ಅರ್ಥಪೂರ್ಣವಾಗಿ ನಡೆದ ಮಿನಿ ದಸರಾ, ಗಮನ ಸೆಳೆದ ಪೊಲೀಸರ ಬನ್ನಿ ಪೂಜೆ
ಮಂಜು ಕೋಟೆ
ಎಚ್.ಡಿ.ಕೋಟೆ: ಪಟ್ಟಣದಲ್ಲಿ ಶನಿವಾರ ಶ್ರೀ ವರದರಾಜ ಸ್ವಾಮಿ, ಶ್ರೀದೇವಿ, ಭೂದೇವಿ ಮತ್ತು ಚಾಮುಂಡೇಶ್ವರಿ ಉತ್ಸವ ಮೂರ್ತಿಗಳ ಮೆರವಣಿಗೆಯೊಂದಿಗೆ ಮಿನಿ ದಸರಾ ಮತ್ತು ನವರಾತ್ರಿ ಉತ್ಸವ ಅರ್ಥಪೂರ್ಣವಾಗಿ ನೆರವೇರಿತು.
ಹೌಸಿಂಗ್ ಬೋರ್ಡ್ನಲ್ಲಿರುವ ಚಾಮುಂಡೇ ಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ದೇವಿಗೆ ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 3.30ರ ಸಂದರ್ಭದಲ್ಲಿ ಬೆಳ್ಳಿ ರಥದಲ್ಲಿ ಕೂರಿಸಿದ ಚಾಮುಂಡೇಶ್ವರಿ ಉತ್ಸವಮೂರ್ತಿಯೊಂದಿಗೆ ವಾದ್ಯಗೋಷ್ಠಿ, ಕಲಾತಂಡಗಳು ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದವು. ಮೊದಲನೇ ಮುಖ್ಯರಸ್ತೆಯಲ್ಲಿರುವ ಚೋಳರ ಕಾಲದ ವರದರಾಜಸ್ವಾಮಿ ದೇವಸ್ಥಾನದಲ್ಲಿ ಶ್ರೀ ವರದರಾಜಸ್ವಾಮಿ ಮತ್ತು ಭೂದೇವಿ, ಶ್ರೀದೇವಿ ದೇವರ ಉತ್ಸವ ಮೂರ್ತಿಗಳ ಮೆರವಣಿಗೆಗೆ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಸಮಿತಿಯವರು ಚಾಲನೆ ನೀಡಿದರು.
ಇದಕ್ಕೂ ಮುನ್ನ ಸರ್ಕಲ್ ಇನ್ಸ್ಪೆಕ್ಟರ್ ಶಬೀರ್ ಹುಸೇನ್ ಸಬ್ ಇನ್ ಸೆಕ ಪ್ರಕಾಶ್ ಮತ್ತಿತರರು ಪೊಲೀಸ್ ಪರೇಡ್ ನೆರವೇರಿಸಿ, ಉತ್ಸವಮೂರ್ತಿ ಗಳಿಗೆ ಗೌರವ ಸಲ್ಲಿಸಿದರು. ಅನೇಕ ಕಲಾತಂಡಗಳು, ವಾದ್ಯಗೋಷ್ಠಿಗಳು, ಸ್ತಬ್ಧಚಿತ್ರಗಳೊಡನೆ ಚಾಮುಂಡೇಶ್ವರಿ ಮತ್ತು ವರದರಾಜಸ್ವಾಮಿ ಉತ್ಸವಮೂರ್ತಿಗಳ ಮೆರವಣಿಗೆ ಮೊದಲನೇ ಮುಖ್ಯ ರಸ್ತೆಯಿಂದ ಚಾಮುಂಡೇಶ್ವರಿ ದೇವಸ್ಥಾನದ ಬನ್ನಿಮರದವರೆಗೆ ನಡೆಯಿತು. ನಂತರ ಅಲ್ಲಿರುವ ಬನ್ನಿಮರಕ್ಕೆ ಪೊಲೀಸ್ ಇಲಾಖೆಯವರು ಪೊಲೀಸ್ ಪೂಜೆ ನೆರವೇರಿಸಿದರು. ಈ ಮೂಲಕ 9 ದಿನಗಳಿಂದ ವರದರಾಜಸ್ವಾಮಿ ಮತ್ತು ಚಾಮುಂಡೇಶ್ವರಿ, ಬೀರೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿದ್ದ ನವರಾತ್ರಿ ಮತ್ತು ವಿಜಯದಶಮಿಯ ದಸರಾಕ್ಕೆ ತೆರೆ ಬಿದ್ದಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿಗಳ ಮುಖ್ಯಸ್ಥರಾದ ಬಿ.ಎಸ್.ರಂಗ ಅಯ್ಯಂಗಾರ್, ನಟರಾಜ್, ಡೇರಿ ಶ್ರೀಕಾಂತ್, ತಿರುಮಲಾಚಾರ್, ಡಿಶ್ ದೇವರಾಜ್, ಪೂರ್ಣೇಶ್, ಸತೀಶ್ ಆರಾಧ್ಯ, ಸೋಮಶೇಖರ್, ವಿನಯ್ ಭಜರಂಗಿ, ಶ್ರೀನಿವಾಸ್, ಪ್ರಮೋದ್, ನಾಗರಾಜ್ ಶೆಟ್ಟಿ, ಬ್ಯಾಂಕ್ ವೀರಪ್ಪ, ನಾಗಣ್ಣ, ರಮೇಶ್, ಕುಲುಮೆ ಜೈಶಂಕರ್, ದಿವಾಕರ, ಶಿವರಾಜ್, ಅಯ್ಯಂಗಾರ್ ಪ್ರಸಾದಿ, ಹೈರಿಗೆ ಮಾದೇಗೌಡ, ಆರಾಧ್ಯ, ಚಂದ್ರ ಮೌಳಿ, ಸತೀಶ, ನಾಗರಾಜು, ಗಣೇಶಾಚಾರ್, ಮೀನು ರಾಜಣ್ಣ, ಶಶಿ, ಮಂಜು ಕೋಟೆ, ಶ್ರೀಧರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮಳೆಯಲ್ಲೂ ಜನರಿಂದ ವೀಕ್ಷಣೆ:
ಕೋಟೆ ಪಟ್ಟಣ ವ್ಯಾಪ್ತಿಯಲ್ಲಿ ಸುರಿದ ವಿಪರೀತ ಮಳೆಯ ನಡುವೆಯೂ ಜನಸಾಮಾನ್ಯರು ವಿಜಯದಶಮಿ ಉತ್ಸವ, ಮಿನಿ ದಸರಾ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…
ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ…
ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…
ದಾಸೇಗೌಡ ಓವರ್ಹೆಡ್ ಟ್ಯಾಂಕ್ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್ಆರ್ಟಿಸಿ ಬಸ್…
ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…
ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ…