Andolana originals

ಕೋಟೆಯಲ್ಲಿ ಸಡಗರದ ನವರಾತ್ರಿ ಉತ್ಸವಕ್ಕೆ ತೆರೆ

ಅರ್ಥಪೂರ್ಣವಾಗಿ ನಡೆದ ಮಿನಿ ದಸರಾ, ಗಮನ ಸೆಳೆದ ಪೊಲೀಸರ ಬನ್ನಿ ಪೂಜೆ
ಮಂಜು ಕೋಟೆ
ಎಚ್.ಡಿ.ಕೋಟೆ: ಪಟ್ಟಣದಲ್ಲಿ ಶನಿವಾರ ಶ್ರೀ ವರದರಾಜ ಸ್ವಾಮಿ, ಶ್ರೀದೇವಿ, ಭೂದೇವಿ ಮತ್ತು ಚಾಮುಂಡೇಶ್ವರಿ ಉತ್ಸವ ಮೂರ್ತಿಗಳ ಮೆರವಣಿಗೆಯೊಂದಿಗೆ ಮಿನಿ ದಸರಾ ಮತ್ತು ನವರಾತ್ರಿ ಉತ್ಸವ ಅರ್ಥಪೂರ್ಣವಾಗಿ ನೆರವೇರಿತು.

ಹೌಸಿಂಗ್‌ ಬೋರ್ಡ್‌ನಲ್ಲಿರುವ ಚಾಮುಂಡೇ ಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ದೇವಿಗೆ ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 3.30ರ ಸಂದರ್ಭದಲ್ಲಿ ಬೆಳ್ಳಿ ರಥದಲ್ಲಿ ಕೂರಿಸಿದ ಚಾಮುಂಡೇಶ್ವರಿ ಉತ್ಸವಮೂರ್ತಿಯೊಂದಿಗೆ ವಾದ್ಯಗೋಷ್ಠಿ, ಕಲಾತಂಡಗಳು ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದವು. ಮೊದಲನೇ ಮುಖ್ಯರಸ್ತೆಯಲ್ಲಿರುವ ಚೋಳರ ಕಾಲದ ವರದರಾಜಸ್ವಾಮಿ ದೇವಸ್ಥಾನದಲ್ಲಿ ಶ್ರೀ ವರದರಾಜಸ್ವಾಮಿ ಮತ್ತು ಭೂದೇವಿ, ಶ್ರೀದೇವಿ ದೇವರ ಉತ್ಸವ ಮೂರ್ತಿಗಳ ಮೆರವಣಿಗೆಗೆ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಸಮಿತಿಯವರು ಚಾಲನೆ ನೀಡಿದರು.

ಇದಕ್ಕೂ ಮುನ್ನ ಸರ್ಕಲ್ ಇನ್‌ಸ್ಪೆಕ್ಟರ್ ಶಬೀರ್ ಹುಸೇನ್‌ ಸಬ್‌ ಇನ್ ಸೆಕ‌ ಪ್ರಕಾಶ್ ಮತ್ತಿತರರು ಪೊಲೀಸ್ ಪರೇಡ್ ನೆರವೇರಿಸಿ, ಉತ್ಸವಮೂರ್ತಿ ಗಳಿಗೆ ಗೌರವ ಸಲ್ಲಿಸಿದರು. ಅನೇಕ ಕಲಾತಂಡಗಳು, ವಾದ್ಯಗೋಷ್ಠಿಗಳು, ಸ್ತಬ್ಧಚಿತ್ರಗಳೊಡನೆ ಚಾಮುಂಡೇಶ್ವರಿ ಮತ್ತು ವರದರಾಜಸ್ವಾಮಿ ಉತ್ಸವಮೂರ್ತಿಗಳ ಮೆರವಣಿಗೆ ಮೊದಲನೇ ಮುಖ್ಯ ರಸ್ತೆಯಿಂದ ಚಾಮುಂಡೇಶ್ವರಿ ದೇವಸ್ಥಾನದ ಬನ್ನಿಮರದವರೆಗೆ ನಡೆಯಿತು. ನಂತರ ಅಲ್ಲಿರುವ ಬನ್ನಿಮರಕ್ಕೆ ಪೊಲೀಸ್ ಇಲಾಖೆಯವರು ಪೊಲೀಸ್ ಪೂಜೆ ನೆರವೇರಿಸಿದರು. ಈ ಮೂಲಕ 9 ದಿನಗಳಿಂದ ವರದರಾಜಸ್ವಾಮಿ ಮತ್ತು ಚಾಮುಂಡೇಶ್ವರಿ, ಬೀರೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿದ್ದ ನವರಾತ್ರಿ ಮತ್ತು ವಿಜಯದಶಮಿಯ ದಸರಾಕ್ಕೆ ತೆರೆ ಬಿದ್ದಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿಗಳ ಮುಖ್ಯಸ್ಥರಾದ ಬಿ.ಎಸ್‌.ರಂಗ ಅಯ್ಯಂಗಾರ್, ನಟರಾಜ್, ಡೇರಿ ಶ್ರೀಕಾಂತ್, ತಿರುಮಲಾಚಾರ್, ಡಿಶ್ ದೇವರಾಜ್, ಪೂರ್ಣೇಶ್, ಸತೀಶ್ ಆರಾಧ್ಯ, ಸೋಮಶೇಖರ್, ವಿನಯ್ ಭಜರಂಗಿ, ಶ್ರೀನಿವಾಸ್, ಪ್ರಮೋದ್, ನಾಗರಾಜ್ ಶೆಟ್ಟಿ, ಬ್ಯಾಂಕ್ ವೀರಪ್ಪ, ನಾಗಣ್ಣ, ರಮೇಶ್, ಕುಲುಮೆ ಜೈಶಂಕರ್, ದಿವಾಕರ, ಶಿವರಾಜ್, ಅಯ್ಯಂಗಾರ್ ಪ್ರಸಾದಿ, ಹೈರಿಗೆ ಮಾದೇಗೌಡ, ಆರಾಧ್ಯ, ಚಂದ್ರ ಮೌಳಿ, ಸತೀಶ, ನಾಗರಾಜು, ಗಣೇಶಾಚಾರ್, ಮೀನು ರಾಜಣ್ಣ, ಶಶಿ, ಮಂಜು ಕೋಟೆ, ಶ್ರೀಧರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮಳೆಯಲ್ಲೂ ಜನರಿಂದ ವೀಕ್ಷಣೆ:
ಕೋಟೆ ಪಟ್ಟಣ ವ್ಯಾಪ್ತಿಯಲ್ಲಿ ಸುರಿದ ವಿಪರೀತ ಮಳೆಯ ನಡುವೆಯೂ ಜನಸಾಮಾನ್ಯರು ವಿಜಯದಶಮಿ ಉತ್ಸವ, ಮಿನಿ ದಸರಾ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago