ಕೇಂದ್ರ ಸರ್ಕಾರದಿಂದ ೫೫. ೧೪ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನ
ಕೆ. ಬಿ. ರಮೇಶನಾಯಕ
ಮೈಸೂರು: ಸ್ವಾತಂತ್ರ್ಯ ಬಂದು ಏಳು ದಶಕಗಳೇ ಕಳೆದರೂ ಮೂಲ ಸೌಕರ್ಯದ ಕೊರತೆ ಜತೆಗಿರುವ ಸಮರ್ಪಕ ವಿದ್ಯುತ್ ಇಲ್ಲದೆ ಕಗ್ಗತ್ತಲಿನಲ್ಲಿ ಮುಳುಗಿರುವ ಕಾಡಂಚಿನ ಹಾಡಿಗಳಿಗೆ ಆರು ತಿಂಗಳೊಳಗೆ ಪೂರ್ಣ ಪ್ರಮಾಣದಲ್ಲಿ ವಿದ್ಯುದ್ದೀಕರಣ ಭಾಗ್ಯ ದೊರೆಯಲಿದ್ದು, ಕೇಂದ್ರ ಸರ್ಕಾರ ಶಕ್ತಿ ಮಂತ್ರಾಲಯದಿಂದ ಈ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.
ಹಾಡಿಗಳಲ್ಲಿ ಸೋಲಾರ್ ಲೈಟ್ ಮತ್ತು ಸೋಲಾರ್ ಬೀದಿ ದೀಪಗಳಿಂದ ಹೆಚ್ಚು ಪ್ರಯೋಜನಕಾರಿಯಾಗದ ಕಾರಣ ವಿದ್ಯುತ್ ವಿತರಣಾ ಮಾರ್ಗದ ಮೂಲಕವೇ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಒದಗಿಸುವ ಈ ಮಹತ್ವದ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಇದರಿಂದಾಗಿ ಮಳೆಗಾಲ, ಬೇಸಿಗೆ ಕಾಲದಲ್ಲೂ ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದ ಈ ಜನರ ಮುಖದಲ್ಲಿ ಮಂದಹಾಸ ಮಿನುಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಹಾಡಿಗಳನ್ನು ಹೊಂದಿರುವ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಮಾರ್ಗಗಳು ಇರಲಿಲ್ಲ. ವಿದ್ಯುತ್ ಮಾರ್ಗ ಕಲ್ಪಿಸಲು ಅರಣ್ಯ ಇಲಾಖೆ ಕೂಡ ಅವಕಾಶ ನೀಡುತ್ತಿರಲಿಲ್ಲ. ಇದರಿಂದಾಗಿ ಈ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವುದು ಸಾಧ್ಯವಾಗಿರಲಿಲ್ಲ. ಹೀಗಾಗಿ, ಸೋಲಾರ್ ವಿದ್ಯುತ್ ಬೀದಿದೀಪಗಳನ್ನು ಅಳವಡಿಸಿದ್ದರೂ, ಅದು ಮಂದಬೆಳಕಿಗೆ ದಾರಿಯಾಗಿತ್ತಷ್ಟೆ.
ಕಾಡಿನ ಹೊರಭಾಗದಲ್ಲಿರುವ ಹಾಡಿಗಳ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಇದ್ದರೂ, ಒಳಭಾಗಕ್ಕೆ ಸೇರಿದಂತೆ ಇರುವ ಹಾಡಿಗಳ ಜನರಿಗೆ ಇದರ ಭಾಗ್ಯ ಇರಲಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವಂತೆ ಹಲವಾರು ವರ್ಷಗಳಿಂದ ಬೇಡಿಕೆ ಬಂದಿದ್ದರೂ ಕಾರ್ಯಗತವಾಗಿರಲಿಲ್ಲ. ಕೊನೆಗೂ ಕೇಂದ್ರ ಸರ್ಕಾರ ಹಾಡಿಗಳಿಗೆ ವಿದ್ಯುದ್ದೀಕರಣ ಭಾಗ್ಯ ಕಲ್ಪಿಸಲು ಮೂರು ಜಿಲ್ಲೆಗಳ ೭೪ ಹಾಡಿಗಳಿಗೆ ೫೫. ೧೪ ಕೋಟಿ ರೂ. ವೆಚ್ಚದ ಯೋಜನೆಗೆ ಅನುಮತಿ ನೀಡಿದೆ. ಈಗಾಗಲೇ ೩೦. ೮ ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸುವ ಮೂಲಕ ಆರು ತಿಂಗಳಲ್ಲಿ ಜನವಸತಿ ಹಾಡಿಗಳಿಗೆ ಸಂಪರ್ಕ ದೊರೆಯಲಿದೆ.
ಪಿಎಂ ಜನ್ಮನ್ ಯೋಜನೆ ನೆರವಿನಲ್ಲಿ ಬೆಳಕು: ಜೇನುಕುರುಬ ಆದಿವಾಸಿ ಸಮುದಾಯವನ್ನು ವಿಶೇಷವಾಗಿ ದುರ್ಬಲ ಬುಡಕಟ್ಟು ಎಂದು ಗುರುತಿಸಲಾಗಿದ್ದು, ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಲ್ಲಿ ಆದಿವಾಸಿ ಸಮುದಾಯಕ್ಕೆ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗುತ್ತದೆ. ೪. ೬೦ ಕೋಟಿ ರೂ. ವೆಚ್ಚದ ೧೬೦ ಹಾಡಿಗಳಲ್ಲಿರುವ ೧,೭೮೫ ವಸತಿಗಳಿಗೆ ಈ ಯೋಜನೆ ಮಂಜೂರಾಗಿದ್ದು, ಈಗಾಗಲೇ ೧,೫೩೦ ವಸತಿಗಳಿಗೆ ಸೌಲಭ್ಯ ಕಲ್ಪಿಸಿರುವುದರಿಂದ ಜೇನುಕುರುಬ ಸಮುದಾಯದವರಲ್ಲಿ ಸಂತಸ ಮನೆ ಮಾಡಿದೆ.
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್ನ ಘಟನೆ…
ನವದೆಹಲಿ : ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ(ಆಮ್ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ…
ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್ಜಿ ಫಸ್ಟ್…
ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…
ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…
ನವದೆಹಲಿ : ವಾಷಿಂಗ್ಟನ್ನ ಹಿಲ್ಟನ್ ಹೋಟೆಲ್ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…