Andolana originals

ನಾಳೆ ಚುನಾವಣೆ: ಯಾರಿಗೆ ಎಪಿಎಂಸಿ ಪಟ್ಟ?

ಚಾಮರಾಜನಗರ: ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ(ಎಪಿಎಂಸಿ) ಮೂರನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಅ.೩೧ರಂದು ಚುನಾವಣೆ ನಿಗದಿಯಾಗಿದೆ.

ಸದ್ಯ ಎಚ್.ಎನ್.ಮಹದೇವಸ್ವಾಮಿ ಉ.ಸೋಮೇಶ್, ರಾಮಚಂದ್ರ ಎಪಿಎಂಸಿಗೆ ಅಧ್ಯಕ್ಷ, ಉಪಾಧ್ಯಕ್ಷರಾಗಿದ್ದು ಕಾಂಗ್ರೆಸ್ ಬೆಂಬಲಿತರಾದ ಇವರ ಅಧಿಕಾರಾವಧಿ ನ.೩ರಂದು ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ೨೦ ತಿಂಗಳ (ಅಂತಿಮ ಅವಧಿಗೆ) ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಶುಕ್ರವಾರ (ಅ.೩೧) ಆಯ್ಕೆ ಮಾಡಲಾಗುತ್ತದೆ.

ಈಗಿನ ಬಲಾಬಲದ ಪ್ರಕಾರ ಎಪಿಎಂಸಿ ಅಧಿಕಾರ ಕಾಂಗ್ರೆಸ್ ಪಾಲಾಗುವುದು ಬಹುತೇಕ ನಿಶ್ಚಿತವಾಗಿದೆ. ೧೩ ಚುನಾಯಿತ ಸದಸ್ಯರು, ಮೂವರು ನಾಮನಿರ್ದೇಶಿತ ಸದಸ್ಯರು ಮತ್ತು ತಾಲ್ಲೂಕು ತೆಂಗು ಬೆಳೆಗಾರರ ಸಂಘದ ಒಬ್ಬರು ಮತದಾನ ಮಾಡಲು ಅರ್ಹರಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ೭ ಚುನಾಯಿತ ಸದಸ್ಯರು, ಆ ಪಕ್ಷದ ಮೂವರು ನಾಮನಿರ್ದೇಶಿತ ಸದಸ್ಯರು ಸೇರಿ ಅವರ ಒಟ್ಟು ಬಲ ೧೦ಕ್ಕೆ ತಲುಪಿದೆ.

ಮೊದಲ ೨೦ ತಿಂಗಳ ಅವಧಿಗೆ ಚುನಾವಣೆ ನಡೆದಾಗ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಬಿಜೆಪಿಗೆ ಸೇರಿದ ಮೂವರು ನಾಮನಿರ್ದೇಶಿತ ಸದಸ್ಯರು ಆಗ ನೇಮಕ ಆಗಿದ್ದರಿಂದ ಆ ಪಕ್ಷದ ನಾಲ್ವರು ಚುನಾಯಿತ ಸದಸ್ಯರು, ಮತ್ತು ಇತರರ ಬೆಂಬಲದೊಂದಿಗೆ ಅಧಿಕಾರ ಬಿಜೆಪಿ ಬೆಂಬಲಿತರ ಪಾಲಾಗಿತ್ತು.

ನಂತರದ ೨೦ ತಿಂಗಳ ಅವಧಿಯ ಅಧಿಕಾರ ಕಾಂಗ್ರೆಸ್ ಬೆಂಬಲಿತರಿಗೆ ದೊರಕಿತ್ತು. ಈಗ ಮತ್ತೆ ಅಧಿಕಾರ ಕೈ ಬೆಂಬಲಿಗರಿಗೆ ದೊರಕುವುದು ಖಾತ್ರಿಯಾಗಿದೆ. ಯಳಂದೂರು ತಾಲ್ಲೂಕು ಕೂಡ ಚಾಮರಾಜನಗರ ಎಪಿಎಂಸಿಗೇ ಒಳಪಟ್ಟಿದ್ದು, ಅಲ್ಲಿಂದ ಆರಿಸಿ ಬಂದಿರುವ ಇಬ್ಬರೂ ಸದಸ್ಯರು ಕಾಂಗ್ರೆಸ್ ಬೆಂಬಲಿತರೇ ಆಗಿರುವ ಕಾರಣ ಅಧ್ಯಕ್ಷ ಸ್ಥಾನ ನಮ್ಮ ತಾಲ್ಲೂಕಿಗೆ ಬೇಕು ಎಂಬ ಧ್ವನಿ ತೆಗೆದಿದ್ದಾರೆ ಎಂದು ಗೊತ್ತಾಗಿದೆ.

