Andolana originals

ಕೋಟೆಯಲ್ಲಿ ಸಡಗರದ ನವರಾತ್ರಿ ಉತ್ಸವಕ್ಕೆ ತೆರೆ

ಅರ್ಥಪೂರ್ಣವಾಗಿ ನಡೆದ ಮಿನಿ ದಸರಾ, ಗಮನ ಸೆಳೆದ ಪೊಲೀಸರ ಬನ್ನಿ ಪೂಜೆ
ಮಂಜು ಕೋಟೆ
ಎಚ್.ಡಿ.ಕೋಟೆ: ಪಟ್ಟಣದಲ್ಲಿ ಶನಿವಾರ ಶ್ರೀ ವರದರಾಜ ಸ್ವಾಮಿ, ಶ್ರೀದೇವಿ, ಭೂದೇವಿ ಮತ್ತು ಚಾಮುಂಡೇಶ್ವರಿ ಉತ್ಸವ ಮೂರ್ತಿಗಳ ಮೆರವಣಿಗೆಯೊಂದಿಗೆ ಮಿನಿ ದಸರಾ ಮತ್ತು ನವರಾತ್ರಿ ಉತ್ಸವ ಅರ್ಥಪೂರ್ಣವಾಗಿ ನೆರವೇರಿತು.

ಹೌಸಿಂಗ್‌ ಬೋರ್ಡ್‌ನಲ್ಲಿರುವ ಚಾಮುಂಡೇ ಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ದೇವಿಗೆ ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 3.30ರ ಸಂದರ್ಭದಲ್ಲಿ ಬೆಳ್ಳಿ ರಥದಲ್ಲಿ ಕೂರಿಸಿದ ಚಾಮುಂಡೇಶ್ವರಿ ಉತ್ಸವಮೂರ್ತಿಯೊಂದಿಗೆ ವಾದ್ಯಗೋಷ್ಠಿ, ಕಲಾತಂಡಗಳು ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದವು. ಮೊದಲನೇ ಮುಖ್ಯರಸ್ತೆಯಲ್ಲಿರುವ ಚೋಳರ ಕಾಲದ ವರದರಾಜಸ್ವಾಮಿ ದೇವಸ್ಥಾನದಲ್ಲಿ ಶ್ರೀ ವರದರಾಜಸ್ವಾಮಿ ಮತ್ತು ಭೂದೇವಿ, ಶ್ರೀದೇವಿ ದೇವರ ಉತ್ಸವ ಮೂರ್ತಿಗಳ ಮೆರವಣಿಗೆಗೆ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಸಮಿತಿಯವರು ಚಾಲನೆ ನೀಡಿದರು.

ಇದಕ್ಕೂ ಮುನ್ನ ಸರ್ಕಲ್ ಇನ್‌ಸ್ಪೆಕ್ಟರ್ ಶಬೀರ್ ಹುಸೇನ್‌ ಸಬ್‌ ಇನ್ ಸೆಕ‌ ಪ್ರಕಾಶ್ ಮತ್ತಿತರರು ಪೊಲೀಸ್ ಪರೇಡ್ ನೆರವೇರಿಸಿ, ಉತ್ಸವಮೂರ್ತಿ ಗಳಿಗೆ ಗೌರವ ಸಲ್ಲಿಸಿದರು. ಅನೇಕ ಕಲಾತಂಡಗಳು, ವಾದ್ಯಗೋಷ್ಠಿಗಳು, ಸ್ತಬ್ಧಚಿತ್ರಗಳೊಡನೆ ಚಾಮುಂಡೇಶ್ವರಿ ಮತ್ತು ವರದರಾಜಸ್ವಾಮಿ ಉತ್ಸವಮೂರ್ತಿಗಳ ಮೆರವಣಿಗೆ ಮೊದಲನೇ ಮುಖ್ಯ ರಸ್ತೆಯಿಂದ ಚಾಮುಂಡೇಶ್ವರಿ ದೇವಸ್ಥಾನದ ಬನ್ನಿಮರದವರೆಗೆ ನಡೆಯಿತು. ನಂತರ ಅಲ್ಲಿರುವ ಬನ್ನಿಮರಕ್ಕೆ ಪೊಲೀಸ್ ಇಲಾಖೆಯವರು ಪೊಲೀಸ್ ಪೂಜೆ ನೆರವೇರಿಸಿದರು. ಈ ಮೂಲಕ 9 ದಿನಗಳಿಂದ ವರದರಾಜಸ್ವಾಮಿ ಮತ್ತು ಚಾಮುಂಡೇಶ್ವರಿ, ಬೀರೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿದ್ದ ನವರಾತ್ರಿ ಮತ್ತು ವಿಜಯದಶಮಿಯ ದಸರಾಕ್ಕೆ ತೆರೆ ಬಿದ್ದಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿಗಳ ಮುಖ್ಯಸ್ಥರಾದ ಬಿ.ಎಸ್‌.ರಂಗ ಅಯ್ಯಂಗಾರ್, ನಟರಾಜ್, ಡೇರಿ ಶ್ರೀಕಾಂತ್, ತಿರುಮಲಾಚಾರ್, ಡಿಶ್ ದೇವರಾಜ್, ಪೂರ್ಣೇಶ್, ಸತೀಶ್ ಆರಾಧ್ಯ, ಸೋಮಶೇಖರ್, ವಿನಯ್ ಭಜರಂಗಿ, ಶ್ರೀನಿವಾಸ್, ಪ್ರಮೋದ್, ನಾಗರಾಜ್ ಶೆಟ್ಟಿ, ಬ್ಯಾಂಕ್ ವೀರಪ್ಪ, ನಾಗಣ್ಣ, ರಮೇಶ್, ಕುಲುಮೆ ಜೈಶಂಕರ್, ದಿವಾಕರ, ಶಿವರಾಜ್, ಅಯ್ಯಂಗಾರ್ ಪ್ರಸಾದಿ, ಹೈರಿಗೆ ಮಾದೇಗೌಡ, ಆರಾಧ್ಯ, ಚಂದ್ರ ಮೌಳಿ, ಸತೀಶ, ನಾಗರಾಜು, ಗಣೇಶಾಚಾರ್, ಮೀನು ರಾಜಣ್ಣ, ಶಶಿ, ಮಂಜು ಕೋಟೆ, ಶ್ರೀಧರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮಳೆಯಲ್ಲೂ ಜನರಿಂದ ವೀಕ್ಷಣೆ:
ಕೋಟೆ ಪಟ್ಟಣ ವ್ಯಾಪ್ತಿಯಲ್ಲಿ ಸುರಿದ ವಿಪರೀತ ಮಳೆಯ ನಡುವೆಯೂ ಜನಸಾಮಾನ್ಯರು ವಿಜಯದಶಮಿ ಉತ್ಸವ, ಮಿನಿ ದಸರಾ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

1 hour ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

1 hour ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

1 hour ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

1 hour ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

1 hour ago