ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು ಗುರುವಾರ ಕಡಿತಗೊಳಿಸಲಾಗಿದೆ.
ದೊಡ್ಡಮೋಳೆ, ವೆಂಕಟಯ್ಯನಛತ್ರ, ಅಟ್ಟುಗುಳಿಪುರ ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದ್ದು, ಈ ಪಂಚಾಯಿತಿಗಳು ಲಕ್ಷಾಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಸುಡು ಬಿಸಿಲಿನ ಈ ದಿನಗಳಲ್ಲಿ ಕುಡಿಯುವ ನೀರು ಅತ್ಯಂತ ಅವಶ್ಯವಾಗಿದ್ದು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತೆಗೆಯಲು ಹೋದರೆ ಸಾರ್ವಜನಿಕರಿಂದ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಗ್ರಾಮಗಳ ಕೇಂದ್ರ ಸ್ಥಾನವಾದ ಪಂಚಾಯಿತಿಯ ಪವರ್ ಅನ್ನೇ ಕಟ್ ಮಾಡಲಾಗಿದೆ. ಸಕಾಲ ಅರ್ಜಿ ಸ್ವೀಕಾರ, ಇ-ಹಾಜರಾತಿ, ವಿಬಿ-ಜಿ ರಾಮ್ ಜಿ, ಇ-ಸ್ವತ್ತು ಹಾಗೂ ಪಂಚಾಯಿತಿಯ ಪ್ರತಿಯೊಂದು ಕೆಲಸವೂ ವಿದ್ಯುತ್ ಅವಲಂಬಿತ ಆನ್ಲೈನ್ ಮೇಲೆ ಕೇಂದ್ರೀಕೃತ ಆಗಿರುವ ಕಾರಣ ಪಂಚಾಯಿತಿ ಕೇಂದ್ರ ಸ್ಥಾನದ ಸಂಪರ್ಕ ತೆಗೆದರೆ ಬಿಲ್ ಚುಕ್ತಾ ಆಗುತ್ತದೆ ಎಂದು ಸೆಸ್ಕ್ ಈ ಹಾದಿ ಹಿಡಿದಿದೆ.
ವಿದ್ಯುತ್ ಸಂಪರ್ಕ ಕಡಿತದಿಂದ ಗುರುವಾರ ಸಾರ್ವಜನಿಕರಿಗೆ ಹೇಳಿಕೊಳ್ಳುವಂತಹ ಸಮಸ್ಯೆಯಾಗಲಿಲ್ಲ. ಕಾರಣ, ಮುಂಚೆಯೇ ಯುಪಿಎಸ್ ಚಾರ್ಜ್ ಆಗಿದ್ದರಿಂದ ಅದರ ನೆರವಿನಲ್ಲಿ ಕೆಲಸಗಳು ನಡೆದವು.
ಆದರೆ ಶುಕ್ರವಾರ ಈ ಪಂಚಾಯಿತಿಗಳಿಗೆ ವಿದ್ಯುತ್ ಸಂಪರ್ಕ ಕೊಡದೇ ಹೋದರೆ ಇ-ಹಾಜರಾತಿಯಿಂದ ಮೊದಲ್ಗೊಂಡು ಪಂಚಾಯಿತಿಯ ಎಲ್ಲಾ ಕೆಲಸವೂ ಸ್ಥಗಿತ ಆಗಲಿವೆ ಎಂದು ಹೆಸರು ಹೇಳಲು ಇಚ್ಛಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ತಿಳಿಸಿದರು.
೧೫ನೇ ಹಣಕಾಸು ಆಯೋಗದ ಅನುದಾನ, ರಾಜ್ಯ ಹಣಕಾಸು ಆಯೋಗದ ಅನುದಾನ ಮತ್ತು ಗ್ರಾಮ ಪಂಚಾಯಿತಿಯ ಸ್ವಂತ ಸಂಪನ್ಮೂಲಗಳನ್ನು ಬಳಸಿ ಈ ಖಾತೆಗೆ ಜಮಾ ಮಾಡಲಾಗುತ್ತದೆ. ೨೦೨೫-೨೬ನೇ ಸಾಲಿನ ೧೫ನೇ ಹಣಕಾಸು ಯೋಜನೆ ಅನು ದಾನ ಬಾರದಿರುವುದು, ಬಹುತೇಕ ಪಂಚಾಯಿತಿಗಳು ಸ್ವಂತ ಸಂಪನ್ಮೂಲ ಸಂಗ್ರಹದಲ್ಲಿ ಹಿಂದೆ ಬಿದ್ದಿರುವುದು ವಿದ್ಯುತ್ ಬಿಲ್ ಬಾಕಿ ಉಳಿಯಲು ಕಾರಣವಾಗಿದೆ ಎಂದು ಪಿಡಿಒ ಒಬ್ಬರು ಹೇಳಿದ್ದಾರೆ.
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…