Andolana originals

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಅಂತರರಾಜ್ಯ ಮಾದಕ ಜಾಲದ ಮೂವರನ್ನು ಬಂಧಿಸಿದ್ದಾರೆ.

ಹುಣಸೂರಿನ ರತ್ನಪುರಿ ಬಳಿಯ ದಾಸನಪುರ ತೋಟದ ಮನೆಯ ಮೇಲೆ ದಾಳಿ ನಡೆಸಿದ್ದ ಜಿಲ್ಲಾ ಪೊಲೀಸರ ತಂಡ ಅಲ್ಲಿದ್ದ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಲ್ಲದೆ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿತ್ತು.

ನಂತರ ಇಬ್ಬರೂ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳ ಪಡಿಸಿದ್ದು, ಅವರುಗಳ ಸಿಮ್ ಕಾರ್ಡ್‌ಗಳ ಪರಿಶೀಲನೆ ನಡೆಸಿದ ವೇಳೆ ಆರೋಪಿಗಳ ಸಂಪರ್ಕದಲ್ಲಿ ಇದ್ದ ಇಬ್ಬರು ಮುಂಬೈ ಹಾಗೂ ಒಬ್ಬರು ಒಡಿಶಾದ ಕಟಕ್‌ನಲ್ಲಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿತ್ತು.

ಹೀಗಾಗಿ ಜಿಲ್ಲಾ ಎಸ್‌ಪಿ ಅವರ ಸೂಚನೆ ಮೇರೆಗೆ ಐದು ಮಂದಿ ಪೊಲೀಸ್ ಅಧಿಕಾರಿಗಳ ತಂಡ ಬುಧವಾರ ಮುಂಬೈ ಹಾಗೂ ಒಡಿಶಾಗೆ ತೆರಳಿತ್ತು.

ನಂತರ ಅಲ್ಲಿನ ಪೊಲೀಸ್ ನೆರವಿನೊಂದಿಗೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಮತ್ತೊಬ್ಬನ ವಿಳಾಸ ಪತ್ತೆಗೆ ಜಾಲ ಬೀಸಿದ್ದಾರೆ.

ಹುಣಸೂರು ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಇಬ್ಬರು ಆರೋಪಿಗಳು ಒಡಿಶಾದಲ್ಲಿ ಕೂಡ ಓರ್ವ ಜಾಲದಲ್ಲಿ ಇದ್ದ ಬಗ್ಗೆ ಬಾಯ್ಬಿಟ್ಟಿದ್ದರು. ಈ ಸಂಬಂದ ಅಲ್ಲಿಗೆ ತೆರಳಿದ್ದ ಪೊಲೀಸರು, ಸ್ಥಳೀಯ ಪೊಲೀಸರ ನೆರವಿನಿಂದ ಮಾದಕ ವಸ್ತು ಸಾಗಾಣೆ ಮಾಡುತ್ತಿದ್ದ ರಾಜಾ ಸಹಾನಿ ಎಂಬಾತನನ್ನು ಬಂಧಿಸಿದ್ದು, ಅಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಿ ಮೈಸೂರಿಗೆ ಕರೆತರುತ್ತಿದ್ದಾರೆ.

ಎಫ್‌ಎಸ್‌ಎಲ್ ವರದಿಯಲ್ಲಿ ಸಾಬೀತು:  ಹುಣಸೂರಿನಲ್ಲಿ ವಶಕ್ಕೆ ಪಡೆಯಲಾಗಿದ್ದ ೭.೩೫ ಕೆಜಿ ಮೆಫೆ ಡ್ರೋನ್, ೪೧ ಕೆಜಿ ಮಾದಕ ವಸ್ತು ತಯಾರಿಕೆಯ ಕಚ್ಛಾ ವಸ್ತು ಸೇರಿದಂತೆ ಸುಮಾರು ೪೮ ಕೆಜಿ ಮಾದಕ ವಸ್ತುಗಳನ್ನು ಜಿಲ್ಲಾ ಪೊಲೀಸರು ನ್ಯಾಯಾ ಲಯದಲ್ಲಿ ತೆರಳಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅವುಗಳನ್ನು ಎಫ್ ಎಸ್‌ಎಲ್ ವಿಭಾಗಕ್ಕೆ ರವಾನಿಸಿದ್ದರು. ಇದೀಗ ಅಲ್ಲಿ ದೊರಕಿದ್ದು ಮಾದಕ ವಸ್ತುಗಳು ಎಂಬುದು ವರದಿಯಲ್ಲಿ ಸಾಬೀತಾಗಿದೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

7 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

9 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

9 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

9 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago