Andolana originals

ಅಂಬಾರಿ ಹೊರುವ ಭರವಸೆ ಮೂಡಿಸಿರುವ ಏಕಲವ್ಯ!

• ದಾ.ರಾ.ಮಹೇಶ

ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವಲಯದ ಮತ್ತಿಗೋಡು ಸಾಕಾನೆ ಶಿಬಿರದಲ್ಲಿರುವ 39 ವರ್ಷದ ಏಕಲವ್ಯ ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಆಲ್ಲೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶ ದಲ್ಲಿ ಗ್ರಾಮಗಳಿಗೆ ಬಂದು ಉಪಟಳ ನೀಡು ತ್ತಿದ್ದ ‘ಮೂಡಿಗೆರೆ ಭೈರ’ ಎಂದೇ ಸ್ಥಳೀಯರಿಂದ ಕರೆಸಿಕೊಳ್ಳುತ್ತಿದ್ದ ಆನೆಯೇ ಈ ಏಕಲವ್ಯ.

ಚಿಕ್ಕಮಗಳೂರು ಜಿಲ್ಲೆಯ ಮೂಡಿ ಗೆರೆ, ಆಲ್ಲೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ 2020ರಿಂದ ಎರಡು ವರ್ಷ ಪದೇ ಪದೇ ಕಾಣಿಸಿ ಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದಲ್ಲದೆ, ಆಕಸ್ಮಿಕವಾಗಿ ಎದುರಾದ ಮೂವರ ಮೇಲೆ ದಾಳಿ ನಡೆಸಿ ಅವರ ಸಾವಿಗೆ ಕಾರಣವಾಗಿದ್ದ. ಅದೇ ಸಂದರ್ಭದಲ್ಲಿ ಎರಡು ಕಾಡಾನೆಗಳು ಸಂಚರಿಸುತ್ತಿದ್ದವಾದರೂ, ಮೂವರ ಮೇಲೆ ದಾಳಿ ನಡೆಸಿ ಸಾವಿಗೆ ಕಾರಣವಾದ ಆನೆ ‘ಭೈರನೇ’ ಎಂಬುದು ಖಚಿತ ವಾಗಿಲ್ಲದಿದ್ದರೂ ಸ್ಥಳೀಯರು ಮಾತ್ರ ಭೈರನತ್ತಲೇ ಬೆರಳು ತೋರಿಸಿದ್ದರು.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ 20218 ಜ.25ರಿಂದ ಮೂಡಿಗೆರೆಯ ಸುತ್ತ ಕಾರ್ಯಾಚರಣೆ ನಡೆಸಿತ್ತು. ದಸರಾ ಗಜಪಡೆ ನಾಯಕ ಅಭಿ ಮನ್ಯು, ಭೀಮ, ಧನಂ ಜಯ, ಪ್ರಶಾಂತ ಹಾಗೂ ಹರ್ಷ ನೊಂದಿಗೆ ಪಶು ವೈದ್ಯ ಡಾ. ರಮೇಶ ಹಾಗೂ ಇನ್ನಿತರರ ತಂಡ ಕಾರ್ಯಾಚರಣೆ ನಡೆಸಿ, 6 ದಿನಗಳಲ್ಲೇ ಭೈರ ನೊಂದಿಗೆ ಉಪಟಳ ನೀಡುತ್ತಿದ್ದ ಮತ್ತೊಂದು ಆನೆಯನ್ನು ಕೂಡ ಸೆರೆ ಹಿಡಿಯಲು ಮುಂದಾಗಿತ್ತು. ಆದರೆ, ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಮತ್ತೊಂದು ಆನೆಯಿಂದ ತೊಂದರೆಯಾಗಿಲ್ಲ. ಭೈರನನ್ನು ಮಾತ್ರ ಸೆರೆಹಿಡಿಯಿರಿ ಎಂದು ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ‘ಮೂಡಿಗೆರೆ ಭೈರ’ನನ್ನು 2022ರ ಫೆ.12ರಂದು ಮೂಡಿಗೆರೆ ಬಳಿ ಗುರುತಿಸಿ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದಿತ್ತು. ಬಳಿಕ ಅದನ್ನು ಮತ್ತಿಗೋಡು ಶಿಬಿರಕ್ಕೆ ಕರೆತಂದು ಕ್ರಾಲ್‌ನಲ್ಲಿಟ್ಟು ಪಳಗಿಸಲಾಗಿತ್ತು.

ಅಂಬಾರಿ ಹೊರುವ ಸಾಮರ್ಥ್ಯ: ಸೆರೆಹಿಡಿದ ಒಂದೇ ವರ್ಷದೊಳಗೆ ಸೌಮ್ಯ ಸ್ವಭಾವಿಯಾಗಿ ಮಾರ್ಪಾಡಾದ ಮೂಡಿಗೆರೆ ಭೈರನಿಗೆ ‘ಏಕಲವ್ಯ’ ಎಂದು ನಾಮಕರಣ ಮಾಡಲಾಯಿತು. 8 ತಿಂಗಳ ಹಿಂದೆಯೇ ಕ್ರಾಲ್‌ನಿಂದ ಹೊರಗೆ ಬಂದಿರುವ ಏಕಲವ್ಯ, ಮಾವುತ ಸೃಜನ್ ಹಾಗೂ ಎಸ್. ಇದಾಯತ್ ಅವರ ಆರೈಕೆಯಲ್ಲಿ ಪಳಗಿದೆ. ಹೇಳಿದಂತೆ ಕೇಳುವುದರೊಂದಿಗೆ ಮೃದು ಸ್ವಭಾವಿ ಯಾಗಿ ಮಾರ್ಪಟ್ಟಿದೆ. ಸಮ ತಟ್ಟಾದ ಬೆನ್ನು, ನಡಿಗೆಯಲ್ಲಿ ರಾಜಗಾಂಭೀರ್ಯ ಹೊಂದಿರುವ ಏಕಲವ್ಯ ಅಂಬಾರಿ ಹೊರಲು ಅರ್ಹತೆ ಹೊಂದಿದೆ ಎನ್ನುವುದು ಅಧಿಕಾರಿಗಳ ಅನಿಸಿಕೆ.

18 ತಿಂಗಳ ಹಿಂದೆ ಕಾಡಾನೆ, ಇದೀಗ ಸಾಕಾನೆ ‘ಏಕಲವ್ಯ’ನಾಗಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದೆ. ಹಳೆಯದನ್ನು ಮರೆತು ಹೊಸ ಅಧ್ಯಾಯ ಬರೆಯಲು ತವಕಿಸುತ್ತಿರುವ ಏಕಲವ್ಯ ಅಧಿಕಾರಿಗಳು ಮಾತ್ರ ವಲ್ಲದೆ, ಮತ್ತಿಗೋಡು ಕ್ಯಾಂಪ್ ನಲ್ಲಿರುವ ಎಲ್ಲಾ ಆನೆಗಳ ಮಾವುತ, ಕಾವಾಡಿಗಳ ಮೆಚ್ಚುಗೆಗೂ ಪಾತ್ರವಾಗಿದೆ. ಮೊದಲ ಹಂತದಲ್ಲೇ ಆಗಮಿ ಸಿರುವ ಏಕಲವ್ಯ ಸುಮಾರು 50 ದಿನ ಅರಮನೆ ಆವರಣದಲ್ಲಿದ್ದು, ಉತ್ಸವಕ್ಕೆ ತಾಲೀಮು ನಡೆಸಲಿದೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

5 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

6 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

6 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

6 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

18 hours ago