Andolana originals

ವಿದ್ಯುತ್‌ ಬಿಲ್‌ ಬಾಕಿ ; 3 ಗ್ರಾಪಂಗಳಿಗೆ ಸೆಸ್ಕ್‌ ಶಾಕ್‌

ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು ಗುರುವಾರ ಕಡಿತಗೊಳಿಸಲಾಗಿದೆ.

ದೊಡ್ಡಮೋಳೆ, ವೆಂಕಟಯ್ಯನಛತ್ರ, ಅಟ್ಟುಗುಳಿಪುರ ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದ್ದು, ಈ ಪಂಚಾಯಿತಿಗಳು ಲಕ್ಷಾಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಸುಡು ಬಿಸಿಲಿನ ಈ ದಿನಗಳಲ್ಲಿ ಕುಡಿಯುವ ನೀರು ಅತ್ಯಂತ ಅವಶ್ಯವಾಗಿದ್ದು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತೆಗೆಯಲು ಹೋದರೆ ಸಾರ್ವಜನಿಕರಿಂದ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಗ್ರಾಮಗಳ ಕೇಂದ್ರ ಸ್ಥಾನವಾದ ಪಂಚಾಯಿತಿಯ ಪವರ್ ಅನ್ನೇ ಕಟ್ ಮಾಡಲಾಗಿದೆ. ಸಕಾಲ ಅರ್ಜಿ ಸ್ವೀಕಾರ, ಇ-ಹಾಜರಾತಿ, ವಿಬಿ-ಜಿ ರಾಮ್ ಜಿ, ಇ-ಸ್ವತ್ತು ಹಾಗೂ ಪಂಚಾಯಿತಿಯ ಪ್ರತಿಯೊಂದು ಕೆಲಸವೂ ವಿದ್ಯುತ್ ಅವಲಂಬಿತ ಆನ್‌ಲೈನ್ ಮೇಲೆ ಕೇಂದ್ರೀಕೃತ ಆಗಿರುವ ಕಾರಣ ಪಂಚಾಯಿತಿ ಕೇಂದ್ರ ಸ್ಥಾನದ ಸಂಪರ್ಕ ತೆಗೆದರೆ ಬಿಲ್ ಚುಕ್ತಾ ಆಗುತ್ತದೆ ಎಂದು ಸೆಸ್ಕ್ ಈ ಹಾದಿ ಹಿಡಿದಿದೆ.

ವಿದ್ಯುತ್ ಸಂಪರ್ಕ ಕಡಿತದಿಂದ ಗುರುವಾರ ಸಾರ್ವಜನಿಕರಿಗೆ ಹೇಳಿಕೊಳ್ಳುವಂತಹ ಸಮಸ್ಯೆಯಾಗಲಿಲ್ಲ. ಕಾರಣ, ಮುಂಚೆಯೇ ಯುಪಿಎಸ್ ಚಾರ್ಜ್ ಆಗಿದ್ದರಿಂದ ಅದರ ನೆರವಿನಲ್ಲಿ ಕೆಲಸಗಳು ನಡೆದವು.

ಆದರೆ ಶುಕ್ರವಾರ ಈ ಪಂಚಾಯಿತಿಗಳಿಗೆ ವಿದ್ಯುತ್ ಸಂಪರ್ಕ ಕೊಡದೇ ಹೋದರೆ ಇ-ಹಾಜರಾತಿಯಿಂದ ಮೊದಲ್ಗೊಂಡು ಪಂಚಾಯಿತಿಯ ಎಲ್ಲಾ ಕೆಲಸವೂ ಸ್ಥಗಿತ ಆಗಲಿವೆ ಎಂದು ಹೆಸರು ಹೇಳಲು ಇಚ್ಛಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ತಿಳಿಸಿದರು.

೧೫ನೇ ಹಣಕಾಸು ಆಯೋಗದ ಅನುದಾನ, ರಾಜ್ಯ ಹಣಕಾಸು ಆಯೋಗದ ಅನುದಾನ ಮತ್ತು ಗ್ರಾಮ ಪಂಚಾಯಿತಿಯ ಸ್ವಂತ ಸಂಪನ್ಮೂಲಗಳನ್ನು ಬಳಸಿ ಈ ಖಾತೆಗೆ ಜಮಾ ಮಾಡಲಾಗುತ್ತದೆ. ೨೦೨೫-೨೬ನೇ ಸಾಲಿನ ೧೫ನೇ ಹಣಕಾಸು ಯೋಜನೆ ಅನು ದಾನ ಬಾರದಿರುವುದು, ಬಹುತೇಕ ಪಂಚಾಯಿತಿಗಳು ಸ್ವಂತ ಸಂಪನ್ಮೂಲ ಸಂಗ್ರಹದಲ್ಲಿ ಹಿಂದೆ ಬಿದ್ದಿರುವುದು ವಿದ್ಯುತ್ ಬಿಲ್ ಬಾಕಿ ಉಳಿಯಲು ಕಾರಣವಾಗಿದೆ ಎಂದು ಪಿಡಿಒ ಒಬ್ಬರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…

12 mins ago

ರಸ್ತೆಗಳು ಗುಂಡಿಮಯ….ಜನರಿಗೆ ಜೀವ ಭಯ!

ಪ್ರಶಾಂತ್‌ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…

22 mins ago

ಮಹಾಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ | ಏ.17 ಶುಕ್ರವಾರ

3 hours ago

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

13 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

14 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

15 hours ago