ಯಾರು ಆಗುವರು ಅಧ್ಯಕ್ಷರು?: ಎಪಿಎಂಸಿ ಅಧ್ಯಕ್ಷ ಸ್ಥಾನಕ್ಕೆ ಬದನಗುಪ್ಪೆ ಕ್ಷೇತ್ರದ ಎಂ.ಬಿ.ಗುರುಸ್ವಾಮಿ, ಯಳಂದೂರು ಕ್ಷೇತ್ರದ ಯರಗಂಬಳ್ಳಿ ಮಹೇಶ್, ಹೊಂಗನೂರು ಕ್ಷೇತ್ರದ ರವಿಶಂಕರ ಮೂರ್ತಿ , ನಾಗವಳ್ಳಿ ಕ್ಷೇತ್ರದ ಆಲೂರು ಪ್ರದೀಪ್ ಹಾಗೂ ಹಾಲಿ ಉಪಾಧ್ಯಕ್ಷರಾಗಿರುವ ಅಗರ ಕ್ಷೇತ್ರದ ರಾಮಚಂದ್ರ ಆಕಾಂಕ್ಷಿಗಳಾಗಿದ್ದಾರೆ. ಈಗಿನ ಮಟ್ಟಿಗೆ, ಗುರುಸ್ವಾಮಿ ಮತ್ತು ಯಳಂದೂರು ಮಹೇಶ್ ಅವರ ಹೆಸರು ಮುಂಚೂಣಿಯಲ್ಲಿ ಇದೆ ಎಂದು ತಿಳಿದುಬಂದಿದೆ. ಹಿಂದುಳಿದ ಸಮಾಜಕ್ಕೆ ಸೇರಿದ ಗುರುಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ಮಾಡುವಂತೆ ನಿಯೋಗವೊಂದು ಸಿಎಂ ವರೆಗೂ ಹೋಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಇದೇ ರೀತಿ, ಯಳಂದೂರು ತಾಲ್ಲೂಕಿನವರಿಗೆ ಇದುವರೆಗೂ ಅಧ್ಯಕ್ಷಸ್ಥಾನ ದೊರಕಿಲ್ಲ. ಈ ಆಧಾರದಲ್ಲಿ ಪರಿಶಿಷ್ಟ ಜಾತಿಗೆ ಸೇರಿರುವ ಯರಗಂಬಳ್ಳಿ ಮಹೇಶ್ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಒತ್ತಡ ಹಾಕಲಾಗುತ್ತಿದೆ ಎಂದು ಗೊತ್ತಾಗಿದೆ.

ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ಉಡಿಗಾಲ ಕ್ಷೇತ್ರದ ಪ್ರೇಮಾಶೇಖರ್ ಅವರ ಹೆಸರು ಚಾಲ್ತಿಯಲ್ಲಿದೆ.ಅಧ್ಯಕ್ಷ ಸ್ಥಾನ ವಂಚಿತರಾದವರನ್ನು ಉಪಾಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆಯೂ ಇದೆ. ಹಾಗೆಯೇ, ೧೦:೧೦ ತಿಂಗಳ ಅಧಿಕಾರ ಸೂತ್ರ ಹೆಣೆದು ಮೊದಲ ಅವಧಿಗೆ ಒಬ್ಬರು, ನಂತರದ ಅವಧಿಗೆ ಇನ್ನೊಬ್ಬರನ್ನು ಕೂರಿಸುವ ಲೆಕ್ಕಾಚಾರವೂ ನಡೆಯುತ್ತಿದೆ. ಇದು ಪಕ್ಷಾತೀತ ಚುನಾವಣೆ. ಆದರೆ, ಎಪಿಎಂಸಿ ಸದಸ್ಯರು ಕಾಂಗ್ರೆಸ್, ಬಿಜೆಪಿ ಪಕ್ಷಗಳ ಜೊತೆ ಗುರುತಿಸಿಕೊಂಡಿದ್ದಾರೆ.

