Andolana originals

6 ತಿಂಗಳೊಳಗೆ ಹಾಡಿಗಳಿಗೆ ವಿದ್ಯುದ್ದೀಕರಣ ಭಾಗ್ಯ!

ಕೇಂದ್ರ ಸರ್ಕಾರದಿಂದ ೫೫. ೧೪ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನ

ಕೆ. ಬಿ. ರಮೇಶನಾಯಕ
ಮೈಸೂರು: ಸ್ವಾತಂತ್ರ್ಯ ಬಂದು ಏಳು ದಶಕಗಳೇ ಕಳೆದರೂ ಮೂಲ ಸೌಕರ್ಯದ ಕೊರತೆ ಜತೆಗಿರುವ ಸಮರ್ಪಕ ವಿದ್ಯುತ್ ಇಲ್ಲದೆ ಕಗ್ಗತ್ತಲಿನಲ್ಲಿ ಮುಳುಗಿರುವ ಕಾಡಂಚಿನ ಹಾಡಿಗಳಿಗೆ ಆರು ತಿಂಗಳೊಳಗೆ ಪೂರ್ಣ ಪ್ರಮಾಣದಲ್ಲಿ ವಿದ್ಯುದ್ದೀಕರಣ ಭಾಗ್ಯ ದೊರೆಯಲಿದ್ದು, ಕೇಂದ್ರ ಸರ್ಕಾರ ಶಕ್ತಿ ಮಂತ್ರಾಲಯದಿಂದ ಈ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.

ಹಾಡಿಗಳಲ್ಲಿ ಸೋಲಾರ್ ಲೈಟ್ ಮತ್ತು ಸೋಲಾರ್ ಬೀದಿ ದೀಪಗಳಿಂದ ಹೆಚ್ಚು ಪ್ರಯೋಜನಕಾರಿಯಾಗದ ಕಾರಣ ವಿದ್ಯುತ್ ವಿತರಣಾ ಮಾರ್ಗದ ಮೂಲಕವೇ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಒದಗಿಸುವ ಈ ಮಹತ್ವದ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಇದರಿಂದಾಗಿ ಮಳೆಗಾಲ, ಬೇಸಿಗೆ ಕಾಲದಲ್ಲೂ ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದ ಈ ಜನರ ಮುಖದಲ್ಲಿ ಮಂದಹಾಸ ಮಿನುಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಹಾಡಿಗಳನ್ನು ಹೊಂದಿರುವ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಮಾರ್ಗಗಳು ಇರಲಿಲ್ಲ. ವಿದ್ಯುತ್ ಮಾರ್ಗ ಕಲ್ಪಿಸಲು ಅರಣ್ಯ ಇಲಾಖೆ ಕೂಡ ಅವಕಾಶ ನೀಡುತ್ತಿರಲಿಲ್ಲ. ಇದರಿಂದಾಗಿ ಈ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವುದು ಸಾಧ್ಯವಾಗಿರಲಿಲ್ಲ. ಹೀಗಾಗಿ, ಸೋಲಾರ್ ವಿದ್ಯುತ್ ಬೀದಿದೀಪಗಳನ್ನು ಅಳವಡಿಸಿದ್ದರೂ, ಅದು ಮಂದಬೆಳಕಿಗೆ ದಾರಿಯಾಗಿತ್ತಷ್ಟೆ.

