Andolana originals

ವಿರಾಜಪೇಟೆ ಪಟ್ಟಣದಲ್ಲಿ 11 ಉಪರಸ್ತೆಗಳ ಒತ್ತುವರಿ

ಕಾಂಗೀರ ಬೋಪಣ್ಣ

ಸರ್ಕಾರಿ ಜಾಗ ಅತಿಕ್ರಮಿಸಿ ಕಟ್ಟಡ ನಿರ್ಮಾಣ

ಸರ್ವೆ ನಕಾಶೆಯಲ್ಲಿ ೧೧ ಉಪರಸ್ತೆಗಳು ಪತ್ತೆ

ಸರ್ವೆ ಇಲಾಖೆಯಿಂದ ಸರ್ವೆ ಕಾರ್ಯ ಆರಂಭ 

ವಿರಾಜಪೇಟೆ: ಪಟ್ಟಣದ ಉಪರಸ್ತೆಗಳ ಒತ್ತುವರಿಯಿಂದ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರಿಗೆ ಸಂಚಾರ ಸಮಸ್ಯೆ ಉಂಟಾಗಿತ್ತು. ಇದೀಗ ಪಟ್ಟಣದ ೧೧ ಕಡೆಗಳಲ್ಲಿ ಇರುವ ಉಪರಸ್ತೆಗಳ ಒತ್ತುವರಿ ಪತ್ತೆಗೆ ಸರ್ವೆ ಕಾರ್ಯ ಆರಂಭವಾಗಿದ್ದು, ಶೀಘ್ರದಲ್ಲೇ ಒತ್ತುವರಿ ತೆರವುಗೊಳಿಸಿದಲ್ಲಿ ಪಟ್ಟಣದಲ್ಲಿ ವಾಹನ ದಟ್ಟಣೆ ಸಮಸ್ಯೆ ಬಗೆಹರಿಯಲಿದೆ.

ವಿರಾಜಪೇಟೆ ಪಟ್ಟಣ ಎಂದರೆ ಅಭಿವೃದ್ಧಿ ವಂಚಿತ ಪಟ್ಟಣವೆಂದೇ ಗುರತಿಸಲ್ಪಟ್ಟಿದೆ. ಇದಕ್ಕೆ ಆಡಳಿತಾರೂಢ ಸರ್ಕಾರಗಳ ಇಚ್ಚಾಶಕ್ತಿ ಕೊರತೆಯ ಜೊತೆಗೆ ಕೆಲವು ಸ್ವಾರ್ಥಪರರ ಅಡ್ಡಿಯೂ ಕಾರಣವಾಗಿದೆ. ಹೀಗಾಗಿ ಪಟ್ಟಣದಲ್ಲಿ ವಾಹನಗಳ ಒತ್ತಡ ತೀವ್ರವಾಗಿ ಹೆಚ್ಚಿದ್ದರೂ ರಸ್ತೆ ಅಗಲೀಕರಣ ಕಾರ್ಯ ವಿಳಂಬವಾಗುತ್ತಿದೆ.

ಈ ನಡುವೆ ಮುಖ್ಯರಸ್ತೆಯ ಒತ್ತಡವನ್ನು ತಗ್ಗಿಸಲು ಸಹಕಾರಿಯಾಗುವ ಉದ್ದೇಶದಿಂದ ಸರ್ವೆ ನಕಾಶೆಯಲ್ಲಿ ೧೧ ಉಪ ರಸ್ತೆಗಳು ಕಂಡುಬಂದಿದ್ದು, ಸಾರ್ವಜನಿಕರು ನೀಡಿದ ದೂರಿನಂತೆ ಸರ್ವೆ ಇಲಾಖೆ ಇದರ ಸರ್ವೆ ಕಾರ್ಯವನ್ನು ಆರಂಭಿಸಿದೆ.

ವಿರಾಜಪೇಟೆ ಪಟ್ಟಣದಲ್ಲಿ ಇರುವ ಮುಖ್ಯ ರಸ್ತೆಗಳು ರಾಜ್ಯ ಮತ್ತು ಅಂತಾರಾಜ್ಯ ಹೆದ್ದಾರಿಯಾಗಿವೆ.ಸುಣ್ಣದ ಬೀದಿ ರಸ್ತೆಯೊಂದನ್ನು ಬಿಟ್ಟರೆ ಪಟ್ಟಣದಲ್ಲಿ ಉಪ ರಸ್ತೆಗಳೇ ಮಂಗಮಾಯವಾಗಿವೆ. ಇತ್ತೀಚಿನ ದಿನಗಳಲ್ಲಿ ಈ ಮುಖ್ಯರಸ್ತೆಯಲ್ಲಿ ಹೆಚ್ಚಾಗಿರುವ ವಾಹನಗಳ ಒತ್ತಡದ ಬಗ್ಗೆ ಜನರೇ ಅವಲೋಕನ ನಡೆಸಿದ ನಂತರ ಅಽಕೃತ ಉಪರಸ್ತೆಗಳು ಒತ್ತುವರಿಯಾಗಿರುವುದು ಬೆಳಕಿಗೆ ಬಂದಿವೆ.

