Andolana originals

ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆ

 ಎಂ.ನಾರಾಯಣ

ತಿ.ನರಸೀಪುರ ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ೪-೫ ತಿಂಗಳುಗಳಿಂದ ಜನರಿಗೆ ಸಮಸ್ಯೆ 

ತಿ.ನರಸೀಪುರ: ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗಿ ೪-೫ ತಿಂಗಳಿಂದ ಜನತೆ ಪರಿತಪಿಸುತ್ತಿದ್ದಾರೆ.

ಸೋಸಲೆ ಹೋಬಳಿಯ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಾಗಿ ಪ್ರತಿನಿತ್ಯ ಕುಡಿಯುವ ನೀರಿನ ಸಮಸ್ಯೆ ಉದ್ಭವಗೊಂಡು ಹಲವು ಬಾರಿ ಕಚೇರಿಗೆ ಹೋಗಿ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಜೆಇ ಅಮೀನ್ ಅವರಿಗೆ ಮನವಿ ಮಾಡಿದ್ದರೂ ಸಮಸ್ಯೆ ಬಗೆಹರಿದಿಲ್ಲ.

ಈ ಉಪವಿದ್ಯುತ್ ಕೇಂದ್ರದಿಂದ ಹಲವು ಗ್ರಾಮಗಳಿಗೆ ವಿದ್ಯುತ್ ಸರಬರಾಜಾಗುತ್ತಿದ್ದು, ಆ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆ ಆದರೆ ಉಪಕೇಂದ್ರದಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ. ಇದರಿಂದ ಕುಡಿ ಯುವ ನೀರಿನ ಟ್ಯಾಂಕ್‌ನ ಮೋಟಾರ್‌ಗೆ ವಿದ್ಯುತ್ ಸಂಪರ್ಕವಿಲ್ಲದೆ ಟ್ಯಾಂಕ್ ಪೂರ್ಣ ವಾಗಿ ಲೋಡ್ ಆಗುವುದಿಲ್ಲ. ಆದ್ದರಿಂದ ಸಮರ್ಪಕ ವಾಗಿ ಕುಡಿಯುವ ನೀರು ಆರಿಸಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದನಹುಂಡಿ ಸೋಮಣ್ಣ ‘ಆಂದೋಲನ’ದೊಂದಿಗೆ ಮಾತನಾಡಿ, ಜೆಇ ಅಮೀನ್‌ರವರಿಗೆ ದೂರವಾಣಿ ಕರೆ ಮಾಡಿದರೂ ಸ್ವೀಕರಿಸುವುದಿಲ್ಲ. ದುರಸ್ತಿ ಕಾರಣ ಹೇಳಿ ಯಾವುದೇ ಗ್ರಾಮದಲ್ಲಿ ಸಣ್ಣ ವಿದ್ಯುತ್ ಸಮಸ್ಯೆಯಾದರೂ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ಪೂರ್ಣ ಆಗುವವರೆಗೂ ಗಂಟೆಗಟ್ಟಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದರಿಂದಪ್ರತಿನಿತ್ಯ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದರು.

ಇದರಿಂದ ರಾತ್ರಿ ವೇಳೆ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದ್ದು, ಈ ಬಗ್ಗೆ ತಿ.ನರಸೀಪುರದ ಕಾರ್ಯಪಾಲಕ ಅಭಿಯಂತರ ವೀರೇಶ್ ರವರಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ವಿದ್ಯುತ್ ಸಮಸ್ಯೆ ಮಾತ್ರ ಬಗೆಯುತ್ತಿಲ್ಲ. ಉತ್ತಮ ಮಳೆಯಾಗಿ ಬೋರ್‌ವೆಲ್‌ಗಳಲ್ಲಿ ನೀರು ಇದ್ದರೂ ನಮಗೆ ಕುಡಿಯುವ ನೀರಿನ ಸಮಸ್ಯೆ ಮಾತ್ರ ಬಗೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸದಿದ್ದರೆ ಪಟ್ಟಣದ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

” ‘ದೂರುಗಳಿಗೆ ಸ್ಪಂದನೆಯಿಲ್ಲ’: ಈ ಭಾಗದ  ವಿದ್ಯುತ್ ಸಮಸ್ಯೆ ಅರಿತು ಪ್ರತ್ಯೇಕ ಉಪ ವಿದ್ಯುತ್ ಕೇಂದ್ರವನ್ನು ತೆರೆಯಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಇಂಜಿನಿಯರ್ ವರ್ಗಾವಣೆಯಾಗಿ ಹೋದ ನಂತರ ನೂತನವಾಗಿ ಬಂದಿರುವ ಜೆಇ ಅಮೀನ್‌ರವರು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುತ್ತಿಲ್ಲ. ಕಚೇರಿ ವೇಳೆಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ.”

-ಸೋಮಣ್ಣ, ಗ್ರಾಪಂ ಮಾಜಿ ಸದಸ್ಯ

” ವಿದ್ಯುತ್ ಲೈನ್ ಕೆಲಸ ಮಾಡುವಾಗ ವಿದ್ಯುತ್ ಸ್ಥಗಿತಗೊಳಿಸುತ್ತಾರೆ. ಜೆಇ ಹೊಸಬರಾಗಿದ್ದರಿಂದ ಅವರಿಗೆ ಹೆಚ್ಚಿನ ಮಾಹಿತಿ ಇಲ್ಲದ ಕಾರಣ ಸಮಸ್ಯೆಯಾಗುತ್ತಿದೆ. ಗ್ರಾಮಸ್ಥರು ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಯಾವುದೇ ದುರಸ್ತಿ ಕಾರ್ಯ ಮಾಡಬೇಕಾದರೂ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ತೆಗೆಯಲಾಗುತ್ತಿದೆ. ಆದ್ದರಿಂದ ಸಮಸ್ಯೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತ್ಯೇಕ ಲೈನ್ ವ್ಯವಸ್ಥೆ ಕಲ್ಪಿಸಿ ವಿದ್ಯುತ್ ಸಮಸ್ಯೆ ಬಗೆಹರಿಸಲಾಗುವುದು.”

-ವೀರೇಶ್, ಇಇ, ತಿ.ನರಸೀಪುರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

55 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

57 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

60 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago