Andolana originals

ಅಂಬಾರಿ ಹೊರುವ ಭರವಸೆ ಮೂಡಿಸಿರುವ ಏಕಲವ್ಯ!

• ದಾ.ರಾ.ಮಹೇಶ

ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವಲಯದ ಮತ್ತಿಗೋಡು ಸಾಕಾನೆ ಶಿಬಿರದಲ್ಲಿರುವ 39 ವರ್ಷದ ಏಕಲವ್ಯ ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಆಲ್ಲೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶ ದಲ್ಲಿ ಗ್ರಾಮಗಳಿಗೆ ಬಂದು ಉಪಟಳ ನೀಡು ತ್ತಿದ್ದ ‘ಮೂಡಿಗೆರೆ ಭೈರ’ ಎಂದೇ ಸ್ಥಳೀಯರಿಂದ ಕರೆಸಿಕೊಳ್ಳುತ್ತಿದ್ದ ಆನೆಯೇ ಈ ಏಕಲವ್ಯ.

ಚಿಕ್ಕಮಗಳೂರು ಜಿಲ್ಲೆಯ ಮೂಡಿ ಗೆರೆ, ಆಲ್ಲೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ 2020ರಿಂದ ಎರಡು ವರ್ಷ ಪದೇ ಪದೇ ಕಾಣಿಸಿ ಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದಲ್ಲದೆ, ಆಕಸ್ಮಿಕವಾಗಿ ಎದುರಾದ ಮೂವರ ಮೇಲೆ ದಾಳಿ ನಡೆಸಿ ಅವರ ಸಾವಿಗೆ ಕಾರಣವಾಗಿದ್ದ. ಅದೇ ಸಂದರ್ಭದಲ್ಲಿ ಎರಡು ಕಾಡಾನೆಗಳು ಸಂಚರಿಸುತ್ತಿದ್ದವಾದರೂ, ಮೂವರ ಮೇಲೆ ದಾಳಿ ನಡೆಸಿ ಸಾವಿಗೆ ಕಾರಣವಾದ ಆನೆ ‘ಭೈರನೇ’ ಎಂಬುದು ಖಚಿತ ವಾಗಿಲ್ಲದಿದ್ದರೂ ಸ್ಥಳೀಯರು ಮಾತ್ರ ಭೈರನತ್ತಲೇ ಬೆರಳು ತೋರಿಸಿದ್ದರು.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ 20218 ಜ.25ರಿಂದ ಮೂಡಿಗೆರೆಯ ಸುತ್ತ ಕಾರ್ಯಾಚರಣೆ ನಡೆಸಿತ್ತು. ದಸರಾ ಗಜಪಡೆ ನಾಯಕ ಅಭಿ ಮನ್ಯು, ಭೀಮ, ಧನಂ ಜಯ, ಪ್ರಶಾಂತ ಹಾಗೂ ಹರ್ಷ ನೊಂದಿಗೆ ಪಶು ವೈದ್ಯ ಡಾ. ರಮೇಶ ಹಾಗೂ ಇನ್ನಿತರರ ತಂಡ ಕಾರ್ಯಾಚರಣೆ ನಡೆಸಿ, 6 ದಿನಗಳಲ್ಲೇ ಭೈರ ನೊಂದಿಗೆ ಉಪಟಳ ನೀಡುತ್ತಿದ್ದ ಮತ್ತೊಂದು ಆನೆಯನ್ನು ಕೂಡ ಸೆರೆ ಹಿಡಿಯಲು ಮುಂದಾಗಿತ್ತು. ಆದರೆ, ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಮತ್ತೊಂದು ಆನೆಯಿಂದ ತೊಂದರೆಯಾಗಿಲ್ಲ. ಭೈರನನ್ನು ಮಾತ್ರ ಸೆರೆಹಿಡಿಯಿರಿ ಎಂದು ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ‘ಮೂಡಿಗೆರೆ ಭೈರ’ನನ್ನು 2022ರ ಫೆ.12ರಂದು ಮೂಡಿಗೆರೆ ಬಳಿ ಗುರುತಿಸಿ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದಿತ್ತು. ಬಳಿಕ ಅದನ್ನು ಮತ್ತಿಗೋಡು ಶಿಬಿರಕ್ಕೆ ಕರೆತಂದು ಕ್ರಾಲ್‌ನಲ್ಲಿಟ್ಟು ಪಳಗಿಸಲಾಗಿತ್ತು.