ಗಡಿಯಾರ ಕಂಬದಿಂದ ದೊಡ್ಡಟ್ಟಿ ಚೌಕಿರೆಗೆ ೧೧ ಉಪ ರಸ್ತೆಗಳು ಸರ್ವೆ ನಕಾಶೆಯಲ್ಲಿ ಸ್ವಷ್ಟವಾಗಿ ಕಂಡುಬರುತ್ತಿವೆ. ಈ ಉಪರಸ್ತೆಗಳು ಸರ್ಕಾರಿ ಸ್ವತ್ತುಗಳಾಗಿವೆ. ಆದರೂ ಕೆಲವರು ಇದನ್ನು ಅತಿಕ್ರಮಿಸಿಕೊಂಡು ಮನೆ ಕಟ್ಟಿಕೊಂಡು ವಾಸವಿದ್ದಾರೆ. ಕ್ರಮ ಕೈಗೊಳ್ಳಬೇಕಾದವರು ಸ್ವಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎನ್ನುವುದು ಸಾರ್ವಜನಿಕರ ಆರೋಪ. ಈ ರಸ್ತೆ ಪುರಸಭೆಗೆ ಲಭ್ಯವಾದರೆ ನಿಯಮಾನು ಸಾರ ೮ ಅಡಿಗಳ ರಸ್ತೆಯನ್ನು ನಿರ್ಮಾಣ ಮಾಡಬಹುದು. ಇದರಿಂದ ಆಟೋ, ಬೈಕ್ ಮತ್ತಿತರ ವಾಹನಗಳ ಸಂಚಾರಕ್ಕೆ ಮುಖ್ಯ ರಸ್ತೆಯ ಅವಲಂಬನೆ ತಪ್ಪಲಿದೆ. ಈ ನಡುವೆ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಪುರಸಭೆ ದೂರನ್ನು ಸರ್ವೆ ಇಲಾಖೆಗೆ ಕಳುಹಿಸಿದೆ. ಇಲಾಖೆ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿದೆ.

ಏನೇ ಆದರೂ ಪುರಸಭೆ ಹಾಗೂ ಶಾಸಕರು ಇದನ್ನು ಗಂಭೀರವಾಗಿ ಪರಿಗಣಿಸಿ ಒತ್ತುವರಿ ಸ್ಥಳವನ್ನು ತೆರವುಗೊಳಿಸಿ ಪಟ್ಟಣದಲ್ಲಿನ ಸುಗಮ ಸಂಚಾರದ ದೃಷ್ಟಿಯಿಂದ ರಸ್ತೆ ನಿರ್ಮಿಸಿದರೆ ಬೆಳವಣಿಗೆ ಹೊಂದುತ್ತಿರುವ ಪಟ್ಟಣದಲ್ಲಿ ವಾಹನ ದಟ್ಟಣೆ ತಗ್ಗಿಸಲು ಸಾಧ್ಯ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಪುರಸಭೆ ಆಡಳಿತ ಹಾಗೂ ಶಾಸಕರು ಈ ವಿಚಾರದಲ್ಲಿ ಇಚ್ಚಾಶಕ್ತಿ ತೋರ ಬೇಕೆಂಬುದು ಸ್ಥಳೀಯರ ಒತ್ತಾಯವಾಗಿದೆ.

” ಅನೇಕ ಕಡೆ ಪುರಸಭೆಯ ಸ್ವತ್ತುಗಳು ಒತ್ತುವರಿಯಾಗಿವೆ. ಇದರಿಂದ ಅಭಿವೃದ್ಧಿಗೆ ಅಗತ್ಯ ಜಾಗ ದೊರಕುತ್ತಿಲ್ಲ. ಅದೇ ರೀತಿ ಪಟ್ಟಣದಲ್ಲಿ ಅಗತ್ಯ ಉಪ ರಸ್ತೆಗಳೂ ಇಲ್ಲ. ಇರುವ ಉಪರಸ್ತೆಗಳು ಒತ್ತುವರಿಯಾಗಿದ್ದು, ಒತ್ತುವರಿ ತೆರವುಗೊಳಿಸಿದಲ್ಲಿ ವಾಹನದಟ್ಟಣೆ ಸಮಸ್ಯೆ ನಿವಾರಿಸಬಹುದಾಗಿದೆ. ಇನ್ನಾದರೂ ಸಂಬಂಧಪಟ್ಟವರು ಕ್ರಮ ವಹಿಸಿ ಈ ವಿಚಾರದ ಬಗ್ಗೆ ಗಂಭೀರವಾಗಿ ಪರಿಗಣಿಸಲಿ.”

ಮದನ್, ಸಾಮಾಜಿಕ ಕಾರ್ಯಕರ್ತ, ವಿರಾಜಪೇಟೆ

” ವಿರಾಜಪೇಟೆ ಪಟ್ಟಣದಲ್ಲಿರುವ ಉಪರಸ್ತೆಗಳ ಸರ್ವೆ ಕಾರ್ಯ ಪ್ರಗತಿಯಲ್ಲಿದೆ. ಸರ್ವೆ ಅಽಕಾರಿಗಳು ದಿನಾಂಕ ನೀಡಿದಾಗ ಸಿಬ್ಬಂದಿಯನ್ನು ಕಳುಹಿಸಿ ಸಹಕಾರ ನೀಡಲಾಗುತ್ತಿದೆ. ಪಟ್ಟಣದಲ್ಲಿ ಉಪರಸ್ತೆಗಳು ಇರುವುದು ಗಮನಕ್ಕೆ ಬಂದಿದೆ. ವರದಿ ಬಳಿಕ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು.”

ನಾಚಪ್ಪ, ಮುಖ್ಯಾಧಿಕಾರಿ, ವಿರಾಜಪೇಟೆ ಪುರಸಭೆ.

ಆಂದೋಲನ ಡೆಸ್ಕ್

Recent Posts

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…

39 mins ago

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

56 mins ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

1 hour ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

1 hour ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

1 hour ago

ಕುಶಾಲನಗರ| ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…

1 hour ago