Andolana originals

ಶ್ರೀರಂಗಪಟ್ಟಣ ದಸರಾಗೆ ವರ್ಣರಂಜಿತ ತೆರೆ

ಹೇಮಂತ್‌ ಕುಮಾರ್‌

ಶ್ರೀರಂಗಪಟ್ಟಣ ಪಟ್ಟಣದಲ್ಲಿ ಹತ್ತು ಹಲವು ನಾಲ್ಕು ದಿನಗಳ ಕಾಲ ಕಲಾಪ್ರಿಯರಿಗೆ ರಸದೌತನ ನೀಡಿದ ಸಾಂಸ್ಕೃತಿಕ ಕಾರ್ಯಕ್ರಮ

ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅ.4ರಿಂದ 7ರ ವರೆಗೆ ನಡೆದ ನಾಡಹಬ್ಬ ದಸರಾ ಮಹೋತ್ಸವ ಈ ಮಣ್ಣಿನ ಪರಂಪರೆ, ಸಾಂಸ್ಕೃತಿಕ ವೈಭವಗಳನ್ನು ಪಸರಿಸುವ ಮೂಲಕ ಸೋಮವಾರ ಸಂಪನ್ನಗೊಂಡಿತು.

ಅ.4ರಂದು ಮೊದಲ ದಿನದ ಕಾರ್ಯಕ್ರಮವಾಗಿ ಶ್ರೀರಂಗಪಟ್ಟಣ ದಸರಾ ಮಹೋತ್ಸವದಲ್ಲಿ ನಡೆದ ಜಂಬೂ ಸವಾರಿ ಮೆರವಣಿಗೆಗೆ ಚಲನಚಿತ್ರ ನಟ ಶಿವರಾಜ್ ಕುಮಾರ್ ಚಾಲನೆ ನೀಡಿ, ದಸರಾ ಆರಂಭಗೊಂಡ ಮೂಲ ಸ್ಥಳದಲ್ಲೇ ದಸರಾ ಉದ್ಘಾಟನೆಗೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎನ್ನುವ ಮೂಲಕ ಶ್ರೀರಂಗಪಟ್ಟಣದ ದಸರಾ ಮಹತ್ವವನ್ನು ತಿಳಿಸಿದ್ದರು. ದಸರಾದಲ್ಲಿ ಯಾವುದೇ ಅವಘಡಗಳಿಗೆ ಆಸ್ಪದ ನೀಡದಂತೆ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ಅಧಿಕಾರಿಗಳು ನಾಲ್ಕು ದಿನಗಳ ಕಾಲ ಕಣ್ಣಲ್ಲಿ ಕಣ್ಣಿಟ್ಟು ಕಾರ್ಯಕ್ರಮಗಳನ್ನು ನಡೆಸಿದ್ದು ನಾಗರಿಕರ ಪ್ರಶಂಸೆಗೆ ಪಾತ್ರವಾಗಿದೆ.

ಕಿರಂಗೂರು ಬನ್ನಿ ಮಂಟಪದಿಂದ ಶ್ರೀರಂಗಪಟ್ಟಣ ಶ್ರೀರಂಗನಾಥಸ್ವಾಮಿ ಮೈದಾನದವರೆಗೆ ಸುಮಾರು 3 ಕಿ.ಮೀ. ದೂರ ಮಹೇಂದ್ರ ಆನೆ ಮೂರನೇ ಬಾರಿಗೆ ಯಾವುದೇ ಅಡ್ಡಿ ಆತಂಕವಿಲ್ಲದೇ ಚಾಮುಂಡೇಶ್ವರಿ ಉತ್ಸವವನ್ನು ಗಜ ಗಾಂಭೀರ್ಯದಿಂದ ಹೊತ್ತು ಸಾಗುವ ಮೂಲಕ ಸಾವಿರಾರು ಜನರ ಸಂತಸವನ್ನು ಇಮ್ಮಡಿಗೊಳಿಸಿತ್ತು.

ಜಂಬೂ ಸವಾರಿ ಮೆರವಣಿಗೆ ಸಾಗಿದ ಇಕ್ಕೆಲಗಳಲ್ಲಿ ಸಹಸ್ರಾರು ಮಂದಿ ಕುಳಿತು ವೀಕ್ಷಣೆ ಮಾಡಿ ಶ್ರೀರಂಗಪಟ್ಟಣ ದಸರೆಗೂ ಮಹತ್ವವಿದೆ ಎಂಬುದನ್ನು
ಸಾಬೀತುಪಡಿಸಿದರು.

ಆ ಬಳಿಕ ನಡೆದ ವೈವಿಧ್ಯಮಯ ಮತ್ತು ಎಲ್ಲ ಕಲಾ ಕ್ಷೇತ್ರಗಳನ್ನೂ ಸ್ಪರ್ಶಿಸಿದ ಸಂಘಟನಾತ್ಮಕ ಹಾಗೂ ಕ್ರಿಯಾಶೀಲತೆಗೆ ಕನ್ನಡಿ ಹಿಡಿದಂತಹ ಕಾರ್ಯಕ್ರಮಗಳು ಆಯಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತೃತ್ವ ಶಕ್ತಿಗೆ ಸಾಕ್ಷಿಯಾಗಿತ್ತು.

