Andolana originals

ಬರದಿಂದ ಗಣೇಶ ಮೂರ್ತಿ ವ್ಯಾಪಾರ ಕುಸಿತ

ಅಣ್ಣೂರು ಸತೀಶ್

ವ್ಯಾಪಾರಿಗಳು ಕಂಗಾಲು; ಮನೆಯಲ್ಲೇ ಪರಿಸರ ಸ್ನೇಹಿ ಗಣೇಶಮೂರ್ತಿ ಪ್ರತಿಷ್ಠಾಪಿಸಿ ಪೂಜೆ 

ಭಾರತೀನಗರ: ಕಳೆದ ವರ್ಷ ಮಂಡ್ಯ ಜಿಲ್ಲಾದ್ಯಂತ ಆವರಿಸಿದ ‘ಬರ’ದ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಉದ್ಯಮಗಳೂ ಕುಸಿದಿದ್ದು, ರೈತರು ಕೂಡ ಬೆಳೆ ಇಲ್ಲದೆ ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಗಣೇಶ ಹಬ್ಬದ ಮೇಲೂ ಪರಿಣಾಮ ಬೀರಿದಂತಾಗಿದೆ.

ಶ್ರಾವಣ ಮಾಸ ಮುಗಿಯುತ್ತಿದ್ದಂತೆ ಎಲ್ಲ ಕಡೆಯೂ ಗೌರಿ-ಗಣೇಶ ಹಬ್ಬದ ಸಡಗರ ಮನೆಮಾಡುತ್ತದೆ. ನಗರ ಹಾಗೂ ಪಟ್ಟಣಗಳಲ್ಲಿ ಗೌರಿ-ಗಣೇಶ ಮೂರ್ತಿಗಳನ್ನು ಮಾರಾಟ ಮಾಡಲು ವ್ಯಾಪಾರಸ್ಥರು ಮುಂದಾಗಿದ್ದಾರೆ. ಒಂದು ವರ್ಷದಿಂದ ನಾಲೆಗಳಲ್ಲಿ ನೀರು ಹರಿಯದೆ, ವ್ಯವಸಾಯ ಮಾಡದೆ ಬರದ ಛಾಯೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರಸಕ್ತ ವರ್ಷ ಸಮರ್ಪಕವಾಗಿ ಮಳೆಯಾಗಿ ಕನ್ನಂಬಾಡಿ ಅಣೆಕಟ್ಟೆ ತುಂಬಿದರೂ ಕೂಡ ನಾಲೆಗಳ ಆಧುನೀಕರಣ ಹೆಸರಿನಲ್ಲಿ ನೀರನ್ನು ಹರಿಸದಿದ್ದರಿಂದ ವಿ.ನಾಲೆಯ ಕೊನೆಯ ಭಾಗದ ಮದ್ದೂರು-ಭಾರತೀನಗರ- ಮಳವಳ್ಳಿ ವ್ಯಾಪ್ತಿಯ ರೈತರು ಬೆಳೆಗಳನ್ನು ಒಡ್ಡದೆ ಕಂಗಾಲಾಗಿದ್ದಾರೆ. ಇದರಿಂದ ದೊಡ್ಡ ದೊಡ್ಡ ಗಣೇಶಮೂರ್ತಿಗಳನ್ನು ತಂದಿದ್ದ ಅಂಗಡಿ ಮಾಲೀಕರಿಗೆ ವ್ಯಾಪಾರವಾಗದೆ ನಷ್ಟ ಅನುಭವಿಸುವಂತಾಗಿದೆ. ಅಲ್ಲದೆ, ಕೆಲವು ಅಂಗಡಿಗಳಲ್ಲಿ ಚಿಕ್ಕಚಿಕ್ಕ ಮಣ್ಣಿನ ಗಣೇಶಮೂರ್ತಿ ಹಾಗೂ ಅಲಂಕಾರಿಕ ಗಣಪನನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಆದರೂ ಗಣಪನನ್ನು ಕೊಂಡುಕೊಳ್ಳುವವರ ಸಂಖ್ಯೆ ಕಡಿಮೆ ಎಂದು ಚಿಕ್ಕರಸಿನಕೆರೆ ರಘು ತಿಳಿಸಿದ್ದಾರೆ.

