Andolana originals

ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆ

 ಎಂ.ನಾರಾಯಣ

ತಿ.ನರಸೀಪುರ ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ೪-೫ ತಿಂಗಳುಗಳಿಂದ ಜನರಿಗೆ ಸಮಸ್ಯೆ 

ತಿ.ನರಸೀಪುರ: ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗಿ ೪-೫ ತಿಂಗಳಿಂದ ಜನತೆ ಪರಿತಪಿಸುತ್ತಿದ್ದಾರೆ.

ಸೋಸಲೆ ಹೋಬಳಿಯ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಾಗಿ ಪ್ರತಿನಿತ್ಯ ಕುಡಿಯುವ ನೀರಿನ ಸಮಸ್ಯೆ ಉದ್ಭವಗೊಂಡು ಹಲವು ಬಾರಿ ಕಚೇರಿಗೆ ಹೋಗಿ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಜೆಇ ಅಮೀನ್ ಅವರಿಗೆ ಮನವಿ ಮಾಡಿದ್ದರೂ ಸಮಸ್ಯೆ ಬಗೆಹರಿದಿಲ್ಲ.

ಈ ಉಪವಿದ್ಯುತ್ ಕೇಂದ್ರದಿಂದ ಹಲವು ಗ್ರಾಮಗಳಿಗೆ ವಿದ್ಯುತ್ ಸರಬರಾಜಾಗುತ್ತಿದ್ದು, ಆ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆ ಆದರೆ ಉಪಕೇಂದ್ರದಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ. ಇದರಿಂದ ಕುಡಿ ಯುವ ನೀರಿನ ಟ್ಯಾಂಕ್‌ನ ಮೋಟಾರ್‌ಗೆ ವಿದ್ಯುತ್ ಸಂಪರ್ಕವಿಲ್ಲದೆ ಟ್ಯಾಂಕ್ ಪೂರ್ಣ ವಾಗಿ ಲೋಡ್ ಆಗುವುದಿಲ್ಲ. ಆದ್ದರಿಂದ ಸಮರ್ಪಕ ವಾಗಿ ಕುಡಿಯುವ ನೀರು ಆರಿಸಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದನಹುಂಡಿ ಸೋಮಣ್ಣ ‘ಆಂದೋಲನ’ದೊಂದಿಗೆ ಮಾತನಾಡಿ, ಜೆಇ ಅಮೀನ್‌ರವರಿಗೆ ದೂರವಾಣಿ ಕರೆ ಮಾಡಿದರೂ ಸ್ವೀಕರಿಸುವುದಿಲ್ಲ. ದುರಸ್ತಿ ಕಾರಣ ಹೇಳಿ ಯಾವುದೇ ಗ್ರಾಮದಲ್ಲಿ ಸಣ್ಣ ವಿದ್ಯುತ್ ಸಮಸ್ಯೆಯಾದರೂ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ಪೂರ್ಣ ಆಗುವವರೆಗೂ ಗಂಟೆಗಟ್ಟಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದರಿಂದಪ್ರತಿನಿತ್ಯ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದರು.

ಇದರಿಂದ ರಾತ್ರಿ ವೇಳೆ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದ್ದು, ಈ ಬಗ್ಗೆ ತಿ.ನರಸೀಪುರದ ಕಾರ್ಯಪಾಲಕ ಅಭಿಯಂತರ ವೀರೇಶ್ ರವರಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ವಿದ್ಯುತ್ ಸಮಸ್ಯೆ ಮಾತ್ರ ಬಗೆಯುತ್ತಿಲ್ಲ. ಉತ್ತಮ ಮಳೆಯಾಗಿ ಬೋರ್‌ವೆಲ್‌ಗಳಲ್ಲಿ ನೀರು ಇದ್ದರೂ ನಮಗೆ ಕುಡಿಯುವ ನೀರಿನ ಸಮಸ್ಯೆ ಮಾತ್ರ ಬಗೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸದಿದ್ದರೆ ಪಟ್ಟಣದ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

” ‘ದೂರುಗಳಿಗೆ ಸ್ಪಂದನೆಯಿಲ್ಲ’: ಈ ಭಾಗದ  ವಿದ್ಯುತ್ ಸಮಸ್ಯೆ ಅರಿತು ಪ್ರತ್ಯೇಕ ಉಪ ವಿದ್ಯುತ್ ಕೇಂದ್ರವನ್ನು ತೆರೆಯಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಇಂಜಿನಿಯರ್ ವರ್ಗಾವಣೆಯಾಗಿ ಹೋದ ನಂತರ ನೂತನವಾಗಿ ಬಂದಿರುವ ಜೆಇ ಅಮೀನ್‌ರವರು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುತ್ತಿಲ್ಲ. ಕಚೇರಿ ವೇಳೆಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ.”

-ಸೋಮಣ್ಣ, ಗ್ರಾಪಂ ಮಾಜಿ ಸದಸ್ಯ

” ವಿದ್ಯುತ್ ಲೈನ್ ಕೆಲಸ ಮಾಡುವಾಗ ವಿದ್ಯುತ್ ಸ್ಥಗಿತಗೊಳಿಸುತ್ತಾರೆ. ಜೆಇ ಹೊಸಬರಾಗಿದ್ದರಿಂದ ಅವರಿಗೆ ಹೆಚ್ಚಿನ ಮಾಹಿತಿ ಇಲ್ಲದ ಕಾರಣ ಸಮಸ್ಯೆಯಾಗುತ್ತಿದೆ. ಗ್ರಾಮಸ್ಥರು ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಯಾವುದೇ ದುರಸ್ತಿ ಕಾರ್ಯ ಮಾಡಬೇಕಾದರೂ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ತೆಗೆಯಲಾಗುತ್ತಿದೆ. ಆದ್ದರಿಂದ ಸಮಸ್ಯೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತ್ಯೇಕ ಲೈನ್ ವ್ಯವಸ್ಥೆ ಕಲ್ಪಿಸಿ ವಿದ್ಯುತ್ ಸಮಸ್ಯೆ ಬಗೆಹರಿಸಲಾಗುವುದು.”

-ವೀರೇಶ್, ಇಇ, ತಿ.ನರಸೀಪುರ

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

35 mins ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

5 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

5 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

6 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

6 hours ago