Andolana originals

ವಿದ್ಯುತ್‌ ಬಿಲ್‌ ಬಾಕಿ ; 3 ಗ್ರಾಪಂಗಳಿಗೆ ಸೆಸ್ಕ್‌ ಶಾಕ್‌

ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು ಗುರುವಾರ ಕಡಿತಗೊಳಿಸಲಾಗಿದೆ.

ದೊಡ್ಡಮೋಳೆ, ವೆಂಕಟಯ್ಯನಛತ್ರ, ಅಟ್ಟುಗುಳಿಪುರ ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದ್ದು, ಈ ಪಂಚಾಯಿತಿಗಳು ಲಕ್ಷಾಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಸುಡು ಬಿಸಿಲಿನ ಈ ದಿನಗಳಲ್ಲಿ ಕುಡಿಯುವ ನೀರು ಅತ್ಯಂತ ಅವಶ್ಯವಾಗಿದ್ದು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತೆಗೆಯಲು ಹೋದರೆ ಸಾರ್ವಜನಿಕರಿಂದ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಗ್ರಾಮಗಳ ಕೇಂದ್ರ ಸ್ಥಾನವಾದ ಪಂಚಾಯಿತಿಯ ಪವರ್ ಅನ್ನೇ ಕಟ್ ಮಾಡಲಾಗಿದೆ. ಸಕಾಲ ಅರ್ಜಿ ಸ್ವೀಕಾರ, ಇ-ಹಾಜರಾತಿ, ವಿಬಿ-ಜಿ ರಾಮ್ ಜಿ, ಇ-ಸ್ವತ್ತು ಹಾಗೂ ಪಂಚಾಯಿತಿಯ ಪ್ರತಿಯೊಂದು ಕೆಲಸವೂ ವಿದ್ಯುತ್ ಅವಲಂಬಿತ ಆನ್‌ಲೈನ್ ಮೇಲೆ ಕೇಂದ್ರೀಕೃತ ಆಗಿರುವ ಕಾರಣ ಪಂಚಾಯಿತಿ ಕೇಂದ್ರ ಸ್ಥಾನದ ಸಂಪರ್ಕ ತೆಗೆದರೆ ಬಿಲ್ ಚುಕ್ತಾ ಆಗುತ್ತದೆ ಎಂದು ಸೆಸ್ಕ್ ಈ ಹಾದಿ ಹಿಡಿದಿದೆ.

ವಿದ್ಯುತ್ ಸಂಪರ್ಕ ಕಡಿತದಿಂದ ಗುರುವಾರ ಸಾರ್ವಜನಿಕರಿಗೆ ಹೇಳಿಕೊಳ್ಳುವಂತಹ ಸಮಸ್ಯೆಯಾಗಲಿಲ್ಲ. ಕಾರಣ, ಮುಂಚೆಯೇ ಯುಪಿಎಸ್ ಚಾರ್ಜ್ ಆಗಿದ್ದರಿಂದ ಅದರ ನೆರವಿನಲ್ಲಿ ಕೆಲಸಗಳು ನಡೆದವು.

ಆದರೆ ಶುಕ್ರವಾರ ಈ ಪಂಚಾಯಿತಿಗಳಿಗೆ ವಿದ್ಯುತ್ ಸಂಪರ್ಕ ಕೊಡದೇ ಹೋದರೆ ಇ-ಹಾಜರಾತಿಯಿಂದ ಮೊದಲ್ಗೊಂಡು ಪಂಚಾಯಿತಿಯ ಎಲ್ಲಾ ಕೆಲಸವೂ ಸ್ಥಗಿತ ಆಗಲಿವೆ ಎಂದು ಹೆಸರು ಹೇಳಲು ಇಚ್ಛಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ತಿಳಿಸಿದರು.

೧೫ನೇ ಹಣಕಾಸು ಆಯೋಗದ ಅನುದಾನ, ರಾಜ್ಯ ಹಣಕಾಸು ಆಯೋಗದ ಅನುದಾನ ಮತ್ತು ಗ್ರಾಮ ಪಂಚಾಯಿತಿಯ ಸ್ವಂತ ಸಂಪನ್ಮೂಲಗಳನ್ನು ಬಳಸಿ ಈ ಖಾತೆಗೆ ಜಮಾ ಮಾಡಲಾಗುತ್ತದೆ. ೨೦೨೫-೨೬ನೇ ಸಾಲಿನ ೧೫ನೇ ಹಣಕಾಸು ಯೋಜನೆ ಅನು ದಾನ ಬಾರದಿರುವುದು, ಬಹುತೇಕ ಪಂಚಾಯಿತಿಗಳು ಸ್ವಂತ ಸಂಪನ್ಮೂಲ ಸಂಗ್ರಹದಲ್ಲಿ ಹಿಂದೆ ಬಿದ್ದಿರುವುದು ವಿದ್ಯುತ್ ಬಿಲ್ ಬಾಕಿ ಉಳಿಯಲು ಕಾರಣವಾಗಿದೆ ಎಂದು ಪಿಡಿಒ ಒಬ್ಬರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

14 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

14 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

15 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

15 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

16 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

19 hours ago