Andolana originals

ಜಾಲತಾಣದ ಮೇಲೆ ಪೊಲೀಸರ ಹದ್ದಿನ ಕಣ್ಣು

ಶಾಂತಿ ಕದಡುವ ಸಂದೇಶ ಹಂಚಿಕೊಂಡರೆ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಮಡಿಕೇರಿ: ಕಟ್ಟೆಮಾಡು ಶ್ರೀ ಮಹಾಮೃತ್ಯುಂ ಜಯ ದೇವಾಲಯದ ವಸ್ತ್ರಸಂಹಿತೆ ವಿವಾದದ ಬೆನ್ನಲ್ಲೇ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು, ಸುಮೋಟೋ(ಸ್ವಯಂ ಪ್ರೇರಿತ ) ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯದಲ್ಲಿ ಸಂಘರ್ಷ ಏರ್ಪಟ್ಟ ಬೆನ್ನಲ್ಲೇ ಸಾಮಾಜಿಕ ಜಾಲ ತಾಣಗಳಲ್ಲಿಯೂ ಎರಡು ಜನಾಂಗಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಶಾಂತಿ ಕದಡುವ ಸಂದೇಶಗಳು ಹರಿದಾಡುತ್ತಿವೆ. ಒಂದು ಸಮು ದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಕೆರಳಿಸುವಂತಹ ಸಂದೇಶಗಳು ಜಾಲತಾಣಗಳಲ್ಲಿ ಕಾಣಿಸಿಕೊಳ್ಳುತ್ತಿವೆ .

ಈ ನಡುವೆ ಕೆಲವು ಸುಳ್ಳು ಸಂದೇಶಗಳು ಕೂಡ ಹರಿದಾಡಿವೆ. ಯಾವುದೋ ವಿಚಾರಕ್ಕೆ ಇನ್ಯಾವುದೋ ವಿಚಾರವನ್ನು ಸಂಬಂಽಸಿ ಹೇಳಿಕೆ ಗಳನ್ನು ಕೂಡ ನೀಡಲಾಗಿದೆ. ಇನ್ನು ಕೆಲವರು ತಮಗೆ ಬಂದ ಸಂದೇಶಗಳನ್ನು ಗ್ರೂಪ್‌ಗಳಿಗೆ ಫಾರ್ವರ್ಡ್ ಮಾಡುವ ಕೆಲಸವನ್ನೂ ಮಾಡಿದ್ದಾರೆ. ಆಡಿಯೋ, ವಿಡಿಯೋಗಳನ್ನು ಕೂಡ ಹರಿಯಬಿಡಲಾಗಿದೆ. ಕೊಡಗು ಸೂಕ್ಷ ಜಿಲ್ಲೆಯಾಗಿದ್ದರೂ ಎಲ್ಲಾ ಜನಾಂಗದವರು ಪರಸ್ಪರ ಶಾಂತಿ ಸಹಬಾಳ್ವೆಯ ಜೀವನ ಸಾಗಿಸುತ್ತಿದ್ದಾರೆ. ಆದರೆ, ಕೆಲವರಿಂದ ಶಾಂತಿಗೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ. ಇದರ ಬಹುಪಾಲು ಕೆಲಸ ಸಾಮಾಜಿಕ ಜಾಲ ತಾಣಗಳಲ್ಲಿ ನಡೆಯುತ್ತಿದೆ. ಒಂದು ವಿಚಾರದ ಸಂಪೂರ್ಣ ಸತ್ಯಾಸತ್ಯತೆ ಅರಿಯದೆ ಕೋಮು ಸಂಘರ್ಷ ಸೃಷ್ಟಿಸುವ ಸಂದೇಶ ತೇಲಿಬಿಡಲಾಗುತ್ತಿದೆ.

ಈಗಾಗಲೇ ಎರಡೂ ಸಮುದಾಯಗಳ ಮುಖಂಡ ರೊಂದಿಗೆ ನಡೆದ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿದೆ. ಶಾಂತಿ ಕದಡಲು ಯತ್ನಿ ಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖಂಡರು ಕೂಡ ಕೋರಿದ್ದಾರೆ. ಯಾರೂ ಕೂಡ ಇಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಆಯಾ ಸಮುದಾಯದ ಪ್ರಮುಖರು ಹಾಗೂ ಹಿರಿಯರು ಕರೆ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮನವಿ ಮಾಡಿದ್ದಾರೆ.

ಸದ್ಯ ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ವಿನಾಕಾರಣ ಶಾಂತಿ ಕದಡಲು ಯತ್ನಿಸುವಂತಹ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೇಲಿಬಿಟ್ಟಲ್ಲಿ ಸುಮೋಟೋ ಕೇಸ್ ದಾಖಲಿಸಿ ಕ್ರಮಕೈಗೊಳ್ಳಲಾಗುತ್ತಿದೆ. ೬೨ ವರ್ಷದ ಮಹಿಳೆ ಸೇರಿದಂತೆ ಮೂವರನ್ನು ಈ ಸಂಬಂಧ ಬಂಽಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮತ್ತೆ ಇಂತಹ ಘಟನೆ ಮುಂದುವರಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.

ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂ ಜಯ ದೇವಾಲಯದಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ಉಂಟಾದ ಗೊಂದಲದ ಬಳಿಕ ಎರಡು ಸಮುದಾಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅವಹೇಳನ ಮಾಡುತ್ತಿರುವುದು ಕಂಡು ಬಂದಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿ ಕೊಂಡು ಕಾನೂನು ಕ್ರಮ ಕೈಗೊಳ್ಳಲಿದೆ. ಯಾವುದೇ ಸಮುದಾಯಗಳನ್ನು ಗುರಿಯಾಗಿ ಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. -ಕೆ. ರಾಮರಾಜನ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

 

ಆಂದೋಲನ ಡೆಸ್ಕ್

Recent Posts

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

11 seconds ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

12 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

24 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago