Andolana originals

ಕೂದಲು ಉದುರುವಿಕೆ ತಡೆಯಲು ಸುಲಭ ಮನೆಮದ್ದು

ಈರುಳ್ಳಿ ಪೇಸ್ಟ್: ಈರುಳ್ಳಿ ಮನುಷ್ಯನ ಆರೋಗ್ಯಕ್ಕೆ ಸಾಕಷ್ಟು ಉಪಯೋಗಗಳನ್ನು ನೀಡುತ್ತದೆ. ಅದರಲ್ಲಿಯೂ ಪ್ರಮುಖವಾಗಿ ಕೂದಲು ಉದುರುವಿಕೆ ತಡೆಗಟ್ಟಲು ಈರುಳ್ಳಿ ರಾಮಬಾಣ ಎಂದರೆ ತಪ್ಪಾಗಲಾರದು. ಇಂತಹ ಈರುಳಿಯನ್ನು ಪೇಸ್ಟ್ ಮಾಡಿ ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವಿಕೆಯನ್ನು ತಡೆಗಟ್ಟಬಹುದು. ಈರುಳ್ಳಿಯನ್ನು ಸಿಪ್ಪೆ ತೆಗೆದು, ಅರ್ಧ ಲೋಟ ನೀರು ಹಾಕಿಕೊಂಡು ರುಬ್ಬಿ ಪೇಸ್ಟ್ ಮಾಡಿಕೊಳ್ಳಬೇಕು. ನಂತರ ಆ ಪೇಸ್ಟ್ ಅನ್ನು ಕೂದಲಿನ ಬುಡದವರೆಗೂ ಹಚ್ಚಿ ಮಸಾಜ್ ಮಾಡಿಕೊಳ್ಳಬೇಕು. ಅರ್ಧ ಗಂಟೆಯವರೆಗೆ ಒಣಗಲು ಬಿಟ್ಟು, ನೈಸರ್ಗಿಕ ಶಾಂಪೂ ಬಳಸಿ ಕೂದಲನ್ನು ಚೆನ್ನಾಗಿ ತೊಳೆದುಕೊಳ್ಳಬೇಕು.

ನೆಲ್ಲಿಕಾಯಿ: ನೆಲ್ಲಿಕಾಯಿ ಕೂದಲು ರಕ್ಷಣೆಗೆ ಹೆಚ್ಚು ಪರಿಣಾಮ ಕಾರಿ ಎಂದರೆ ತಪ್ಪಲ್ಲ. ನೆಲ್ಲಿಕಾಯಿಯಲ್ಲಿ ಅಗಾಧ ಪ್ರಮಾಣದ ವಿಟಮಿನ್ ಸಿ ಇರುವುದರಿಂದ ಈ ಅಂಶವು ತಲೆಯ ನೆತ್ತಿಯ ಭಾಗದಲ್ಲಿ ರಕ್ತ ಸಂಚಾರವನ್ನು ಹೆಚ್ಚು ಮಾಡಿ, ತಲೆಕೂದಲಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರ ಮಾಡುತ್ತದೆ. ಮಾರುಕಟ್ಟೆ ಹಾಗೂ ಆಯುರ್ವೇದ ಅಂಗಡಿಗಳಲ್ಲಿ ನೆಲ್ಲಿಕಾಯಿ ಎಣ್ಣೆಯೂ ಲಭ್ಯವಿದೆ. ಹೀಗಾಗಿ ಸ್ನಾನ ಮಾಡುವ ಮುನ್ನ ನೆಲ್ಲಿಕಾಯಿ ಎಣ್ಣೆಯನ್ನು ತಲೆಗೆ ಹಚ್ಚಿಕೊಂಡು ಮಸಾಜ್ ಮಾಡುವುದ ರಿಂದ ಕೂದಲು ಉದುರುವಿಕೆ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.