ವರಿಷ್ಠರಿಂದ ಸಭೆ:  ಕಾಂಗ್ರೆಸ್ ಪಕ್ಷ ಬೆಂಬಲಿತ ಎಲ್ಲಾ ಎಪಿಎಂಸಿ ಸದಸ್ಯರನ್ನು ನಗರದ ಪ್ರವಾಸಿ ಮಂದಿರದಲ್ಲಿ ಸೇರಿಸಿ ಸಭೆ ಮಾಡಲಾಗಿದ್ದು ವರಿಷ್ಠರು ಯಾರನ್ನೇ ಅಧ್ಯಕ್ಷ, ಉಪಾಧ್ಯಕ್ಷರಾಗಿ ಮಾಡಿದರೂ ಅದಕ್ಕೆ ಬದ್ಧ ಎಂದು ಹೇಳಿದ್ದಾರೆ. ಈ ಸಭೆಯಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ ಅವರು ಮತ್ತು ಜಿಲ್ಲಾ -ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಜರಿದ್ದರು. ಹೀಗಾಗಿ ಉಭಯ ಶಾಸಕರು ಏನು ತೀರ್ಮಾನ ಮಾಡುತ್ತಾರೋ ನೋಡಬೇಕು ಎಂದು ಎಪಿಎಂಸಿ ಸದಸ್ಯರೊಬ್ಬರು ತಿಳಿಸಿದರು.

ಆ.೩೧ರಂದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ:

ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಅ.೩೧ರಂದು ಚುನಾವಣೆ ನಡೆಯಲಿದೆ. ಬೆಳಿಗ್ಗೆ ೧೦ ಗಂಟೆಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ಸದಸ್ಯರ ಚುನಾವಣೆ ಸಭೆ ಕರೆಯಲಾಗಿದ್ದು, ಬೆಳಿಗ್ಗೆ ೧೧ ರಿಂದ ೧ ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಮಧ್ಯಾಹ್ನ ೧.೩೦ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಧ್ಯಾಹ್ನ ೧.೩೦ ರಿಂದ ೨ ಗಂಟೆಯವರೆಗೆ ನಾಮಪತ್ರ ವಾಪಸ್ ಪಡೆಯಬಹುದಾಗಿದೆ. ಮಧ್ಯಾಹ್ನ ೨.೧೫ ಗಂಟೆಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳಾದ ತಹಸಿಲ್ದಾರ್ ಗಿರಿಜಾ ತಿಳಿಸಿದ್ದಾರೆ

” ನನ್ನ ೨೦ ತಿಂಗಳ ಅಧಿಕಾರ ನ.೩ ರಂದು ಮುಗಿಯಲಿದೆ. ಈ ಅವಧಿಯಲ್ಲಿ ರೈತ ಪರವಾಗಿ ಕೆಲಸ ಮಾಡಿದ ತೃಪ್ತಿ ಇದೆ. ನಗರದ ಎಪಿಎಂಸಿ ಆವರಣದಲ್ಲಿ ೧೬ ಲಕ್ಷ ರೂ.ವೆಚ್ಚದಲ್ಲಿ ಕ್ಯಾಂಟೀನ್ ಕಟ್ಟಡ, ಸಂತೇಮರಹಳ್ಳಿಯಲ್ಲಿ ೩೦ ಲಕ್ಷ ರೂ.ವೆಚ್ಚದಲ್ಲಿ ಸಿಸಿ ರಸ್ತೆ; ಅಲ್ಲಿಯೇ ೫ ಕೋಟಿ ರೂ. ವೆಚ್ಚದಲ್ಲಿ ಶಾಸಕರ ಸಹಕಾರದೊಂದಿಗೆ ಎಳನೀರು ಸಂಸ್ಕರಣೆ ಘಟಕ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.”

-ಎಚ್.ಎನ್.ಮಹದೇವಸ್ವಾಮಿ (ಸೋಮೇಶ್), ಎಪಿಎಂಸಿ ಅಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

41 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

51 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

1 hour ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

1 hour ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

2 hours ago