Andolana originals

ಇಂಜಿನಿಯರಿಂಗ್ ಕಾಲೇಜು ಫಲಿತಾಂಶ ಪ್ರಕಟ

‘ಆಂದೋಲನ’ ವರದಿಗೆ ಎಚ್ಚೆತ್ತುಕೊಂಡ ವಿವಿ ಆಡಳಿತ ಮಂಡಳಿ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ೨೦೨೪-೨೫ನೇ ಶೈಕ್ಷಣಿಕ ಸಾಲಿನ ೨, ೪ ಹಾಗೂ ೬ನೇ ಸೆಮಿಸ್ಟರ್ಗಳ ಫಲಿತಾಂಶ ಬುಧವಾರ ಬಿಡುಗಡೆಯಾಗಿದೆ.

‘ಆಂದೋಲನ’ ದಿನ ಪತ್ರಿಕೆ ನ.೧೨ರಂದು ‘ಪರೀಕ್ಷೆ ಮುಗಿದು ನಾಲ್ಕು ತಿಂಗಳು; ಫಲಿತಾಂಶ ಗೋಜಲು’ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ವರದಿ ಪ್ರಕಟಗೊಂಡ ಕೂಡಲೇ ಎಚ್ಚೆತ್ತುಕೊಂಡು ವಿವಿಯ ಆಡಳಿತ ಮಂಡಳಿ ರೆಗ್ಯುಲರ್ ಮತ್ತು ಬಾಕಿ ವಿಷಯಗಳ ಫಲಿತಾಂಶ ಬಿಡುಗಡೆ ಮಾಡಿದೆ.

ಕಾಲೇಜಿನ ಪ್ರಾಂಶುಪಾಲ ಎಂ.ಎಸ್.ಗೋವಿಂದೇ ಗೌಡ ಅವರು ಫಲಿತಾಂಶ ಪ್ರಕಟಣೆಯ ಸುತ್ತೋಲೆ ಹೊರಡಿಸಿದ್ದು, ಕಾಲೇಜಿನ ಸೂಚನಾ ಫಲಕದಲ್ಲಿ ಫಲಿತಾಂಶ ಪಟ್ಟಿ ಪ್ರಕಟಿಸಿದ್ದಾರೆ.

ಮುಗಿಯದ ಡೇಟಾ ಎಂಟ್ರಿ ಸಮಸ್ಯೆ: ನಾಲ್ಕು ತಿಂಗಳ ಬಳಿಕ ಫಲಿತಾಂಶ ಬಿಡುಗಡೆಗೊಂಡಿರುವುದು ಸಂತಸವೇ. ಆದರೆ, ಆನ್ ಲೈನ್‌ನಲ್ಲಿ ಫಲಿತಾಂಶ ಬಿಡುಗಡೆಯಾಗದಿರುವುದು ಡೇಟಾ ಎಂಟ್ರಿ ಸಮಸ್ಯೆಗೆ ಹಿಡಿದ ಕನ್ನಡಿಯಾಗಿದೆ.

ಫಲಿತಾಂಶ ಆನ್ ಲೈನ್‌ನಲ್ಲಿ ಬಿಡುಗಡೆಗೊಂಡಿದ್ದರೆ ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅನುಕೂಲವಾಗುತ್ತಿತ್ತು. ಆದರೆ, ಈಗ ಮತ್ತೆ ಅಂಕಪಟ್ಟಿಗಾಗಿ ಕಾಯಬೇಕಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೀಘ್ರದಲ್ಲಿ ಆನ್‌ಲೈನ್‌ನಲ್ಲಿ ಫಲಿತಾಂಶ ಬಿಡುಗಡೆ ಮಾಡಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.

” ತಾಂತ್ರಿಕ ಸಮಸ್ಯೆಯಿಂದ ಫಲಿತಾಂಶವನ್ನು ಆನ್ ಲೈನ್‌ನಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಕೂಡಲೇ ಸಮಸ್ಯೆ ಬಗೆಹರಿಸಲಾಗುವುದು. ಅಂಕಪಟ್ಟಿ ಅತ್ಯಂತ ಅವಶ್ಯವಾಗಿರುವ ವಿದ್ಯಾರ್ಥಿಗಳು ಕಾಲೇಜಿನ ಆಡಳಿತ ಮಂಡಳಿಯನ್ನು ಸಂಪರ್ಕಿಸಿದರೆ ತಾತ್ಕಾಲಿಕ ಅಂಕಪಟ್ಟಿ ನೀಡಲಾಗುವುದು.”

-ಎಂ.ಎಸ್.ಗೋವಿಂದೇಗೌಡ, ಪ್ರಾಂಶುಪಾಲ, ಮೈಸೂರು ವಿವಿ ಸ್ಕೂಲ್ ಆಫ್‌ ಇಂಜಿನಿಯರಿಂಗ್

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

9 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

10 hours ago