ತೆಂಗಿನ ಎಣ್ಣೆ: ಸ್ನಾನಕ್ಕೂ ಮುನ್ನ ತಲೆಗೆ ಶುದ್ಧ ತೆಂಗಿನ ಎಣ್ಣೆ ಹಚ್ಚಿಕೊಂಡು, ಕೂದಲಿನ ಬುಡದವರೆಗೆ ನಯವಾಗಿ ಮಸಾಜ್ ಮಾಡುವುದರಿಂದ ನೆತ್ತಿಭಾಗದಲ್ಲಿ ಹೆಚ್ಚಿನ ರಕ್ತ ಸಂಚಾರ ದೊರಕುತ್ತದೆ. ಇದರಿಂದ ಕೂದಲಿನ ಬುಡಕ್ಕೆ ಪೋಷಣೆ ಸಿಕ್ಕಿ ಕೂದಲು ಬೆಳವಣಿಗೆಗೆ ಸಹಕಾರಿಯಾಗಲಿದೆ. ಎಣ್ಣೆಯನ್ನು ಬಿಸಿ ಮಾಡಿ ಬಳಸುವುದು ಹೆಚ್ಚು ಪರಿಣಾಮಕಾರಿ. ಕೂದಲು ಬಲಗೊಂಡು ವೇಗವಾಗಿ ಬೆಳವಣಿಗೆ ಹೊಂದುತ್ತದೆ. ಎಣ್ಣೆಯನ್ನು ಬಿಸಿ ಮಾಡಿ ಕೂದಲಿಗೆ ಮಸಾಜ್ ಮಾಡುವುದರಿಂದ ತಲೆಹೊಟ್ಟು, ಕೂದಲು ಒಣಗುವಿಕೆಯನ್ನು ತಡೆಗಟ್ಟಬಹುದು. ಇದರಿಂದ ಕೂದಲಿಗೆ ಹೊಳಪು ಬರುತ್ತದೆ.

ಕರಿಬೇವಿನ ಸೊಪ್ಪು: ಈ ಸೊಪ್ಪಿನಲ್ಲಿ ಪ್ರೊಟೀನ್ ಅಂಶ ಮತ್ತು ಬೀಟಾ – ಕೆರೋಟಿನ್ ಅಂಶ ಉನ್ನತ ಮಟ್ಟದಲ್ಲಿ ಕಂಡು ಬರುವುದರಿಂದ, ಕೂದಲು ಉದುರುವಿಕೆ ಯನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮೂರರಿಂದ ನಾಲ್ಕು ಚಮಚ ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ ಬಳಿಕ ಆ ಎಣ್ಣೆಗೆ ಕರಿಬೇವಿನ ಸೊಪ್ಪನ್ನು ಹಾಕಿ, ಚೆನ್ನಾಗಿ ಬಿಸಿ ಮಾಡಿಕೊಳ್ಳಿ. ಹಾಗೆ ಎಣ್ಣೆಯಲ್ಲಿ ಬಿಸಿಯಾಗಲು ಬಿಡಿ. ಈ ಮಿಶ್ರಣ ತಣ್ಣಗಾದ ನಂತರ ಸೋಸಿಕೊಂಡು ಕೂದಲಿಗೆ ಹಚ್ಚಿ ಮಸಾಜ್ ಮಾಡಿ, ಸುಮಾರು ಒಂದು ಗಂಟೆಯ ಕಾಲ ಹಾಗೆ ಬಿಟ್ಟು ನಂತರ ಶಾಂಪೂವಿನಿಂದ ತಲೆ ತೊಳೆದು ಕೊಳ್ಳಿ. ಹೀಗೆ ಮಾಡುವುದರಿಂದ ತಲೆಕೂದಲು ಉದುರುವುದನ್ನು ತಡೆಗಟ್ಟಿ ನೀಳವಾಗಿ ಬೆಳೆಯಲು ಸಹಕಾರಿಯಾಗುತ್ತದೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

5 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

5 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

10 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

10 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

10 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

10 hours ago