Andolana originals

ಕೂದಲು ಉದುರುವಿಕೆ ತಡೆಯಲು ಸುಲಭ ಮನೆಮದ್ದು

ಈರುಳ್ಳಿ ಪೇಸ್ಟ್: ಈರುಳ್ಳಿ ಮನುಷ್ಯನ ಆರೋಗ್ಯಕ್ಕೆ ಸಾಕಷ್ಟು ಉಪಯೋಗಗಳನ್ನು ನೀಡುತ್ತದೆ. ಅದರಲ್ಲಿಯೂ ಪ್ರಮುಖವಾಗಿ ಕೂದಲು ಉದುರುವಿಕೆ ತಡೆಗಟ್ಟಲು ಈರುಳ್ಳಿ ರಾಮಬಾಣ ಎಂದರೆ ತಪ್ಪಾಗಲಾರದು. ಇಂತಹ ಈರುಳಿಯನ್ನು ಪೇಸ್ಟ್ ಮಾಡಿ ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವಿಕೆಯನ್ನು ತಡೆಗಟ್ಟಬಹುದು. ಈರುಳ್ಳಿಯನ್ನು ಸಿಪ್ಪೆ ತೆಗೆದು, ಅರ್ಧ ಲೋಟ ನೀರು ಹಾಕಿಕೊಂಡು ರುಬ್ಬಿ ಪೇಸ್ಟ್ ಮಾಡಿಕೊಳ್ಳಬೇಕು. ನಂತರ ಆ ಪೇಸ್ಟ್ ಅನ್ನು ಕೂದಲಿನ ಬುಡದವರೆಗೂ ಹಚ್ಚಿ ಮಸಾಜ್ ಮಾಡಿಕೊಳ್ಳಬೇಕು. ಅರ್ಧ ಗಂಟೆಯವರೆಗೆ ಒಣಗಲು ಬಿಟ್ಟು, ನೈಸರ್ಗಿಕ ಶಾಂಪೂ ಬಳಸಿ ಕೂದಲನ್ನು ಚೆನ್ನಾಗಿ ತೊಳೆದುಕೊಳ್ಳಬೇಕು.

ನೆಲ್ಲಿಕಾಯಿ: ನೆಲ್ಲಿಕಾಯಿ ಕೂದಲು ರಕ್ಷಣೆಗೆ ಹೆಚ್ಚು ಪರಿಣಾಮ ಕಾರಿ ಎಂದರೆ ತಪ್ಪಲ್ಲ. ನೆಲ್ಲಿಕಾಯಿಯಲ್ಲಿ ಅಗಾಧ ಪ್ರಮಾಣದ ವಿಟಮಿನ್ ಸಿ ಇರುವುದರಿಂದ ಈ ಅಂಶವು ತಲೆಯ ನೆತ್ತಿಯ ಭಾಗದಲ್ಲಿ ರಕ್ತ ಸಂಚಾರವನ್ನು ಹೆಚ್ಚು ಮಾಡಿ, ತಲೆಕೂದಲಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರ ಮಾಡುತ್ತದೆ. ಮಾರುಕಟ್ಟೆ ಹಾಗೂ ಆಯುರ್ವೇದ ಅಂಗಡಿಗಳಲ್ಲಿ ನೆಲ್ಲಿಕಾಯಿ ಎಣ್ಣೆಯೂ ಲಭ್ಯವಿದೆ. ಹೀಗಾಗಿ ಸ್ನಾನ ಮಾಡುವ ಮುನ್ನ ನೆಲ್ಲಿಕಾಯಿ ಎಣ್ಣೆಯನ್ನು ತಲೆಗೆ ಹಚ್ಚಿಕೊಂಡು ಮಸಾಜ್ ಮಾಡುವುದ ರಿಂದ ಕೂದಲು ಉದುರುವಿಕೆ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.

ತೆಂಗಿನ ಎಣ್ಣೆ: ಸ್ನಾನಕ್ಕೂ ಮುನ್ನ ತಲೆಗೆ ಶುದ್ಧ ತೆಂಗಿನ ಎಣ್ಣೆ ಹಚ್ಚಿಕೊಂಡು, ಕೂದಲಿನ ಬುಡದವರೆಗೆ ನಯವಾಗಿ ಮಸಾಜ್ ಮಾಡುವುದರಿಂದ ನೆತ್ತಿಭಾಗದಲ್ಲಿ ಹೆಚ್ಚಿನ ರಕ್ತ ಸಂಚಾರ ದೊರಕುತ್ತದೆ. ಇದರಿಂದ ಕೂದಲಿನ ಬುಡಕ್ಕೆ ಪೋಷಣೆ ಸಿಕ್ಕಿ ಕೂದಲು ಬೆಳವಣಿಗೆಗೆ ಸಹಕಾರಿಯಾಗಲಿದೆ. ಎಣ್ಣೆಯನ್ನು ಬಿಸಿ ಮಾಡಿ ಬಳಸುವುದು ಹೆಚ್ಚು ಪರಿಣಾಮಕಾರಿ. ಕೂದಲು ಬಲಗೊಂಡು ವೇಗವಾಗಿ ಬೆಳವಣಿಗೆ ಹೊಂದುತ್ತದೆ. ಎಣ್ಣೆಯನ್ನು ಬಿಸಿ ಮಾಡಿ ಕೂದಲಿಗೆ ಮಸಾಜ್ ಮಾಡುವುದರಿಂದ ತಲೆಹೊಟ್ಟು, ಕೂದಲು ಒಣಗುವಿಕೆಯನ್ನು ತಡೆಗಟ್ಟಬಹುದು. ಇದರಿಂದ ಕೂದಲಿಗೆ ಹೊಳಪು ಬರುತ್ತದೆ.

ಕರಿಬೇವಿನ ಸೊಪ್ಪು: ಈ ಸೊಪ್ಪಿನಲ್ಲಿ ಪ್ರೊಟೀನ್ ಅಂಶ ಮತ್ತು ಬೀಟಾ – ಕೆರೋಟಿನ್ ಅಂಶ ಉನ್ನತ ಮಟ್ಟದಲ್ಲಿ ಕಂಡು ಬರುವುದರಿಂದ, ಕೂದಲು ಉದುರುವಿಕೆ ಯನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮೂರರಿಂದ ನಾಲ್ಕು ಚಮಚ ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ ಬಳಿಕ ಆ ಎಣ್ಣೆಗೆ ಕರಿಬೇವಿನ ಸೊಪ್ಪನ್ನು ಹಾಕಿ, ಚೆನ್ನಾಗಿ ಬಿಸಿ ಮಾಡಿಕೊಳ್ಳಿ. ಹಾಗೆ ಎಣ್ಣೆಯಲ್ಲಿ ಬಿಸಿಯಾಗಲು ಬಿಡಿ. ಈ ಮಿಶ್ರಣ ತಣ್ಣಗಾದ ನಂತರ ಸೋಸಿಕೊಂಡು ಕೂದಲಿಗೆ ಹಚ್ಚಿ ಮಸಾಜ್ ಮಾಡಿ, ಸುಮಾರು ಒಂದು ಗಂಟೆಯ ಕಾಲ ಹಾಗೆ ಬಿಟ್ಟು ನಂತರ ಶಾಂಪೂವಿನಿಂದ ತಲೆ ತೊಳೆದು ಕೊಳ್ಳಿ. ಹೀಗೆ ಮಾಡುವುದರಿಂದ ತಲೆಕೂದಲು ಉದುರುವುದನ್ನು ತಡೆಗಟ್ಟಿ ನೀಳವಾಗಿ ಬೆಳೆಯಲು ಸಹಕಾರಿಯಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

12 mins ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

3 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

4 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

7 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

7 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

7 hours ago