ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು ಗುರುವಾರ ಕಡಿತಗೊಳಿಸಲಾಗಿದೆ.
ದೊಡ್ಡಮೋಳೆ, ವೆಂಕಟಯ್ಯನಛತ್ರ, ಅಟ್ಟುಗುಳಿಪುರ ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದ್ದು, ಈ ಪಂಚಾಯಿತಿಗಳು ಲಕ್ಷಾಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಸುಡು ಬಿಸಿಲಿನ ಈ ದಿನಗಳಲ್ಲಿ ಕುಡಿಯುವ ನೀರು ಅತ್ಯಂತ ಅವಶ್ಯವಾಗಿದ್ದು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತೆಗೆಯಲು ಹೋದರೆ ಸಾರ್ವಜನಿಕರಿಂದ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಗ್ರಾಮಗಳ ಕೇಂದ್ರ ಸ್ಥಾನವಾದ ಪಂಚಾಯಿತಿಯ ಪವರ್ ಅನ್ನೇ ಕಟ್ ಮಾಡಲಾಗಿದೆ. ಸಕಾಲ ಅರ್ಜಿ ಸ್ವೀಕಾರ, ಇ-ಹಾಜರಾತಿ, ವಿಬಿ-ಜಿ ರಾಮ್ ಜಿ, ಇ-ಸ್ವತ್ತು ಹಾಗೂ ಪಂಚಾಯಿತಿಯ ಪ್ರತಿಯೊಂದು ಕೆಲಸವೂ ವಿದ್ಯುತ್ ಅವಲಂಬಿತ ಆನ್ಲೈನ್ ಮೇಲೆ ಕೇಂದ್ರೀಕೃತ ಆಗಿರುವ ಕಾರಣ ಪಂಚಾಯಿತಿ ಕೇಂದ್ರ ಸ್ಥಾನದ ಸಂಪರ್ಕ ತೆಗೆದರೆ ಬಿಲ್ ಚುಕ್ತಾ ಆಗುತ್ತದೆ ಎಂದು ಸೆಸ್ಕ್ ಈ ಹಾದಿ ಹಿಡಿದಿದೆ.
ವಿದ್ಯುತ್ ಸಂಪರ್ಕ ಕಡಿತದಿಂದ ಗುರುವಾರ ಸಾರ್ವಜನಿಕರಿಗೆ ಹೇಳಿಕೊಳ್ಳುವಂತಹ ಸಮಸ್ಯೆಯಾಗಲಿಲ್ಲ. ಕಾರಣ, ಮುಂಚೆಯೇ ಯುಪಿಎಸ್ ಚಾರ್ಜ್ ಆಗಿದ್ದರಿಂದ ಅದರ ನೆರವಿನಲ್ಲಿ ಕೆಲಸಗಳು ನಡೆದವು.
ಆದರೆ ಶುಕ್ರವಾರ ಈ ಪಂಚಾಯಿತಿಗಳಿಗೆ ವಿದ್ಯುತ್ ಸಂಪರ್ಕ ಕೊಡದೇ ಹೋದರೆ ಇ-ಹಾಜರಾತಿಯಿಂದ ಮೊದಲ್ಗೊಂಡು ಪಂಚಾಯಿತಿಯ ಎಲ್ಲಾ ಕೆಲಸವೂ ಸ್ಥಗಿತ ಆಗಲಿವೆ ಎಂದು ಹೆಸರು ಹೇಳಲು ಇಚ್ಛಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ತಿಳಿಸಿದರು.
೧೫ನೇ ಹಣಕಾಸು ಆಯೋಗದ ಅನುದಾನ, ರಾಜ್ಯ ಹಣಕಾಸು ಆಯೋಗದ ಅನುದಾನ ಮತ್ತು ಗ್ರಾಮ ಪಂಚಾಯಿತಿಯ ಸ್ವಂತ ಸಂಪನ್ಮೂಲಗಳನ್ನು ಬಳಸಿ ಈ ಖಾತೆಗೆ ಜಮಾ ಮಾಡಲಾಗುತ್ತದೆ. ೨೦೨೫-೨೬ನೇ ಸಾಲಿನ ೧೫ನೇ ಹಣಕಾಸು ಯೋಜನೆ ಅನು ದಾನ ಬಾರದಿರುವುದು, ಬಹುತೇಕ ಪಂಚಾಯಿತಿಗಳು ಸ್ವಂತ ಸಂಪನ್ಮೂಲ ಸಂಗ್ರಹದಲ್ಲಿ ಹಿಂದೆ ಬಿದ್ದಿರುವುದು ವಿದ್ಯುತ್ ಬಿಲ್ ಬಾಕಿ ಉಳಿಯಲು ಕಾರಣವಾಗಿದೆ ಎಂದು ಪಿಡಿಒ ಒಬ್ಬರು ಹೇಳಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…