Andolana originals

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಅಂತರರಾಜ್ಯ ಮಾದಕ ಜಾಲದ ಮೂವರನ್ನು ಬಂಧಿಸಿದ್ದಾರೆ.

ಹುಣಸೂರಿನ ರತ್ನಪುರಿ ಬಳಿಯ ದಾಸನಪುರ ತೋಟದ ಮನೆಯ ಮೇಲೆ ದಾಳಿ ನಡೆಸಿದ್ದ ಜಿಲ್ಲಾ ಪೊಲೀಸರ ತಂಡ ಅಲ್ಲಿದ್ದ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಲ್ಲದೆ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿತ್ತು.

ನಂತರ ಇಬ್ಬರೂ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳ ಪಡಿಸಿದ್ದು, ಅವರುಗಳ ಸಿಮ್ ಕಾರ್ಡ್‌ಗಳ ಪರಿಶೀಲನೆ ನಡೆಸಿದ ವೇಳೆ ಆರೋಪಿಗಳ ಸಂಪರ್ಕದಲ್ಲಿ ಇದ್ದ ಇಬ್ಬರು ಮುಂಬೈ ಹಾಗೂ ಒಬ್ಬರು ಒಡಿಶಾದ ಕಟಕ್‌ನಲ್ಲಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿತ್ತು.

ಹೀಗಾಗಿ ಜಿಲ್ಲಾ ಎಸ್‌ಪಿ ಅವರ ಸೂಚನೆ ಮೇರೆಗೆ ಐದು ಮಂದಿ ಪೊಲೀಸ್ ಅಧಿಕಾರಿಗಳ ತಂಡ ಬುಧವಾರ ಮುಂಬೈ ಹಾಗೂ ಒಡಿಶಾಗೆ ತೆರಳಿತ್ತು.

ನಂತರ ಅಲ್ಲಿನ ಪೊಲೀಸ್ ನೆರವಿನೊಂದಿಗೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಮತ್ತೊಬ್ಬನ ವಿಳಾಸ ಪತ್ತೆಗೆ ಜಾಲ ಬೀಸಿದ್ದಾರೆ.

ಹುಣಸೂರು ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಇಬ್ಬರು ಆರೋಪಿಗಳು ಒಡಿಶಾದಲ್ಲಿ ಕೂಡ ಓರ್ವ ಜಾಲದಲ್ಲಿ ಇದ್ದ ಬಗ್ಗೆ ಬಾಯ್ಬಿಟ್ಟಿದ್ದರು. ಈ ಸಂಬಂದ ಅಲ್ಲಿಗೆ ತೆರಳಿದ್ದ ಪೊಲೀಸರು, ಸ್ಥಳೀಯ ಪೊಲೀಸರ ನೆರವಿನಿಂದ ಮಾದಕ ವಸ್ತು ಸಾಗಾಣೆ ಮಾಡುತ್ತಿದ್ದ ರಾಜಾ ಸಹಾನಿ ಎಂಬಾತನನ್ನು ಬಂಧಿಸಿದ್ದು, ಅಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಿ ಮೈಸೂರಿಗೆ ಕರೆತರುತ್ತಿದ್ದಾರೆ.

ಎಫ್‌ಎಸ್‌ಎಲ್ ವರದಿಯಲ್ಲಿ ಸಾಬೀತು:  ಹುಣಸೂರಿನಲ್ಲಿ ವಶಕ್ಕೆ ಪಡೆಯಲಾಗಿದ್ದ ೭.೩೫ ಕೆಜಿ ಮೆಫೆ ಡ್ರೋನ್, ೪೧ ಕೆಜಿ ಮಾದಕ ವಸ್ತು ತಯಾರಿಕೆಯ ಕಚ್ಛಾ ವಸ್ತು ಸೇರಿದಂತೆ ಸುಮಾರು ೪೮ ಕೆಜಿ ಮಾದಕ ವಸ್ತುಗಳನ್ನು ಜಿಲ್ಲಾ ಪೊಲೀಸರು ನ್ಯಾಯಾ ಲಯದಲ್ಲಿ ತೆರಳಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅವುಗಳನ್ನು ಎಫ್ ಎಸ್‌ಎಲ್ ವಿಭಾಗಕ್ಕೆ ರವಾನಿಸಿದ್ದರು. ಇದೀಗ ಅಲ್ಲಿ ದೊರಕಿದ್ದು ಮಾದಕ ವಸ್ತುಗಳು ಎಂಬುದು ವರದಿಯಲ್ಲಿ ಸಾಬೀತಾಗಿದೆ.

ಆಂದೋಲನ ಡೆಸ್ಕ್

Recent Posts

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ವಿಧಿವಶ

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…

1 hour ago

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

11 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

23 hours ago