Andolana originals

ಅಧಿಕಾರಿಗಳ ನಿರ್ಲಕ್ಷ್ಯ; ಬರಿದಾದ ಕೆರೆಕಟ್ಟೆಗಳು

ಮಂಜು ಕೋಟೆ

ಹಂಪಾಪುರ ಹೋಬಳಿ ವ್ಯಾಪ್ತಿಯ ರೈತರಲ್ಲಿ ಆತಂಕ; ನೀರು ತುಂಬಿಸದಿದ್ದರೆ ಹೋರಾಟದ ಎಚ್ಚರಿಕೆ

ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಹೋಬಳಿ ವ್ಯಾಪ್ತಿಯಲ್ಲಿ ಬರಿದಾಗಿರುವ ಕೆರೆಗಳಿಗೆ ನೀರು ತುಂಬಿಸಲು ಅಽಕಾರಿಗಳು ಮುಂದಾಗದೇ ಇರುವುದರಿಂದ ರೈತರು ಮತ್ತು ಜನಸಾಮಾನ್ಯರು ಕಂಗಾಲಾಗಿದ್ದಾರೆ.

ಕೋಟೆ ತಾಲ್ಲೂಕು ಅರೆ ಮಲೆನಾಡು ಎಂದು ಹೆಸರಾದರೂ ಹಂಪಾಪುರ ಹೋಬಳಿ ಬರ ಪೀಡಿತ ಪ್ರದೇಶವಾಗಿದೆ. ಕಳೆದ ೪-೫ ವರ್ಷಗಳ ಹಿಂದೆ ಸರ್ಕಾರ ಹಂಪಾಪುರ ಮತ್ತು ಜಯಪುರ ಹೋಬಳಿಗಳ ವ್ಯಾಪ್ತಿಯ ೩೦ ಕೆರೆಗಳಿಗೆ ಕಬಿನಿ ನದಿಯ ನೀರನ್ನು ತುಂಬಿಸುವ ಯೋಜನೆಗೆ ೬೦ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗಿದೆ. ಆದರೆ, ರೈತರು ಮತ್ತು ಸಾರ್ವಜನಿಕರ ಅನುಕೂಲಕ್ಕೆ ಬಾರದಿರುವುದು ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ.

ತಾಲ್ಲೂಕಿನ ಹಂಪಾಪುರ ಹೋಬಳಿ ವ್ಯಾಪ್ತಿಯ ೧೪ ಕೆರೆಗಳಲ್ಲೂ ನೀರಿಲ್ಲದೆ ಬರಿದಾಗಿದ್ದು, ಜಾನುವಾರು, ರೈತರು, ಗ್ರಾಮಸ್ಥರಿಗೆ ನೀರಿನ ಸಮಸ್ಯೆ ಎದುರಾಗಿದೆ. ಮತ್ತೊಂದೆಡೆ ಕಬಿನಿ ಜಲಾಶಯ ವರ್ಷದಲ್ಲಿ ೨-೩ ಬಾರಿ ಭರ್ತಿ ಯಾಗಿ ನದಿಗೆ ಭಾರಿ ಪ್ರಮಾಣದ ನೀರನ್ನು ಹರಿಯಬಿಡಲಾಗುತ್ತಿದೆ.

ಆದರೆ ಹೊರಹೋಗುತ್ತಿರುವ ಇದೇ ನೀರಿನ ಬಳಿ ಏತ ನೀರಾವರಿ ಮೂಲಕ ತಾಲ್ಲೂಕಿನ ಹಂಪಾಪುರ ಮತ್ತು ಮೈಸೂರು ತಾಲ್ಲೂಕಿನ ಜಯಪುರ ವ್ಯಾಪ್ತಿಯ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಕೆಲಸವನ್ನು ನೀರಾವರಿ ಇಲಾಖೆ ಅಽಕಾರಿಗಳು ಮಾಡಿದ್ದರೆ ಈ ಭಾಗದ ಕೆರೆಕಟ್ಟೆಗಳು ನೀರುಕಾಣುತ್ತಿದ್ದವು. ಇದರಿಂದ ರೈತರಿಗೆ ಅನುಕೂಲವಾಗುತ್ತಿತ್ತು.

ಈ ಭಾಗದ ರೈತರುಗಳು ಕೆರೆಕಟ್ಟೆಗಳಿಗೆ ನೀರು ತುಂಬಿಸುವಂತೆ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಇಂದು, ನಾಳೆ ಎಂದು ಕಾಲ ಕಳೆಯುತ್ತಿರುವುದರಿಂದ ಕೆರೆಗಳು ಬರಿದಾಗಿದ್ದು, ರೈತರು ಕೆರೆಯ ಬಳಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೆರೆಗಳಿಗೆ ನೀರು ತುಂಬಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲು ಮುಂದಾಗಿದ್ದಾರೆ.

” ಹಂಪಾಪುರ ಮತ್ತು ಜಯಪುರ ಹೋಬಳಿಯ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯ ಪ್ರಾರಂಭಿಸಲಾಗಿತ್ತು. ಕೆಲವೊಂದು ಸಮಸ್ಯೆಗಳು ಎದುರಾಗಿದ್ದರಿಂದ ದುರಸ್ತಿ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಕಬಿನಿ ಏತ ನೀರಾವರಿ ಮೂಲಕ ನೀರು ತುಂಬಿಸಲು ಕ್ರಮ ಕೈಗೊಳ್ಳಲಾಗುವುದು.”

-ಅವಿನಾಶ್, ನೀರಾವರಿ ಇಲಾಖೆ ಅಧಿಕಾರಿ

” ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನಿಂದ ಹಂಪಾಪುರ ಹೋಬಳಿ ವ್ಯಾಪ್ತಿಯಲ್ಲಿರುವ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ಮುಂದಾಗಿಲ್ಲ. ಈ ಭಾಗದಲ್ಲಿ ಕೆರೆಗಳಲ್ಲಿ ನೀರಿಲ್ಲದೆ ದನ-ಕರುಗಳು, ರೈತರು, ಸಾರ್ವಜನಿಕರು ಪರದಾಡುವಂತಾಗಿದೆ. ಕೆರೆಗಳಿಗೆ ನೀರುತುಂಬಿಸುವಂತೆ ಮನವಿ ಮಾಡಿದರೂ ಸಬೂಬು ಹೇಳುತ್ತಿದ್ದಾರೆ. ೨-೩ ದಿನಗಳಲ್ಲಿ ಕೆರೆಗೆ ನೀರು ತುಂಬಿಸುವ ಕಾರ್ಯ ಮಾಡದಿದ್ದರೆ ಈ ಭಾಗದ ರೈತರ ಜತೆಗೂಡಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು.”

-ಯತೀಶ್ ಕುಮಾರ್, ರೈತ, ಶಿಂಡೇನಹಳ್ಳಿ 

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

9 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

10 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

11 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

12 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

12 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

13 hours ago