Mysore
14
overcast clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

ಜಾಲತಾಣದ ಮೇಲೆ ಪೊಲೀಸರ ಹದ್ದಿನ ಕಣ್ಣು

ಶಾಂತಿ ಕದಡುವ ಸಂದೇಶ ಹಂಚಿಕೊಂಡರೆ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಮಡಿಕೇರಿ: ಕಟ್ಟೆಮಾಡು ಶ್ರೀ ಮಹಾಮೃತ್ಯುಂ ಜಯ ದೇವಾಲಯದ ವಸ್ತ್ರಸಂಹಿತೆ ವಿವಾದದ ಬೆನ್ನಲ್ಲೇ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು, ಸುಮೋಟೋ(ಸ್ವಯಂ ಪ್ರೇರಿತ ) ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯದಲ್ಲಿ ಸಂಘರ್ಷ ಏರ್ಪಟ್ಟ ಬೆನ್ನಲ್ಲೇ ಸಾಮಾಜಿಕ ಜಾಲ ತಾಣಗಳಲ್ಲಿಯೂ ಎರಡು ಜನಾಂಗಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಶಾಂತಿ ಕದಡುವ ಸಂದೇಶಗಳು ಹರಿದಾಡುತ್ತಿವೆ. ಒಂದು ಸಮು ದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಕೆರಳಿಸುವಂತಹ ಸಂದೇಶಗಳು ಜಾಲತಾಣಗಳಲ್ಲಿ ಕಾಣಿಸಿಕೊಳ್ಳುತ್ತಿವೆ .

ಈ ನಡುವೆ ಕೆಲವು ಸುಳ್ಳು ಸಂದೇಶಗಳು ಕೂಡ ಹರಿದಾಡಿವೆ. ಯಾವುದೋ ವಿಚಾರಕ್ಕೆ ಇನ್ಯಾವುದೋ ವಿಚಾರವನ್ನು ಸಂಬಂಽಸಿ ಹೇಳಿಕೆ ಗಳನ್ನು ಕೂಡ ನೀಡಲಾಗಿದೆ. ಇನ್ನು ಕೆಲವರು ತಮಗೆ ಬಂದ ಸಂದೇಶಗಳನ್ನು ಗ್ರೂಪ್‌ಗಳಿಗೆ ಫಾರ್ವರ್ಡ್ ಮಾಡುವ ಕೆಲಸವನ್ನೂ ಮಾಡಿದ್ದಾರೆ. ಆಡಿಯೋ, ವಿಡಿಯೋಗಳನ್ನು ಕೂಡ ಹರಿಯಬಿಡಲಾಗಿದೆ. ಕೊಡಗು ಸೂಕ್ಷ ಜಿಲ್ಲೆಯಾಗಿದ್ದರೂ ಎಲ್ಲಾ ಜನಾಂಗದವರು ಪರಸ್ಪರ ಶಾಂತಿ ಸಹಬಾಳ್ವೆಯ ಜೀವನ ಸಾಗಿಸುತ್ತಿದ್ದಾರೆ. ಆದರೆ, ಕೆಲವರಿಂದ ಶಾಂತಿಗೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ. ಇದರ ಬಹುಪಾಲು ಕೆಲಸ ಸಾಮಾಜಿಕ ಜಾಲ ತಾಣಗಳಲ್ಲಿ ನಡೆಯುತ್ತಿದೆ. ಒಂದು ವಿಚಾರದ ಸಂಪೂರ್ಣ ಸತ್ಯಾಸತ್ಯತೆ ಅರಿಯದೆ ಕೋಮು ಸಂಘರ್ಷ ಸೃಷ್ಟಿಸುವ ಸಂದೇಶ ತೇಲಿಬಿಡಲಾಗುತ್ತಿದೆ.

ಈಗಾಗಲೇ ಎರಡೂ ಸಮುದಾಯಗಳ ಮುಖಂಡ ರೊಂದಿಗೆ ನಡೆದ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿದೆ. ಶಾಂತಿ ಕದಡಲು ಯತ್ನಿ ಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖಂಡರು ಕೂಡ ಕೋರಿದ್ದಾರೆ. ಯಾರೂ ಕೂಡ ಇಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಆಯಾ ಸಮುದಾಯದ ಪ್ರಮುಖರು ಹಾಗೂ ಹಿರಿಯರು ಕರೆ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮನವಿ ಮಾಡಿದ್ದಾರೆ.

ಸದ್ಯ ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ವಿನಾಕಾರಣ ಶಾಂತಿ ಕದಡಲು ಯತ್ನಿಸುವಂತಹ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೇಲಿಬಿಟ್ಟಲ್ಲಿ ಸುಮೋಟೋ ಕೇಸ್ ದಾಖಲಿಸಿ ಕ್ರಮಕೈಗೊಳ್ಳಲಾಗುತ್ತಿದೆ. ೬೨ ವರ್ಷದ ಮಹಿಳೆ ಸೇರಿದಂತೆ ಮೂವರನ್ನು ಈ ಸಂಬಂಧ ಬಂಽಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮತ್ತೆ ಇಂತಹ ಘಟನೆ ಮುಂದುವರಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.

ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂ ಜಯ ದೇವಾಲಯದಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ಉಂಟಾದ ಗೊಂದಲದ ಬಳಿಕ ಎರಡು ಸಮುದಾಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅವಹೇಳನ ಮಾಡುತ್ತಿರುವುದು ಕಂಡು ಬಂದಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿ ಕೊಂಡು ಕಾನೂನು ಕ್ರಮ ಕೈಗೊಳ್ಳಲಿದೆ. ಯಾವುದೇ ಸಮುದಾಯಗಳನ್ನು ಗುರಿಯಾಗಿ ಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. -ಕೆ. ರಾಮರಾಜನ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

 

Tags:
error: Content is protected !!