ಶಾಂತಿ ಕದಡುವ ಸಂದೇಶ ಹಂಚಿಕೊಂಡರೆ ಸ್ವಯಂ ಪ್ರೇರಿತ ಪ್ರಕರಣ ದಾಖಲು
ಮಡಿಕೇರಿ: ಕಟ್ಟೆಮಾಡು ಶ್ರೀ ಮಹಾಮೃತ್ಯುಂ ಜಯ ದೇವಾಲಯದ ವಸ್ತ್ರಸಂಹಿತೆ ವಿವಾದದ ಬೆನ್ನಲ್ಲೇ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು, ಸುಮೋಟೋ(ಸ್ವಯಂ ಪ್ರೇರಿತ ) ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.
ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯದಲ್ಲಿ ಸಂಘರ್ಷ ಏರ್ಪಟ್ಟ ಬೆನ್ನಲ್ಲೇ ಸಾಮಾಜಿಕ ಜಾಲ ತಾಣಗಳಲ್ಲಿಯೂ ಎರಡು ಜನಾಂಗಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಶಾಂತಿ ಕದಡುವ ಸಂದೇಶಗಳು ಹರಿದಾಡುತ್ತಿವೆ. ಒಂದು ಸಮು ದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಕೆರಳಿಸುವಂತಹ ಸಂದೇಶಗಳು ಜಾಲತಾಣಗಳಲ್ಲಿ ಕಾಣಿಸಿಕೊಳ್ಳುತ್ತಿವೆ .
ಈ ನಡುವೆ ಕೆಲವು ಸುಳ್ಳು ಸಂದೇಶಗಳು ಕೂಡ ಹರಿದಾಡಿವೆ. ಯಾವುದೋ ವಿಚಾರಕ್ಕೆ ಇನ್ಯಾವುದೋ ವಿಚಾರವನ್ನು ಸಂಬಂಽಸಿ ಹೇಳಿಕೆ ಗಳನ್ನು ಕೂಡ ನೀಡಲಾಗಿದೆ. ಇನ್ನು ಕೆಲವರು ತಮಗೆ ಬಂದ ಸಂದೇಶಗಳನ್ನು ಗ್ರೂಪ್ಗಳಿಗೆ ಫಾರ್ವರ್ಡ್ ಮಾಡುವ ಕೆಲಸವನ್ನೂ ಮಾಡಿದ್ದಾರೆ. ಆಡಿಯೋ, ವಿಡಿಯೋಗಳನ್ನು ಕೂಡ ಹರಿಯಬಿಡಲಾಗಿದೆ. ಕೊಡಗು ಸೂಕ್ಷ ಜಿಲ್ಲೆಯಾಗಿದ್ದರೂ ಎಲ್ಲಾ ಜನಾಂಗದವರು ಪರಸ್ಪರ ಶಾಂತಿ ಸಹಬಾಳ್ವೆಯ ಜೀವನ ಸಾಗಿಸುತ್ತಿದ್ದಾರೆ. ಆದರೆ, ಕೆಲವರಿಂದ ಶಾಂತಿಗೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ. ಇದರ ಬಹುಪಾಲು ಕೆಲಸ ಸಾಮಾಜಿಕ ಜಾಲ ತಾಣಗಳಲ್ಲಿ ನಡೆಯುತ್ತಿದೆ. ಒಂದು ವಿಚಾರದ ಸಂಪೂರ್ಣ ಸತ್ಯಾಸತ್ಯತೆ ಅರಿಯದೆ ಕೋಮು ಸಂಘರ್ಷ ಸೃಷ್ಟಿಸುವ ಸಂದೇಶ ತೇಲಿಬಿಡಲಾಗುತ್ತಿದೆ.
ಈಗಾಗಲೇ ಎರಡೂ ಸಮುದಾಯಗಳ ಮುಖಂಡ ರೊಂದಿಗೆ ನಡೆದ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿದೆ. ಶಾಂತಿ ಕದಡಲು ಯತ್ನಿ ಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖಂಡರು ಕೂಡ ಕೋರಿದ್ದಾರೆ. ಯಾರೂ ಕೂಡ ಇಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಆಯಾ ಸಮುದಾಯದ ಪ್ರಮುಖರು ಹಾಗೂ ಹಿರಿಯರು ಕರೆ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮನವಿ ಮಾಡಿದ್ದಾರೆ.
ಸದ್ಯ ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ವಿನಾಕಾರಣ ಶಾಂತಿ ಕದಡಲು ಯತ್ನಿಸುವಂತಹ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೇಲಿಬಿಟ್ಟಲ್ಲಿ ಸುಮೋಟೋ ಕೇಸ್ ದಾಖಲಿಸಿ ಕ್ರಮಕೈಗೊಳ್ಳಲಾಗುತ್ತಿದೆ. ೬೨ ವರ್ಷದ ಮಹಿಳೆ ಸೇರಿದಂತೆ ಮೂವರನ್ನು ಈ ಸಂಬಂಧ ಬಂಽಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮತ್ತೆ ಇಂತಹ ಘಟನೆ ಮುಂದುವರಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.
ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂ ಜಯ ದೇವಾಲಯದಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ಉಂಟಾದ ಗೊಂದಲದ ಬಳಿಕ ಎರಡು ಸಮುದಾಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅವಹೇಳನ ಮಾಡುತ್ತಿರುವುದು ಕಂಡು ಬಂದಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿ ಕೊಂಡು ಕಾನೂನು ಕ್ರಮ ಕೈಗೊಳ್ಳಲಿದೆ. ಯಾವುದೇ ಸಮುದಾಯಗಳನ್ನು ಗುರಿಯಾಗಿ ಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. -ಕೆ. ರಾಮರಾಜನ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…