ಅಂಬಾರಿ ಹೊರುವ ಸಾಮರ್ಥ್ಯ: ಸೆರೆಹಿಡಿದ ಒಂದೇ ವರ್ಷದೊಳಗೆ ಸೌಮ್ಯ ಸ್ವಭಾವಿಯಾಗಿ ಮಾರ್ಪಾಡಾದ ಮೂಡಿಗೆರೆ ಭೈರನಿಗೆ ‘ಏಕಲವ್ಯ’ ಎಂದು ನಾಮಕರಣ ಮಾಡಲಾಯಿತು. 8 ತಿಂಗಳ ಹಿಂದೆಯೇ ಕ್ರಾಲ್‌ನಿಂದ ಹೊರಗೆ ಬಂದಿರುವ ಏಕಲವ್ಯ, ಮಾವುತ ಸೃಜನ್ ಹಾಗೂ ಎಸ್. ಇದಾಯತ್ ಅವರ ಆರೈಕೆಯಲ್ಲಿ ಪಳಗಿದೆ. ಹೇಳಿದಂತೆ ಕೇಳುವುದರೊಂದಿಗೆ ಮೃದು ಸ್ವಭಾವಿ ಯಾಗಿ ಮಾರ್ಪಟ್ಟಿದೆ. ಸಮ ತಟ್ಟಾದ ಬೆನ್ನು, ನಡಿಗೆಯಲ್ಲಿ ರಾಜಗಾಂಭೀರ್ಯ ಹೊಂದಿರುವ ಏಕಲವ್ಯ ಅಂಬಾರಿ ಹೊರಲು ಅರ್ಹತೆ ಹೊಂದಿದೆ ಎನ್ನುವುದು ಅಧಿಕಾರಿಗಳ ಅನಿಸಿಕೆ.

18 ತಿಂಗಳ ಹಿಂದೆ ಕಾಡಾನೆ, ಇದೀಗ ಸಾಕಾನೆ ‘ಏಕಲವ್ಯ’ನಾಗಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದೆ. ಹಳೆಯದನ್ನು ಮರೆತು ಹೊಸ ಅಧ್ಯಾಯ ಬರೆಯಲು ತವಕಿಸುತ್ತಿರುವ ಏಕಲವ್ಯ ಅಧಿಕಾರಿಗಳು ಮಾತ್ರ ವಲ್ಲದೆ, ಮತ್ತಿಗೋಡು ಕ್ಯಾಂಪ್ ನಲ್ಲಿರುವ ಎಲ್ಲಾ ಆನೆಗಳ ಮಾವುತ, ಕಾವಾಡಿಗಳ ಮೆಚ್ಚುಗೆಗೂ ಪಾತ್ರವಾಗಿದೆ. ಮೊದಲ ಹಂತದಲ್ಲೇ ಆಗಮಿ ಸಿರುವ ಏಕಲವ್ಯ ಸುಮಾರು 50 ದಿನ ಅರಮನೆ ಆವರಣದಲ್ಲಿದ್ದು, ಉತ್ಸವಕ್ಕೆ ತಾಲೀಮು ನಡೆಸಲಿದೆ.

ಆಂದೋಲನ ಡೆಸ್ಕ್

Recent Posts

ಬೇಸಿಗೆ ತಾಪಮಾನದಲ್ಲೂ ಉತ್ತಮ ಹೈನುಗಾರಿಕೆ

ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…

12 mins ago

ಉತ್ತರ ಕೊಡಗಿನ ಗ್ರಾಮೀಣ ಭಾಗದಲ್ಲಿ ಚಿರತೆ ಹಾವಳಿ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಉತ್ತರ ಕೊಡಗಿನ ಗ್ರಾಮೀಣ ಹಾಗೂ ಅರಣ್ಯದ ಅಂಚಿನ ಪ್ರದೇಶ ಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಚಲನವಲನ…

16 mins ago

ಇರಾನಿನ ಗಿಣಿ ಮತ್ತು ಹಿಂದೂಸ್ಥಾನದ ಗಿಣಿ

 ಶೇಷಾದ್ರಿ ಗಂಜೂರು ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದೇಶಗಳು ಮುಂದುವರಿಸಿರುವ ಯುದ್ಧ ಸದ್ಯಕ್ಕೆ ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಏತನ್ಮಧ್ಯೆ…

20 mins ago

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

12 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

12 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

13 hours ago