಿಸಿ ಕುಡಿಯುವ ನೀರಿಗೆ ತೊಂದರೆ ಯಾಗದಂತೆ ಕ್ರಮ ವಹಿಸಲಾಗುವುದು.”

-ನಾರಾಯಣ ನಾಯಕ, ಪಿಡಿಒ, ದಾಸನೂರು

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

20 mins ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

44 mins ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

1 hour ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

2 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

2 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

6 hours ago