೫ ಅರ್ಜಿಗಳು: ಕಳೆದ ವರ್ಷ ಕೆ. ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ೫೮ ಹಳ್ಳಿಗಳಲ್ಲಿ ೧೩೦ ಅರ್ಜಿಗಳು ಗಣಪತಿ ಪ್ರತಿಷ್ಠಾಪಿಸುವುದಾಗಿ ಬಂದಿದ್ದವು. ಆದರೆ ಈ ವರ್ಷ ಬರದ ಕರಿನೆರಳಿನಿಂದ ಸದ್ಯಕ್ಕೆ ಕೇವಲ ೫ ಅರ್ಜಿಗಳು ಬಂದಿವೆ. ಗೌರಿ-ಗಣೇಶ ಹಬ್ಬದ ಹಿಂದಿನ ದಿನ ಅರ್ಜಿಗಳು ಬರಬಹುದೆಂದು ಪೊಲೀಸರು ತಿಳಿಸಿದ್ದಾರೆ.

” ಒಂದು ವರ್ಷದಿಂದ ರೈತರು ಬೆಳೆಗಳಿಲ್ಲದೆ ಪರಿತಪಿಸುತ್ತಿದ್ದಾರೆ. ಪ್ರಸಕ್ತ ವರ್ಷವು ಕೂಡ ನಾಲೆಗಳಿಗೆ ನೀರಿಲ್ಲದೆ ಬೆಳೆಗಳನ್ನು ಒಡ್ಡಲಾಗದೆ, ಇತ್ತ ಹಣವೂ ಇಲ್ಲದೆ ದೊಡ್ಡದೊಡ್ಡ ಗಣೇಶಮೂರ್ತಿಗಳನ್ನು ಕೊಂಡುಕೊಳ್ಳಲಾಗದಿರುವುದರಿಂದ ವ್ಯಾಪಾರಿಗಳಿಗೆ ದೊಡ್ಡಪೆಟ್ಟು ಬಿದ್ದಿದೆ.”

-ರಾಘು, ಚಿಕ್ಕರಸಿನಕೆರೆ, ವ್ಯಾಪಾರಿ

” ಜನತೆ ಬಣ್ಣಬಣ್ಣದ ಗಣೇಶ ಮೂರ್ತಿಗಳನ್ನು ಕೊಂಡುಕೊಳ್ಳುವ ವ್ಯಾಮೋಹಕ್ಕೆ ಒಳಗಾಗಬೇಡಿ. ಪರಿಸರ ಸ್ನೇಹಿ ಗಣೇಶಮೂರ್ತಿಯನ್ನು ಪ್ರತಿಷ್ಠಾಪಿಸುವುದರಿಂದ ಪರಿಸರ ಸಂರಕ್ಷಿಸಿದಂತಾಗುತ್ತದೆ. ಪಿಒಪಿ ಗಣೇಶಮೂರ್ತಿಗಳನ್ನು ನದಿ-ಕೆರೆ, ನಾಲೆಗಳಲ್ಲಿ ವಿಸರ್ಜನೆ ಮಾಡುವುದರಿಂದ ನೀರು ಕಲುಷಿತಗೊಂಡು ಜನ-ಜಾನುವಾರುಗಳಿಗೂ ಹಾನಿಯಾಗುತ್ತದೆ.”

-ಶಿವಪ್ಪ, ಮನ್‌ಮುಲ್ ಅಧ್ಯಕ್ಷ. ಗೆಜ್ಜಲಗೆರೆ

” ಗೌರಿ-ಗಣೇಶ ಹಬ್ಬವನ್ನು ಪ್ರತಿ ಹಳ್ಳಿಗಳಲ್ಲೂ ಪ್ರತಿ ಬೀದಿಗಳಲ್ಲೂ ಆಚರಣೆ ಮಾಡಲು ಮುಂದಾಗಿದ್ದಾರೆ. ಇದರಿಂದ ಶಬ್ದ ಮಾಲಿನ್ಯ, ಜಲಮಾಲಿನ್ಯ ಉಂಟಾಗುತ್ತದೆ. ಹಾಗಾಗಿ ಗಣೇಶಮೂರ್ತಿ ಪ್ರತಿಷ್ಠಾಪಿಸುವವರಿಗೆ ಸರಳವಾಗಿ ಆಚರಣೆ ಮಾಡಬೇಕು ಎಂದು ತಿಳಿಹೇಳಬೇಕಿದೆ.”

-ಪ್ರಿಯಾಂಕ ಅಪ್ಪುಗೌಡ, ಪುರಸಭೆ ಸದಸ್ಯೆ, ಮದ್ದೂರು

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

57 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

1 hour ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago