Andolana originals

ಅಂಬಾರಿ ಹೊರುವ ಭರವಸೆ ಮೂಡಿಸಿರುವ ಏಕಲವ್ಯ!

• ದಾ.ರಾ.ಮಹೇಶ

ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವಲಯದ ಮತ್ತಿಗೋಡು ಸಾಕಾನೆ ಶಿಬಿರದಲ್ಲಿರುವ 39 ವರ್ಷದ ಏಕಲವ್ಯ ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಆಲ್ಲೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶ ದಲ್ಲಿ ಗ್ರಾಮಗಳಿಗೆ ಬಂದು ಉಪಟಳ ನೀಡು ತ್ತಿದ್ದ ‘ಮೂಡಿಗೆರೆ ಭೈರ’ ಎಂದೇ ಸ್ಥಳೀಯರಿಂದ ಕರೆಸಿಕೊಳ್ಳುತ್ತಿದ್ದ ಆನೆಯೇ ಈ ಏಕಲವ್ಯ.

ಚಿಕ್ಕಮಗಳೂರು ಜಿಲ್ಲೆಯ ಮೂಡಿ ಗೆರೆ, ಆಲ್ಲೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ 2020ರಿಂದ ಎರಡು ವರ್ಷ ಪದೇ ಪದೇ ಕಾಣಿಸಿ ಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದಲ್ಲದೆ, ಆಕಸ್ಮಿಕವಾಗಿ ಎದುರಾದ ಮೂವರ ಮೇಲೆ ದಾಳಿ ನಡೆಸಿ ಅವರ ಸಾವಿಗೆ ಕಾರಣವಾಗಿದ್ದ. ಅದೇ ಸಂದರ್ಭದಲ್ಲಿ ಎರಡು ಕಾಡಾನೆಗಳು ಸಂಚರಿಸುತ್ತಿದ್ದವಾದರೂ, ಮೂವರ ಮೇಲೆ ದಾಳಿ ನಡೆಸಿ ಸಾವಿಗೆ ಕಾರಣವಾದ ಆನೆ ‘ಭೈರನೇ’ ಎಂಬುದು ಖಚಿತ ವಾಗಿಲ್ಲದಿದ್ದರೂ ಸ್ಥಳೀಯರು ಮಾತ್ರ ಭೈರನತ್ತಲೇ ಬೆರಳು ತೋರಿಸಿದ್ದರು.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ 20218 ಜ.25ರಿಂದ ಮೂಡಿಗೆರೆಯ ಸುತ್ತ ಕಾರ್ಯಾಚರಣೆ ನಡೆಸಿತ್ತು. ದಸರಾ ಗಜಪಡೆ ನಾಯಕ ಅಭಿ ಮನ್ಯು, ಭೀಮ, ಧನಂ ಜಯ, ಪ್ರಶಾಂತ ಹಾಗೂ ಹರ್ಷ ನೊಂದಿಗೆ ಪಶು ವೈದ್ಯ ಡಾ. ರಮೇಶ ಹಾಗೂ ಇನ್ನಿತರರ ತಂಡ ಕಾರ್ಯಾಚರಣೆ ನಡೆಸಿ, 6 ದಿನಗಳಲ್ಲೇ ಭೈರ ನೊಂದಿಗೆ ಉಪಟಳ ನೀಡುತ್ತಿದ್ದ ಮತ್ತೊಂದು ಆನೆಯನ್ನು ಕೂಡ ಸೆರೆ ಹಿಡಿಯಲು ಮುಂದಾಗಿತ್ತು. ಆದರೆ, ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಮತ್ತೊಂದು ಆನೆಯಿಂದ ತೊಂದರೆಯಾಗಿಲ್ಲ. ಭೈರನನ್ನು ಮಾತ್ರ ಸೆರೆಹಿಡಿಯಿರಿ ಎಂದು ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ‘ಮೂಡಿಗೆರೆ ಭೈರ’ನನ್ನು 2022ರ ಫೆ.12ರಂದು ಮೂಡಿಗೆರೆ ಬಳಿ ಗುರುತಿಸಿ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದಿತ್ತು. ಬಳಿಕ ಅದನ್ನು ಮತ್ತಿಗೋಡು ಶಿಬಿರಕ್ಕೆ ಕರೆತಂದು ಕ್ರಾಲ್‌ನಲ್ಲಿಟ್ಟು ಪಳಗಿಸಲಾಗಿತ್ತು.

ಅಂಬಾರಿ ಹೊರುವ ಸಾಮರ್ಥ್ಯ: ಸೆರೆಹಿಡಿದ ಒಂದೇ ವರ್ಷದೊಳಗೆ ಸೌಮ್ಯ ಸ್ವಭಾವಿಯಾಗಿ ಮಾರ್ಪಾಡಾದ ಮೂಡಿಗೆರೆ ಭೈರನಿಗೆ ‘ಏಕಲವ್ಯ’ ಎಂದು ನಾಮಕರಣ ಮಾಡಲಾಯಿತು. 8 ತಿಂಗಳ ಹಿಂದೆಯೇ ಕ್ರಾಲ್‌ನಿಂದ ಹೊರಗೆ ಬಂದಿರುವ ಏಕಲವ್ಯ, ಮಾವುತ ಸೃಜನ್ ಹಾಗೂ ಎಸ್. ಇದಾಯತ್ ಅವರ ಆರೈಕೆಯಲ್ಲಿ ಪಳಗಿದೆ. ಹೇಳಿದಂತೆ ಕೇಳುವುದರೊಂದಿಗೆ ಮೃದು ಸ್ವಭಾವಿ ಯಾಗಿ ಮಾರ್ಪಟ್ಟಿದೆ. ಸಮ ತಟ್ಟಾದ ಬೆನ್ನು, ನಡಿಗೆಯಲ್ಲಿ ರಾಜಗಾಂಭೀರ್ಯ ಹೊಂದಿರುವ ಏಕಲವ್ಯ ಅಂಬಾರಿ ಹೊರಲು ಅರ್ಹತೆ ಹೊಂದಿದೆ ಎನ್ನುವುದು ಅಧಿಕಾರಿಗಳ ಅನಿಸಿಕೆ.

18 ತಿಂಗಳ ಹಿಂದೆ ಕಾಡಾನೆ, ಇದೀಗ ಸಾಕಾನೆ ‘ಏಕಲವ್ಯ’ನಾಗಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದೆ. ಹಳೆಯದನ್ನು ಮರೆತು ಹೊಸ ಅಧ್ಯಾಯ ಬರೆಯಲು ತವಕಿಸುತ್ತಿರುವ ಏಕಲವ್ಯ ಅಧಿಕಾರಿಗಳು ಮಾತ್ರ ವಲ್ಲದೆ, ಮತ್ತಿಗೋಡು ಕ್ಯಾಂಪ್ ನಲ್ಲಿರುವ ಎಲ್ಲಾ ಆನೆಗಳ ಮಾವುತ, ಕಾವಾಡಿಗಳ ಮೆಚ್ಚುಗೆಗೂ ಪಾತ್ರವಾಗಿದೆ. ಮೊದಲ ಹಂತದಲ್ಲೇ ಆಗಮಿ ಸಿರುವ ಏಕಲವ್ಯ ಸುಮಾರು 50 ದಿನ ಅರಮನೆ ಆವರಣದಲ್ಲಿದ್ದು, ಉತ್ಸವಕ್ಕೆ ತಾಲೀಮು ನಡೆಸಲಿದೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

2 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

3 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

4 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

10 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

10 hours ago