ಕಾಡಿನ ಹೊರಭಾಗದಲ್ಲಿರುವ ಹಾಡಿಗಳ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಇದ್ದರೂ, ಒಳಭಾಗಕ್ಕೆ ಸೇರಿದಂತೆ ಇರುವ ಹಾಡಿಗಳ ಜನರಿಗೆ ಇದರ ಭಾಗ್ಯ ಇರಲಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವಂತೆ ಹಲವಾರು ವರ್ಷಗಳಿಂದ ಬೇಡಿಕೆ ಬಂದಿದ್ದರೂ ಕಾರ್ಯಗತವಾಗಿರಲಿಲ್ಲ. ಕೊನೆಗೂ ಕೇಂದ್ರ ಸರ್ಕಾರ ಹಾಡಿಗಳಿಗೆ ವಿದ್ಯುದ್ದೀಕರಣ ಭಾಗ್ಯ ಕಲ್ಪಿಸಲು ಮೂರು ಜಿಲ್ಲೆಗಳ ೭೪ ಹಾಡಿಗಳಿಗೆ ೫೫. ೧೪ ಕೋಟಿ ರೂ. ವೆಚ್ಚದ ಯೋಜನೆಗೆ ಅನುಮತಿ ನೀಡಿದೆ. ಈಗಾಗಲೇ ೩೦. ೮ ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸುವ ಮೂಲಕ ಆರು ತಿಂಗಳಲ್ಲಿ ಜನವಸತಿ ಹಾಡಿಗಳಿಗೆ ಸಂಪರ್ಕ ದೊರೆಯಲಿದೆ.

ಪಿಎಂ ಜನ್‌ಮನ್ ಯೋಜನೆ ನೆರವಿನಲ್ಲಿ ಬೆಳಕು: ಜೇನುಕುರುಬ ಆದಿವಾಸಿ ಸಮುದಾಯವನ್ನು ವಿಶೇಷವಾಗಿ ದುರ್ಬಲ ಬುಡಕಟ್ಟು ಎಂದು ಗುರುತಿಸಲಾಗಿದ್ದು, ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಲ್ಲಿ ಆದಿವಾಸಿ ಸಮುದಾಯಕ್ಕೆ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗುತ್ತದೆ. ೪. ೬೦ ಕೋಟಿ ರೂ. ವೆಚ್ಚದ ೧೬೦ ಹಾಡಿಗಳಲ್ಲಿರುವ ೧,೭೮೫ ವಸತಿಗಳಿಗೆ ಈ ಯೋಜನೆ ಮಂಜೂರಾಗಿದ್ದು, ಈಗಾಗಲೇ ೧,೫೩೦ ವಸತಿಗಳಿಗೆ ಸೌಲಭ್ಯ ಕಲ್ಪಿಸಿರುವುದರಿಂದ ಜೇನುಕುರುಬ ಸಮುದಾಯದವರಲ್ಲಿ ಸಂತಸ ಮನೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಟ್ರಂಪ್‌ ಮೇಲಿನ ದಾಳಿ ಇದೇ ಮೊದಲೇನಲ್ಲ ; ಈ ಹಿಂದೆಯೂ ನಡೆದಿತ್ತು ಹತ್ಯೆಗೆ ಯತ್ನ !

ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ  ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್‌ನ ಘಟನೆ…

2 mins ago

ಛಡ್ಡಾ ಬಿಜೆಪಿ ಸೇರ್ಪಡೆ ; ಜೆನ್-ಝೀಗಳಿಂದ ಅನ್‌ಫಾಲೋ ಅಭಿಯಾನ

ನವದೆಹಲಿ : ರಾಜ್ಯಸಭಾ ಸಂಸದ ರಾಘವ್‌ ಛಡ್ಡಾ ಅವರು ಎಎಪಿ(ಆಮ್‌ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ…

16 mins ago

ಮೇ.2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಹೈ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್…

31 mins ago

ಓದುಗರ ಪತ್ರ | ಸಿಇಟಿ ; ನಿಯಮಗಳಿಗೆ ತಿದ್ದುಪಡಿ ಅವಶ್ಯ

ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಸೋಲಾದದ್ದು ಮುಚ್ಚುಮರೆಯ ಕ್ಷೇತ್ರ ಪುನರ್‌ ವಿಂಗಡಣೆಗೆ

ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…

2 hours ago

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ : ದಾಳಿಗೆ ಮೋದಿ ಪ್ರತಿಕ್ರಿಯೆ

ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…

2 hours ago