Andolana originals

ಕೋಟೆಯಲ್ಲಿ ಸಡಗರದ ನವರಾತ್ರಿ ಉತ್ಸವಕ್ಕೆ ತೆರೆ

ಅರ್ಥಪೂರ್ಣವಾಗಿ ನಡೆದ ಮಿನಿ ದಸರಾ, ಗಮನ ಸೆಳೆದ ಪೊಲೀಸರ ಬನ್ನಿ ಪೂಜೆ
ಮಂಜು ಕೋಟೆ
ಎಚ್.ಡಿ.ಕೋಟೆ: ಪಟ್ಟಣದಲ್ಲಿ ಶನಿವಾರ ಶ್ರೀ ವರದರಾಜ ಸ್ವಾಮಿ, ಶ್ರೀದೇವಿ, ಭೂದೇವಿ ಮತ್ತು ಚಾಮುಂಡೇಶ್ವರಿ ಉತ್ಸವ ಮೂರ್ತಿಗಳ ಮೆರವಣಿಗೆಯೊಂದಿಗೆ ಮಿನಿ ದಸರಾ ಮತ್ತು ನವರಾತ್ರಿ ಉತ್ಸವ ಅರ್ಥಪೂರ್ಣವಾಗಿ ನೆರವೇರಿತು.

ಹೌಸಿಂಗ್‌ ಬೋರ್ಡ್‌ನಲ್ಲಿರುವ ಚಾಮುಂಡೇ ಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ದೇವಿಗೆ ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 3.30ರ ಸಂದರ್ಭದಲ್ಲಿ ಬೆಳ್ಳಿ ರಥದಲ್ಲಿ ಕೂರಿಸಿದ ಚಾಮುಂಡೇಶ್ವರಿ ಉತ್ಸವಮೂರ್ತಿಯೊಂದಿಗೆ ವಾದ್ಯಗೋಷ್ಠಿ, ಕಲಾತಂಡಗಳು ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದವು. ಮೊದಲನೇ ಮುಖ್ಯರಸ್ತೆಯಲ್ಲಿರುವ ಚೋಳರ ಕಾಲದ ವರದರಾಜಸ್ವಾಮಿ ದೇವಸ್ಥಾನದಲ್ಲಿ ಶ್ರೀ ವರದರಾಜಸ್ವಾಮಿ ಮತ್ತು ಭೂದೇವಿ, ಶ್ರೀದೇವಿ ದೇವರ ಉತ್ಸವ ಮೂರ್ತಿಗಳ ಮೆರವಣಿಗೆಗೆ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಸಮಿತಿಯವರು ಚಾಲನೆ ನೀಡಿದರು.

ಇದಕ್ಕೂ ಮುನ್ನ ಸರ್ಕಲ್ ಇನ್‌ಸ್ಪೆಕ್ಟರ್ ಶಬೀರ್ ಹುಸೇನ್‌ ಸಬ್‌ ಇನ್ ಸೆಕ‌ ಪ್ರಕಾಶ್ ಮತ್ತಿತರರು ಪೊಲೀಸ್ ಪರೇಡ್ ನೆರವೇರಿಸಿ, ಉತ್ಸವಮೂರ್ತಿ ಗಳಿಗೆ ಗೌರವ ಸಲ್ಲಿಸಿದರು. ಅನೇಕ ಕಲಾತಂಡಗಳು, ವಾದ್ಯಗೋಷ್ಠಿಗಳು, ಸ್ತಬ್ಧಚಿತ್ರಗಳೊಡನೆ ಚಾಮುಂಡೇಶ್ವರಿ ಮತ್ತು ವರದರಾಜಸ್ವಾಮಿ ಉತ್ಸವಮೂರ್ತಿಗಳ ಮೆರವಣಿಗೆ ಮೊದಲನೇ ಮುಖ್ಯ ರಸ್ತೆಯಿಂದ ಚಾಮುಂಡೇಶ್ವರಿ ದೇವಸ್ಥಾನದ ಬನ್ನಿಮರದವರೆಗೆ ನಡೆಯಿತು. ನಂತರ ಅಲ್ಲಿರುವ ಬನ್ನಿಮರಕ್ಕೆ ಪೊಲೀಸ್ ಇಲಾಖೆಯವರು ಪೊಲೀಸ್ ಪೂಜೆ ನೆರವೇರಿಸಿದರು. ಈ ಮೂಲಕ 9 ದಿನಗಳಿಂದ ವರದರಾಜಸ್ವಾಮಿ ಮತ್ತು ಚಾಮುಂಡೇಶ್ವರಿ, ಬೀರೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿದ್ದ ನವರಾತ್ರಿ ಮತ್ತು ವಿಜಯದಶಮಿಯ ದಸರಾಕ್ಕೆ ತೆರೆ ಬಿದ್ದಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿಗಳ ಮುಖ್ಯಸ್ಥರಾದ ಬಿ.ಎಸ್‌.ರಂಗ ಅಯ್ಯಂಗಾರ್, ನಟರಾಜ್, ಡೇರಿ ಶ್ರೀಕಾಂತ್, ತಿರುಮಲಾಚಾರ್, ಡಿಶ್ ದೇವರಾಜ್, ಪೂರ್ಣೇಶ್, ಸತೀಶ್ ಆರಾಧ್ಯ, ಸೋಮಶೇಖರ್, ವಿನಯ್ ಭಜರಂಗಿ, ಶ್ರೀನಿವಾಸ್, ಪ್ರಮೋದ್, ನಾಗರಾಜ್ ಶೆಟ್ಟಿ, ಬ್ಯಾಂಕ್ ವೀರಪ್ಪ, ನಾಗಣ್ಣ, ರಮೇಶ್, ಕುಲುಮೆ ಜೈಶಂಕರ್, ದಿವಾಕರ, ಶಿವರಾಜ್, ಅಯ್ಯಂಗಾರ್ ಪ್ರಸಾದಿ, ಹೈರಿಗೆ ಮಾದೇಗೌಡ, ಆರಾಧ್ಯ, ಚಂದ್ರ ಮೌಳಿ, ಸತೀಶ, ನಾಗರಾಜು, ಗಣೇಶಾಚಾರ್, ಮೀನು ರಾಜಣ್ಣ, ಶಶಿ, ಮಂಜು ಕೋಟೆ, ಶ್ರೀಧರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮಳೆಯಲ್ಲೂ ಜನರಿಂದ ವೀಕ್ಷಣೆ:
ಕೋಟೆ ಪಟ್ಟಣ ವ್ಯಾಪ್ತಿಯಲ್ಲಿ ಸುರಿದ ವಿಪರೀತ ಮಳೆಯ ನಡುವೆಯೂ ಜನಸಾಮಾನ್ಯರು ವಿಜಯದಶಮಿ ಉತ್ಸವ, ಮಿನಿ ದಸರಾ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಆಂದೋಲನ ಡೆಸ್ಕ್

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago