ಕೇಂದ್ರ ಸರ್ಕಾರದಿಂದ ೫೫. ೧೪ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನ
ಕೆ. ಬಿ. ರಮೇಶನಾಯಕ
ಮೈಸೂರು: ಸ್ವಾತಂತ್ರ್ಯ ಬಂದು ಏಳು ದಶಕಗಳೇ ಕಳೆದರೂ ಮೂಲ ಸೌಕರ್ಯದ ಕೊರತೆ ಜತೆಗಿರುವ ಸಮರ್ಪಕ ವಿದ್ಯುತ್ ಇಲ್ಲದೆ ಕಗ್ಗತ್ತಲಿನಲ್ಲಿ ಮುಳುಗಿರುವ ಕಾಡಂಚಿನ ಹಾಡಿಗಳಿಗೆ ಆರು ತಿಂಗಳೊಳಗೆ ಪೂರ್ಣ ಪ್ರಮಾಣದಲ್ಲಿ ವಿದ್ಯುದ್ದೀಕರಣ ಭಾಗ್ಯ ದೊರೆಯಲಿದ್ದು, ಕೇಂದ್ರ ಸರ್ಕಾರ ಶಕ್ತಿ ಮಂತ್ರಾಲಯದಿಂದ ಈ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.
ಹಾಡಿಗಳಲ್ಲಿ ಸೋಲಾರ್ ಲೈಟ್ ಮತ್ತು ಸೋಲಾರ್ ಬೀದಿ ದೀಪಗಳಿಂದ ಹೆಚ್ಚು ಪ್ರಯೋಜನಕಾರಿಯಾಗದ ಕಾರಣ ವಿದ್ಯುತ್ ವಿತರಣಾ ಮಾರ್ಗದ ಮೂಲಕವೇ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಒದಗಿಸುವ ಈ ಮಹತ್ವದ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಇದರಿಂದಾಗಿ ಮಳೆಗಾಲ, ಬೇಸಿಗೆ ಕಾಲದಲ್ಲೂ ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದ ಈ ಜನರ ಮುಖದಲ್ಲಿ ಮಂದಹಾಸ ಮಿನುಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಹಾಡಿಗಳನ್ನು ಹೊಂದಿರುವ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಮಾರ್ಗಗಳು ಇರಲಿಲ್ಲ. ವಿದ್ಯುತ್ ಮಾರ್ಗ ಕಲ್ಪಿಸಲು ಅರಣ್ಯ ಇಲಾಖೆ ಕೂಡ ಅವಕಾಶ ನೀಡುತ್ತಿರಲಿಲ್ಲ. ಇದರಿಂದಾಗಿ ಈ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವುದು ಸಾಧ್ಯವಾಗಿರಲಿಲ್ಲ. ಹೀಗಾಗಿ, ಸೋಲಾರ್ ವಿದ್ಯುತ್ ಬೀದಿದೀಪಗಳನ್ನು ಅಳವಡಿಸಿದ್ದರೂ, ಅದು ಮಂದಬೆಳಕಿಗೆ ದಾರಿಯಾಗಿತ್ತಷ್ಟೆ.
ಕಾಡಿನ ಹೊರಭಾಗದಲ್ಲಿರುವ ಹಾಡಿಗಳ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಇದ್ದರೂ, ಒಳಭಾಗಕ್ಕೆ ಸೇರಿದಂತೆ ಇರುವ ಹಾಡಿಗಳ ಜನರಿಗೆ ಇದರ ಭಾಗ್ಯ ಇರಲಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವಂತೆ ಹಲವಾರು ವರ್ಷಗಳಿಂದ ಬೇಡಿಕೆ ಬಂದಿದ್ದರೂ ಕಾರ್ಯಗತವಾಗಿರಲಿಲ್ಲ. ಕೊನೆಗೂ ಕೇಂದ್ರ ಸರ್ಕಾರ ಹಾಡಿಗಳಿಗೆ ವಿದ್ಯುದ್ದೀಕರಣ ಭಾಗ್ಯ ಕಲ್ಪಿಸಲು ಮೂರು ಜಿಲ್ಲೆಗಳ ೭೪ ಹಾಡಿಗಳಿಗೆ ೫೫. ೧೪ ಕೋಟಿ ರೂ. ವೆಚ್ಚದ ಯೋಜನೆಗೆ ಅನುಮತಿ ನೀಡಿದೆ. ಈಗಾಗಲೇ ೩೦. ೮ ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸುವ ಮೂಲಕ ಆರು ತಿಂಗಳಲ್ಲಿ ಜನವಸತಿ ಹಾಡಿಗಳಿಗೆ ಸಂಪರ್ಕ ದೊರೆಯಲಿದೆ.
ಪಿಎಂ ಜನ್ಮನ್ ಯೋಜನೆ ನೆರವಿನಲ್ಲಿ ಬೆಳಕು: ಜೇನುಕುರುಬ ಆದಿವಾಸಿ ಸಮುದಾಯವನ್ನು ವಿಶೇಷವಾಗಿ ದುರ್ಬಲ ಬುಡಕಟ್ಟು ಎಂದು ಗುರುತಿಸಲಾಗಿದ್ದು, ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಲ್ಲಿ ಆದಿವಾಸಿ ಸಮುದಾಯಕ್ಕೆ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗುತ್ತದೆ. ೪. ೬೦ ಕೋಟಿ ರೂ. ವೆಚ್ಚದ ೧೬೦ ಹಾಡಿಗಳಲ್ಲಿರುವ ೧,೭೮೫ ವಸತಿಗಳಿಗೆ ಈ ಯೋಜನೆ ಮಂಜೂರಾಗಿದ್ದು, ಈಗಾಗಲೇ ೧,೫೩೦ ವಸತಿಗಳಿಗೆ ಸೌಲಭ್ಯ ಕಲ್ಪಿಸಿರುವುದರಿಂದ ಜೇನುಕುರುಬ ಸಮುದಾಯದವರಲ್ಲಿ ಸಂತಸ ಮನೆ ಮಾಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…