ಮುಖ್ಯವಾಗಿ ಜಿಲ್ಲಾಧಿಕಾರಿ ಡಾ.ಕುಮಾರ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಪಂ ಸಿಇಒ ಶೇಖ್ ತನ್ವಿ‌ ಆಸಿಫ್, ಎಸ್‌ ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಪರಿಶ್ರಮಕ್ಕೆ ಒತ್ತಾಗಿ ನಿಂತವರು ಶ್ರೀರಂಗಪಟ್ಟಣ ತಹಸಿಲ್ದಾರ್ ಹಾಗೂ ತಾಲ್ಲೂಕು ಆಡಳಿತದ ಸಿಬ್ಬಂದಿ ಅತಿಶಯೋಕ್ತಿಯಾಗಲಾರದು.

ಹೌದು, ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಕೆಲವೊಂದು ಲೋಪದೋಷಗಳು ಸಹಜ. ಇದನ್ನು ಆಯೋಜಕರ ಗಮನಕ್ಕೆ ತಂದು ಮುಂದೆ ಈ ಈ ರೀತಿಯಾಗದಂತೆ ನೋಡಿಕೊಳ್ಳುವಂತೆ ಎಚ್ಚರಿಸುವುದೂ ಮಾಧ್ಯಮಗಳ ಕರ್ತವ್ಯವೂ ಹೌದು. ಅದೇ ರೀತಿ ಈ ಬಾರಿ ಪಟ್ಟಣದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ, ಝಂಡಾ ಬತೇರಿ ಸೇರಿದಂತೆ ಕೆಲವೊಂದು ಸ್ಥಳಗಳಲ್ಲಿ ದೀಪಾಲಂಕಾರ ಸೇರಿದಂತೆ ಮಹತ್ವದ ಸ್ಥಾನಮಾನ ಕಲ್ಪಿಸಲಾಗಿಲ್ಲ ಎಂಬ ಆರೋಪಗಳು ಆಯೋಜಕರಿಗೆ ಸೂಕ್ತವಾದ ಸಲಹೆಯಾಗಿದೆ.

ಉಳಿದಂತೆ ನೂರಾರು ಕಲಾವಿದರು, ಅನೇಕ ಸಂಘಟನೆಗಳು ಹಾಗೂ ಸ್ಥಳೀಯ ಮತ್ತು ಪ್ರಚಲಿತದಲ್ಲಿರುವ ಗ್ಲಾಮರಸ್‌ ಕಲಾವಿದರಿಗೆ ಸಂಭಾವನೆಯಲ್ಲಿ ಕೆಲವು ಅಸಂಗತಗಳು ಚರ್ಚಾಸ್ಪದವಾಗಿಯೇ ಅಂತ್ಯಗೊಳ್ಳುತ್ತಿವೆ. ಇದು ಇಂದು ನಿನ್ನೆಯ ವಿವಾದವಲ್ಲ. ಕಾರ್ಯಕ್ರಮಕ್ಕೆ ತಾರಾ ಮೆರುಗು ನೀಡದಿದ್ದರೆ ಕಾರ್ಯಕ್ರಮ ಸಪ್ಪೆ ಎನ್ನುವವರು, ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡದಿದ್ದರೆ ಜಿಲ್ಲಾಡಳಿತ ಪಕ್ಷಪಾತಿ ಎನ್ನುವಂತಹ ಆರೋಪಗಳು ಈ ಹಿಂದೆಯೂ ಕೇಳಿಬಂದಿತ್ತು. ಒಟ್ಟಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಾಲ್ಕು ದಿನಗಳ ಕಾಲ ನಡೆದ ಶ್ರೀರಂಗಪಟ್ಟಣ ದಸರಾ ಕ್ರೀಡೆ, ಸಂಸ್ಕೃತಿ, ಜನಪದ, ಸಿನಿಮಾ, ರಂಗಭೂಮಿ, ತಾಳವಾದ್ಯ ಇವೇ ಮುಂತಾದ ಕ್ಷೇತ್ರಗಳ ಎಲ್ಲ ಕಲಾವಿದರಿಗೂ ಅವಕಾಶ ಕಲ್ಪಿಸುವಂತಹ ಪ್ರಯತ್ನ ನಡೆದಿದ್ದು ಗಮನಾರ್ಹ ಸಂಗತಿ.

ಶ್ರೀರಂಗಪಟ್ಟಣ ದಸರಾ ಸಾಂಸ್ಕೃತಿಕ ಸಮಾರೋಪ ಚಟುವಟಿಕೆಗಳ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ರಮೇಶ್‌ ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ. ಕುಮಾರ, ಎಡಿಸಿ ನಾಗರಾಜು, ಜಿಪಂ ಸಿಇಒ ತನೀ‌ ಆಸಿಫ್, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿಂದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

50 mins ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago