Andolana originals

ಅಧಿಕಾರಿಗಳ ನಿರ್ಲಕ್ಷ್ಯ; ಬರಿದಾದ ಕೆರೆಕಟ್ಟೆಗಳು

ಮಂಜು ಕೋಟೆ

ಹಂಪಾಪುರ ಹೋಬಳಿ ವ್ಯಾಪ್ತಿಯ ರೈತರಲ್ಲಿ ಆತಂಕ; ನೀರು ತುಂಬಿಸದಿದ್ದರೆ ಹೋರಾಟದ ಎಚ್ಚರಿಕೆ

ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಹೋಬಳಿ ವ್ಯಾಪ್ತಿಯಲ್ಲಿ ಬರಿದಾಗಿರುವ ಕೆರೆಗಳಿಗೆ ನೀರು ತುಂಬಿಸಲು ಅಽಕಾರಿಗಳು ಮುಂದಾಗದೇ ಇರುವುದರಿಂದ ರೈತರು ಮತ್ತು ಜನಸಾಮಾನ್ಯರು ಕಂಗಾಲಾಗಿದ್ದಾರೆ.

ಕೋಟೆ ತಾಲ್ಲೂಕು ಅರೆ ಮಲೆನಾಡು ಎಂದು ಹೆಸರಾದರೂ ಹಂಪಾಪುರ ಹೋಬಳಿ ಬರ ಪೀಡಿತ ಪ್ರದೇಶವಾಗಿದೆ. ಕಳೆದ ೪-೫ ವರ್ಷಗಳ ಹಿಂದೆ ಸರ್ಕಾರ ಹಂಪಾಪುರ ಮತ್ತು ಜಯಪುರ ಹೋಬಳಿಗಳ ವ್ಯಾಪ್ತಿಯ ೩೦ ಕೆರೆಗಳಿಗೆ ಕಬಿನಿ ನದಿಯ ನೀರನ್ನು ತುಂಬಿಸುವ ಯೋಜನೆಗೆ ೬೦ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗಿದೆ. ಆದರೆ, ರೈತರು ಮತ್ತು ಸಾರ್ವಜನಿಕರ ಅನುಕೂಲಕ್ಕೆ ಬಾರದಿರುವುದು ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ.

ತಾಲ್ಲೂಕಿನ ಹಂಪಾಪುರ ಹೋಬಳಿ ವ್ಯಾಪ್ತಿಯ ೧೪ ಕೆರೆಗಳಲ್ಲೂ ನೀರಿಲ್ಲದೆ ಬರಿದಾಗಿದ್ದು, ಜಾನುವಾರು, ರೈತರು, ಗ್ರಾಮಸ್ಥರಿಗೆ ನೀರಿನ ಸಮಸ್ಯೆ ಎದುರಾಗಿದೆ. ಮತ್ತೊಂದೆಡೆ ಕಬಿನಿ ಜಲಾಶಯ ವರ್ಷದಲ್ಲಿ ೨-೩ ಬಾರಿ ಭರ್ತಿ ಯಾಗಿ ನದಿಗೆ ಭಾರಿ ಪ್ರಮಾಣದ ನೀರನ್ನು ಹರಿಯಬಿಡಲಾಗುತ್ತಿದೆ.

ಆದರೆ ಹೊರಹೋಗುತ್ತಿರುವ ಇದೇ ನೀರಿನ ಬಳಿ ಏತ ನೀರಾವರಿ ಮೂಲಕ ತಾಲ್ಲೂಕಿನ ಹಂಪಾಪುರ ಮತ್ತು ಮೈಸೂರು ತಾಲ್ಲೂಕಿನ ಜಯಪುರ ವ್ಯಾಪ್ತಿಯ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಕೆಲಸವನ್ನು ನೀರಾವರಿ ಇಲಾಖೆ ಅಽಕಾರಿಗಳು ಮಾಡಿದ್ದರೆ ಈ ಭಾಗದ ಕೆರೆಕಟ್ಟೆಗಳು ನೀರುಕಾಣುತ್ತಿದ್ದವು. ಇದರಿಂದ ರೈತರಿಗೆ ಅನುಕೂಲವಾಗುತ್ತಿತ್ತು.

ಈ ಭಾಗದ ರೈತರುಗಳು ಕೆರೆಕಟ್ಟೆಗಳಿಗೆ ನೀರು ತುಂಬಿಸುವಂತೆ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಇಂದು, ನಾಳೆ ಎಂದು ಕಾಲ ಕಳೆಯುತ್ತಿರುವುದರಿಂದ ಕೆರೆಗಳು ಬರಿದಾಗಿದ್ದು, ರೈತರು ಕೆರೆಯ ಬಳಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೆರೆಗಳಿಗೆ ನೀರು ತುಂಬಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲು ಮುಂದಾಗಿದ್ದಾರೆ.

” ಹಂಪಾಪುರ ಮತ್ತು ಜಯಪುರ ಹೋಬಳಿಯ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯ ಪ್ರಾರಂಭಿಸಲಾಗಿತ್ತು. ಕೆಲವೊಂದು ಸಮಸ್ಯೆಗಳು ಎದುರಾಗಿದ್ದರಿಂದ ದುರಸ್ತಿ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಕಬಿನಿ ಏತ ನೀರಾವರಿ ಮೂಲಕ ನೀರು ತುಂಬಿಸಲು ಕ್ರಮ ಕೈಗೊಳ್ಳಲಾಗುವುದು.”

-ಅವಿನಾಶ್, ನೀರಾವರಿ ಇಲಾಖೆ ಅಧಿಕಾರಿ

” ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನಿಂದ ಹಂಪಾಪುರ ಹೋಬಳಿ ವ್ಯಾಪ್ತಿಯಲ್ಲಿರುವ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ಮುಂದಾಗಿಲ್ಲ. ಈ ಭಾಗದಲ್ಲಿ ಕೆರೆಗಳಲ್ಲಿ ನೀರಿಲ್ಲದೆ ದನ-ಕರುಗಳು, ರೈತರು, ಸಾರ್ವಜನಿಕರು ಪರದಾಡುವಂತಾಗಿದೆ. ಕೆರೆಗಳಿಗೆ ನೀರುತುಂಬಿಸುವಂತೆ ಮನವಿ ಮಾಡಿದರೂ ಸಬೂಬು ಹೇಳುತ್ತಿದ್ದಾರೆ. ೨-೩ ದಿನಗಳಲ್ಲಿ ಕೆರೆಗೆ ನೀರು ತುಂಬಿಸುವ ಕಾರ್ಯ ಮಾಡದಿದ್ದರೆ ಈ ಭಾಗದ ರೈತರ ಜತೆಗೂಡಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು.”

-ಯತೀಶ್ ಕುಮಾರ್, ರೈತ, ಶಿಂಡೇನಹಳ್ಳಿ 

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

4 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

5 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago