Andolana originals

6 ತಿಂಗಳೊಳಗೆ ಹಾಡಿಗಳಿಗೆ ವಿದ್ಯುದ್ದೀಕರಣ ಭಾಗ್ಯ!

ಕೇಂದ್ರ ಸರ್ಕಾರದಿಂದ ೫೫. ೧೪ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನ

ಕೆ. ಬಿ. ರಮೇಶನಾಯಕ
ಮೈಸೂರು: ಸ್ವಾತಂತ್ರ್ಯ ಬಂದು ಏಳು ದಶಕಗಳೇ ಕಳೆದರೂ ಮೂಲ ಸೌಕರ್ಯದ ಕೊರತೆ ಜತೆಗಿರುವ ಸಮರ್ಪಕ ವಿದ್ಯುತ್ ಇಲ್ಲದೆ ಕಗ್ಗತ್ತಲಿನಲ್ಲಿ ಮುಳುಗಿರುವ ಕಾಡಂಚಿನ ಹಾಡಿಗಳಿಗೆ ಆರು ತಿಂಗಳೊಳಗೆ ಪೂರ್ಣ ಪ್ರಮಾಣದಲ್ಲಿ ವಿದ್ಯುದ್ದೀಕರಣ ಭಾಗ್ಯ ದೊರೆಯಲಿದ್ದು, ಕೇಂದ್ರ ಸರ್ಕಾರ ಶಕ್ತಿ ಮಂತ್ರಾಲಯದಿಂದ ಈ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.

ಹಾಡಿಗಳಲ್ಲಿ ಸೋಲಾರ್ ಲೈಟ್ ಮತ್ತು ಸೋಲಾರ್ ಬೀದಿ ದೀಪಗಳಿಂದ ಹೆಚ್ಚು ಪ್ರಯೋಜನಕಾರಿಯಾಗದ ಕಾರಣ ವಿದ್ಯುತ್ ವಿತರಣಾ ಮಾರ್ಗದ ಮೂಲಕವೇ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಒದಗಿಸುವ ಈ ಮಹತ್ವದ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಇದರಿಂದಾಗಿ ಮಳೆಗಾಲ, ಬೇಸಿಗೆ ಕಾಲದಲ್ಲೂ ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದ ಈ ಜನರ ಮುಖದಲ್ಲಿ ಮಂದಹಾಸ ಮಿನುಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಹಾಡಿಗಳನ್ನು ಹೊಂದಿರುವ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಮಾರ್ಗಗಳು ಇರಲಿಲ್ಲ. ವಿದ್ಯುತ್ ಮಾರ್ಗ ಕಲ್ಪಿಸಲು ಅರಣ್ಯ ಇಲಾಖೆ ಕೂಡ ಅವಕಾಶ ನೀಡುತ್ತಿರಲಿಲ್ಲ. ಇದರಿಂದಾಗಿ ಈ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವುದು ಸಾಧ್ಯವಾಗಿರಲಿಲ್ಲ. ಹೀಗಾಗಿ, ಸೋಲಾರ್ ವಿದ್ಯುತ್ ಬೀದಿದೀಪಗಳನ್ನು ಅಳವಡಿಸಿದ್ದರೂ, ಅದು ಮಂದಬೆಳಕಿಗೆ ದಾರಿಯಾಗಿತ್ತಷ್ಟೆ.

ಕಾಡಿನ ಹೊರಭಾಗದಲ್ಲಿರುವ ಹಾಡಿಗಳ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಇದ್ದರೂ, ಒಳಭಾಗಕ್ಕೆ ಸೇರಿದಂತೆ ಇರುವ ಹಾಡಿಗಳ ಜನರಿಗೆ ಇದರ ಭಾಗ್ಯ ಇರಲಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವಂತೆ ಹಲವಾರು ವರ್ಷಗಳಿಂದ ಬೇಡಿಕೆ ಬಂದಿದ್ದರೂ ಕಾರ್ಯಗತವಾಗಿರಲಿಲ್ಲ. ಕೊನೆಗೂ ಕೇಂದ್ರ ಸರ್ಕಾರ ಹಾಡಿಗಳಿಗೆ ವಿದ್ಯುದ್ದೀಕರಣ ಭಾಗ್ಯ ಕಲ್ಪಿಸಲು ಮೂರು ಜಿಲ್ಲೆಗಳ ೭೪ ಹಾಡಿಗಳಿಗೆ ೫೫. ೧೪ ಕೋಟಿ ರೂ. ವೆಚ್ಚದ ಯೋಜನೆಗೆ ಅನುಮತಿ ನೀಡಿದೆ. ಈಗಾಗಲೇ ೩೦. ೮ ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸುವ ಮೂಲಕ ಆರು ತಿಂಗಳಲ್ಲಿ ಜನವಸತಿ ಹಾಡಿಗಳಿಗೆ ಸಂಪರ್ಕ ದೊರೆಯಲಿದೆ.

ಪಿಎಂ ಜನ್‌ಮನ್ ಯೋಜನೆ ನೆರವಿನಲ್ಲಿ ಬೆಳಕು: ಜೇನುಕುರುಬ ಆದಿವಾಸಿ ಸಮುದಾಯವನ್ನು ವಿಶೇಷವಾಗಿ ದುರ್ಬಲ ಬುಡಕಟ್ಟು ಎಂದು ಗುರುತಿಸಲಾಗಿದ್ದು, ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಲ್ಲಿ ಆದಿವಾಸಿ ಸಮುದಾಯಕ್ಕೆ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗುತ್ತದೆ. ೪. ೬೦ ಕೋಟಿ ರೂ. ವೆಚ್ಚದ ೧೬೦ ಹಾಡಿಗಳಲ್ಲಿರುವ ೧,೭೮೫ ವಸತಿಗಳಿಗೆ ಈ ಯೋಜನೆ ಮಂಜೂರಾಗಿದ್ದು, ಈಗಾಗಲೇ ೧,೫೩೦ ವಸತಿಗಳಿಗೆ ಸೌಲಭ್ಯ ಕಲ್ಪಿಸಿರುವುದರಿಂದ ಜೇನುಕುರುಬ ಸಮುದಾಯದವರಲ್ಲಿ ಸಂತಸ ಮನೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago