Andolana originals

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ ಧರಿಸಿ ದ್ವಿಚಕ್ರ ವಾಹನ ಸವಾರಿ ಮಾಡಿಕೊಂಡು ಬಂದಿದ್ದಾರೆ. ಪರೀಕ್ಷೆ ಮುಗಿಸಿಕೊಂಡು ಅದೇ ದ್ವಿಚಕ್ರ ವಾಹನ ಸವಾರಿ ಮಾಡುತ್ತಾ ಮನೆಗೆ ತೆರಳಿದ್ದಾರೆ. ಕೆಲವು ವಿದ್ಯಾರ್ಥಿಗಳಂತೂ ತಮ್ಮ ಬೇಜವಾಬ್ದಾರಿ ಪೋಷಕರನ್ನು ಹಿಂಬದಿಯಲ್ಲಿ ಕೂರಿಕೊಂಡು ವಾಹನ ಸವಾರಿ ಮಾಡಿಕೊಂಡು ಬಂದಿದ್ದಾರೆ.

ಅಪ್ರಾಪ್ತ ವಯಸ್ಸಿನ ಬಾಲಕ-ಬಾಲಕಿಯರು ವಾಹನ ಸವಾರಿ/ಚಾಲನೆ ಮಾಡುವುದು ಮೋಟಾರು ವಾಹನ ಕಾಯಿದೆಯ ಅನ್ವಯ ಶಿಕ್ಷಾರ್ಹ ಅಪರಾಧ. ಇಂತಹ ಮಕ್ಕಳು ಬಾಲಾಪರಾಧ ತಡೆ ಕಾಯಿದೆ ಅನ್ವಯ ವಿಚಾರಣೆ ಎದುರಿಸುವುದರ ಜೊತೆಗೆ ಅಂತಹ ಮಕ್ಕಳಿಗೆ ಸವಾರಿ/ಚಾಲನೆ ಮಾಡಲು ವಾಹನ ನೀಡಿದ ಪೋಷಕರು ಮತ್ತು ವಾಹನದ ಮಾಲೀಕರಿಗೆ ನ್ಯಾಯಾಲಯವು ೨೫ ಸಾವಿರ ರೂ. ದಂಡ ವಿಧಿಸಬಹುದು ಹಾಗೂ ಅಂತಹ ಪೋಷಕರಿಗೆ ಮೂರು ವರ್ಷಗಳ ಸೆರೆವಾಸದ ಶಿಕ್ಷೆಯನ್ನೂ ವಿಧಿಸಬಹುದು.

ಜೊತೆಗೆ ಅಪ್ರಾಪ್ತ ವಯಸ್ಸಿನ ಮಕ್ಕಳು ಚಲಾಯಿಸಿದ/ ಸವಾರಿ ಮಾಡಿದ ವಾಹನದ ನೋಂದಣಿಯನ್ನು ಒಂದು ವರ್ಷದ ಅವಽಗೆ ರದ್ದು ಮಾಡಬಹುದು. ಅದರೊಂದಿಗೆ ವಾಹನ ಸವಾರಿ ಮಾಡಿದ/ ಚಲಾಯಿಸಿದ ಅಪ್ರಾಪ್ತ ವಯಸ್ಸಿನ ಬಾಲಕ-ಬಾಲಕಿಗೆ ೨೫ ವರ್ಷ ತುಂಬುವವರೆಗೆ ಚಾಲನಾ ಪರವಾನಗಿ ನೀಡದಂತೆ ಕ್ರಮಕೈಗೊಳ್ಳಬಹುದು. ಅಕಸ್ಮಾತ್ ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಸವಾರಿ/ ಚಾಲನೆ ಮಾಡಿ ಅಪಘಾತ ಎಸಗಿ ಬೇರೆಯವರಿಗೆ ಗಾಯ ಉಂಟಾದರೆ ಅಥವಾ ಪ್ರಾಣಹಾನಿ ಸಂಭವಿಸಿದರೆ ಅಂತಹ ವಾಹನಕ್ಕೆ ಮಾಡಿಸಿರುವ ವಿಮೆ ಉಪಯೋಗಕ್ಕೆ ಬರುವುದಿಲ್ಲ. ಅಂತಹ ಸಮಯದಲ್ಲಿ ಆ ವಾಹನದ ಮಾಲೀಕರೇ ಪರಿಹಾರ ನೀಡಬೇಕಾಗುತ್ತದೆ. ಆಗ ಆ ಪೋಷಕರು ತಮ್ಮ ಮನೆ-ಮಠ ಮಾರಿಕೊಂಡು ಬೀದಿಗೆ ಬರಬೇಕಾಗುತ್ತದೆ.

