ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು ಗುರುವಾರ ಕಡಿತಗೊಳಿಸಲಾಗಿದೆ.
ದೊಡ್ಡಮೋಳೆ, ವೆಂಕಟಯ್ಯನಛತ್ರ, ಅಟ್ಟುಗುಳಿಪುರ ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದ್ದು, ಈ ಪಂಚಾಯಿತಿಗಳು ಲಕ್ಷಾಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಸುಡು ಬಿಸಿಲಿನ ಈ ದಿನಗಳಲ್ಲಿ ಕುಡಿಯುವ ನೀರು ಅತ್ಯಂತ ಅವಶ್ಯವಾಗಿದ್ದು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತೆಗೆಯಲು ಹೋದರೆ ಸಾರ್ವಜನಿಕರಿಂದ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಗ್ರಾಮಗಳ ಕೇಂದ್ರ ಸ್ಥಾನವಾದ ಪಂಚಾಯಿತಿಯ ಪವರ್ ಅನ್ನೇ ಕಟ್ ಮಾಡಲಾಗಿದೆ. ಸಕಾಲ ಅರ್ಜಿ ಸ್ವೀಕಾರ, ಇ-ಹಾಜರಾತಿ, ವಿಬಿ-ಜಿ ರಾಮ್ ಜಿ, ಇ-ಸ್ವತ್ತು ಹಾಗೂ ಪಂಚಾಯಿತಿಯ ಪ್ರತಿಯೊಂದು ಕೆಲಸವೂ ವಿದ್ಯುತ್ ಅವಲಂಬಿತ ಆನ್ಲೈನ್ ಮೇಲೆ ಕೇಂದ್ರೀಕೃತ ಆಗಿರುವ ಕಾರಣ ಪಂಚಾಯಿತಿ ಕೇಂದ್ರ ಸ್ಥಾನದ ಸಂಪರ್ಕ ತೆಗೆದರೆ ಬಿಲ್ ಚುಕ್ತಾ ಆಗುತ್ತದೆ ಎಂದು ಸೆಸ್ಕ್ ಈ ಹಾದಿ ಹಿಡಿದಿದೆ.
ವಿದ್ಯುತ್ ಸಂಪರ್ಕ ಕಡಿತದಿಂದ ಗುರುವಾರ ಸಾರ್ವಜನಿಕರಿಗೆ ಹೇಳಿಕೊಳ್ಳುವಂತಹ ಸಮಸ್ಯೆಯಾಗಲಿಲ್ಲ. ಕಾರಣ, ಮುಂಚೆಯೇ ಯುಪಿಎಸ್ ಚಾರ್ಜ್ ಆಗಿದ್ದರಿಂದ ಅದರ ನೆರವಿನಲ್ಲಿ ಕೆಲಸಗಳು ನಡೆದವು.
ಆದರೆ ಶುಕ್ರವಾರ ಈ ಪಂಚಾಯಿತಿಗಳಿಗೆ ವಿದ್ಯುತ್ ಸಂಪರ್ಕ ಕೊಡದೇ ಹೋದರೆ ಇ-ಹಾಜರಾತಿಯಿಂದ ಮೊದಲ್ಗೊಂಡು ಪಂಚಾಯಿತಿಯ ಎಲ್ಲಾ ಕೆಲಸವೂ ಸ್ಥಗಿತ ಆಗಲಿವೆ ಎಂದು ಹೆಸರು ಹೇಳಲು ಇಚ್ಛಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ತಿಳಿಸಿದರು.
೧೫ನೇ ಹಣಕಾಸು ಆಯೋಗದ ಅನುದಾನ, ರಾಜ್ಯ ಹಣಕಾಸು ಆಯೋಗದ ಅನುದಾನ ಮತ್ತು ಗ್ರಾಮ ಪಂಚಾಯಿತಿಯ ಸ್ವಂತ ಸಂಪನ್ಮೂಲಗಳನ್ನು ಬಳಸಿ ಈ ಖಾತೆಗೆ ಜಮಾ ಮಾಡಲಾಗುತ್ತದೆ. ೨೦೨೫-೨೬ನೇ ಸಾಲಿನ ೧೫ನೇ ಹಣಕಾಸು ಯೋಜನೆ ಅನು ದಾನ ಬಾರದಿರುವುದು, ಬಹುತೇಕ ಪಂಚಾಯಿತಿಗಳು ಸ್ವಂತ ಸಂಪನ್ಮೂಲ ಸಂಗ್ರಹದಲ್ಲಿ ಹಿಂದೆ ಬಿದ್ದಿರುವುದು ವಿದ್ಯುತ್ ಬಿಲ್ ಬಾಕಿ ಉಳಿಯಲು ಕಾರಣವಾಗಿದೆ ಎಂದು ಪಿಡಿಒ ಒಬ್ಬರು ಹೇಳಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…