Andolana originals

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಅಂತರರಾಜ್ಯ ಮಾದಕ ಜಾಲದ ಮೂವರನ್ನು ಬಂಧಿಸಿದ್ದಾರೆ.

ಹುಣಸೂರಿನ ರತ್ನಪುರಿ ಬಳಿಯ ದಾಸನಪುರ ತೋಟದ ಮನೆಯ ಮೇಲೆ ದಾಳಿ ನಡೆಸಿದ್ದ ಜಿಲ್ಲಾ ಪೊಲೀಸರ ತಂಡ ಅಲ್ಲಿದ್ದ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಲ್ಲದೆ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿತ್ತು.

ನಂತರ ಇಬ್ಬರೂ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳ ಪಡಿಸಿದ್ದು, ಅವರುಗಳ ಸಿಮ್ ಕಾರ್ಡ್‌ಗಳ ಪರಿಶೀಲನೆ ನಡೆಸಿದ ವೇಳೆ ಆರೋಪಿಗಳ ಸಂಪರ್ಕದಲ್ಲಿ ಇದ್ದ ಇಬ್ಬರು ಮುಂಬೈ ಹಾಗೂ ಒಬ್ಬರು ಒಡಿಶಾದ ಕಟಕ್‌ನಲ್ಲಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿತ್ತು.

ಹೀಗಾಗಿ ಜಿಲ್ಲಾ ಎಸ್‌ಪಿ ಅವರ ಸೂಚನೆ ಮೇರೆಗೆ ಐದು ಮಂದಿ ಪೊಲೀಸ್ ಅಧಿಕಾರಿಗಳ ತಂಡ ಬುಧವಾರ ಮುಂಬೈ ಹಾಗೂ ಒಡಿಶಾಗೆ ತೆರಳಿತ್ತು.

ನಂತರ ಅಲ್ಲಿನ ಪೊಲೀಸ್ ನೆರವಿನೊಂದಿಗೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಮತ್ತೊಬ್ಬನ ವಿಳಾಸ ಪತ್ತೆಗೆ ಜಾಲ ಬೀಸಿದ್ದಾರೆ.

ಹುಣಸೂರು ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಇಬ್ಬರು ಆರೋಪಿಗಳು ಒಡಿಶಾದಲ್ಲಿ ಕೂಡ ಓರ್ವ ಜಾಲದಲ್ಲಿ ಇದ್ದ ಬಗ್ಗೆ ಬಾಯ್ಬಿಟ್ಟಿದ್ದರು. ಈ ಸಂಬಂದ ಅಲ್ಲಿಗೆ ತೆರಳಿದ್ದ ಪೊಲೀಸರು, ಸ್ಥಳೀಯ ಪೊಲೀಸರ ನೆರವಿನಿಂದ ಮಾದಕ ವಸ್ತು ಸಾಗಾಣೆ ಮಾಡುತ್ತಿದ್ದ ರಾಜಾ ಸಹಾನಿ ಎಂಬಾತನನ್ನು ಬಂಧಿಸಿದ್ದು, ಅಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಿ ಮೈಸೂರಿಗೆ ಕರೆತರುತ್ತಿದ್ದಾರೆ.

ಎಫ್‌ಎಸ್‌ಎಲ್ ವರದಿಯಲ್ಲಿ ಸಾಬೀತು:  ಹುಣಸೂರಿನಲ್ಲಿ ವಶಕ್ಕೆ ಪಡೆಯಲಾಗಿದ್ದ ೭.೩೫ ಕೆಜಿ ಮೆಫೆ ಡ್ರೋನ್, ೪೧ ಕೆಜಿ ಮಾದಕ ವಸ್ತು ತಯಾರಿಕೆಯ ಕಚ್ಛಾ ವಸ್ತು ಸೇರಿದಂತೆ ಸುಮಾರು ೪೮ ಕೆಜಿ ಮಾದಕ ವಸ್ತುಗಳನ್ನು ಜಿಲ್ಲಾ ಪೊಲೀಸರು ನ್ಯಾಯಾ ಲಯದಲ್ಲಿ ತೆರಳಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅವುಗಳನ್ನು ಎಫ್ ಎಸ್‌ಎಲ್ ವಿಭಾಗಕ್ಕೆ ರವಾನಿಸಿದ್ದರು. ಇದೀಗ ಅಲ್ಲಿ ದೊರಕಿದ್ದು ಮಾದಕ ವಸ್ತುಗಳು ಎಂಬುದು ವರದಿಯಲ್ಲಿ ಸಾಬೀತಾಗಿದೆ.

ಆಂದೋಲನ ಡೆಸ್ಕ್

Recent Posts

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

11 mins ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

31 mins ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

1 hour ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

2 hours ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

14 hours ago