ಈಗಾಗಲೇ ರಾಜ್ಯದ ಹಲವು ನ್ಯಾಯಾಲಯಗಳು ಇಂತಹ ಪ್ರಕರಣಗಳಲ್ಲಿ ಬೇಜವಾಬ್ದಾರಿಯುತ ಪೋಷಕರಿಗೆ ೨೫ ಸಾವಿರ ರೂ. ದಂಡ ವಿಧಿಸುವ ಜೊತೆಗೆ ಕೆಲವು ದಿನಗಳ ಸೆರೆವಾಸವನ್ನೂ ವಿಧಿಸಿದ ನಿದರ್ಶನಗಳು ಇವೆ. ಅಪ್ರಾಪ್ರ ವಯಸ್ಸಿನ ಮಗನಿಗೆ ವಾಹನ ಸವಾರಿ ಮಾಡಲು ಅವಕಾಶ ನೀಡಿದ ಆರೋಪಿಯೊಬ್ಬರಿಗೆ ಮೈಸೂರಿನ ಜೆಎಂಎಫ್‌ಸಿ ಎರಡನೇ ನ್ಯಾಯಾಲಯವು ೧೮.೧೧.೨೦೨೫ರಂದು ೨೫ ಸಾವಿರ ರೂ. ದಂಡ ವಿಧಿಸಿದೆ.

ಆದರೂ ಇಂತಹ ಬೇಜವಾಬ್ದಾರಿ ಪೋಷಕರು ಎಚ್ಚೆತ್ತುಕೊಂಡಿಲ್ಲ. ಕಾನೂನಿನ ಅಜ್ಞಾನ ಕ್ಷಮಾರ್ಹವಲ್ಲ ಎನ್ನುತ್ತದೆ ನ್ಯಾಯಶಾಸ್ತ್ರ. ನನಗೆ ಕಾನೂನಿನ ಅರಿವಿರಲಿಲ್ಲ ಎನ್ನುವ ಮೂಲಕ ಪೋಷಕರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾಗದು. ಈ ವಿಚಾರವಾಗಿ ಕಾನೂನಿನ ಅರಿವಿದ್ದೂ ಪೋಷಕರು ತಮ್ಮ ಮಕ್ಕಳಿಗೆ ಸವಾರಿ ಮಾಡಲು ವಾಹನ ನೀಡುತ್ತಿದ್ದಾರೆ ಎಂದರೆ ಅದು ಅವರ ದುರಹಂಕಾರಕ್ಕೆ ಸಾಕ್ಷಿ. ಹಲವಾರು ಪೋಷಕರು ತಮ್ಮ ಪುಟ್ಟ ಮಕ್ಕಳನ್ನು ದ್ವಿಚಕ್ರವಾಹನದ ಮುಂದೆ ಕೂರಿಸಿಕೊಂಡು ರಾಜಾರೋಷವಾಗಿ ನಗರದ ಮುಖ್ಯರಸ್ತೆಗಳಲ್ಲಿ ಮಕ್ಕಳಿಂದಲೇ ವಾಹನ ಸವಾರಿ ಮಾಡಿಸುತ್ತಿದ್ದಾರೆ. ಶಾಲೆಗೆ ತೆರಳುವಾಗ ಇಂತಹ ಬೇಜವಾಬ್ದಾರಿ ಪೋಷಕರು ಮಕ್ಕಳ ಕೈಗೆ ವಾಹನ ನೀಡಿ ತಾವು ಹಿಂದೆ ಕುಳಿತು ಬೀಗುತ್ತಿರುತ್ತಾರೆ.

ಇದು ದಂಡನಾರ್ಹ ಅಪರಾಧ ಎಂಬ ಅರಿವು ಅಂತಹ ಬೇಜವಾಬ್ದಾರಿ ಪೋಷಕರಿಗಿಲ್ಲ ಅಥವಾ ಆ ಪೋಷಕರಿಗೆ ಹಣದ ಮದ ಇರಬಹುದು. ಅಷ್ಟೇ ಅಲ್ಲ, ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ದ್ವಿಚಕ್ರ ವಾಹನಗಳನ್ನು ಸವಾರಿ ಮಾಡುತ್ತಾ ಶಾಲಾ ಕಾಲೇಜು ಹಾಗೂ ಟ್ಯೂಷನ್ ಕೇಂದ್ರಗಳಿಗೆ ಹೋಗಿ ಬರುತ್ತಿದ್ದಾರೆ. ಅದರಲ್ಲೂ ವಾಹನ ಸವಾರಿ ಮಾಡುವ ಹೈಸ್ಕೂಲ್ ಮಕ್ಕಳ ಸಂಖ್ಯೆಯೇ ಹೆಚ್ಚಾಗಿದೆ.

ಈ ವಿಚಾರವಾಗಿ ಶಾಲಾ ಕಾಲೇಜು ಹಾಗೂ ಟ್ಯೂಷನ್ ಕೇಂದ್ರಗಳ ಶಿಕ್ಷಕ ವೃಂದಕ್ಕೂ ಕಾನೂನು ಅರಿವು ಇದ್ದಂತಿಲ್ಲ. ಶಾಲಾ ಕಾಲೇಜು ಹಾಗೂ ಟ್ಯೂಷನ್ ಕೇಂದ್ರದ ಬಳಿ ಸಾಲಾಗಿ ನಿಂತ ದ್ವಿಚಕ್ರ ವಾಹನಗಳೇ ಇದಕ್ಕೆ ಸಾಕ್ಷಿ. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಸವಾರಿ/ ಚಾಲನೆ ಮಾಡಿದರೆ ಅವರ ಪೋಷಕರಿಗೆ ಶಿಕ್ಷೆ ಆಗುತ್ತದೆ ಎಂಬ ಮಾಹಿತಿಯನ್ನು ಶಾಲಾ ಪುಸ್ತಕದ ಪಠ್ಯದ ಮೂಲಕ ಮಕ್ಕಳಿಗೆ ತಿಳಿಸಿದರೆ, ಈ ಮಕ್ಕಳಿಗೆ ಅರಿವು ಮೂಡಬಹುದು. ಈ ಮಾಹಿತಿ ಪಠ್ಯದಲ್ಲಿ ಇದ್ದರೆ ಶಿಕ್ಷಕ ವೃಂದಕ್ಕೂ ಜ್ಞಾನೋದಯ ಆಗಬಹುದು. ಹಾಗಾಗಿ ಪಠ್ಯಪುಸ್ತಕ ಸಮಿತಿಯು ಈ ವಿಚಾರವಾಗಿ ಚಿಂತಿಸಿ ಈ ಮಾಹಿತಿಯನ್ನು ಪಠ್ಯದಲ್ಲಿ ತಕ್ಷಣ ಅಳವಡಿಸುವ ಮೂಲಕ ಮಕ್ಕಳು, ಶಿಕ್ಷಕರು ಹಾಗೂ ಪೋಷಕರಲ್ಲಿ ಕಾನೂನು ಅರಿವು ಮೂಡಿಸಬೇಕಾಗಿದೆ.

ಶಾಲಾ ಕಾಲೇಜುಗಳು ಪುನರಾರಂಭವಾಗುವ ಮುನ್ನ ಈ ಮಾಹಿತಿಯನ್ನು ಶಾಲಾ ಪಠ್ಯದಲ್ಲಿ ಸೇರಿಸುವುದರ ಜೊತೆಗೆ ಈ ಮಾಹಿತಿಯನ್ನು ಪೊಲೀಸರು ಪೋಸ್ಟರ್/ ಫ್ಲೆಕ್ಸ್ ಮೂಲಕ ಪ್ರತಿಯೊಂದು ಶಾಲಾ ಕಾಲೇಜು ಹಾಗೂ ಟ್ಯೂಷನ್ ಕೇಂದ್ರದ ಪ್ರವೇಶದ್ವಾರದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲು ಪೊಲೀಸ್ ಇಲಾಖೆ ನಿರ್ದೇಶನ ನೀಡಲಿ.

ಅದಕ್ಕೂ ಮುನ್ನ ಮೈಸೂರಿನ ಪೊಲೀಸ್ ಆಯುಕ್ತರು ಪ್ರತಿಯೊಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳ ಬಳಿ ದಕ್ಷ ಸಂಚಾರ ಪೊಲೀಸರನ್ನು ನಿಯೋಜಿಸಿ, ವಿದ್ಯಾರ್ಥಿಗಳು ಸವಾರಿ ಮಾಡುವ ವಿದ್ಯಾರ್ಥಿಗಳ ವಾಹನವನ್ನು ಜಪ್ತಿ ಮಾಡಿ ಅಂತಹ ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡುವ ಬೇಜವಾಬ್ದಾರಿ ಪೋಷಕರಿಗೆ ತಕ್ಕ ಪಾಠ ಕಲಿಸಬೇಕಾಗಿದೆ.

” ಶಾಲಾ ಕಾಲೇಜುಗಳು ಪುನರಾರಂಭವಾಗುವ ಮುನ್ನ ಈ ಮಾಹಿತಿಯನ್ನು ಶಾಲಾ ಪಠ್ಯದಲ್ಲಿ ಸೇರಿಸುವುದರ ಜೊತೆಗೆ ಈ ಮಾಹಿತಿಯನ್ನು ಪೊಲೀಸರು ಪೋಸ್ಟರ್/ ಫ್ಲೆಕ್ಸ್ ಮೂಲಕ ಪ್ರತಿಯೊಂದು ಶಾಲಾ ಕಾಲೇಜು ಹಾಗೂ ಟ್ಯೂಷನ್ ಕೇಂದ್ರದ ಪ್ರವೇಶದ್ವಾರದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲು ಪೊಲೀಸ್ ಇಲಾಖೆ ನಿರ್ದೇಶನ ನೀಡಲಿ.”

 

 

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

17 mins ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

18 mins ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

1 hour ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

1 hour ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

2 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

3 hours ago