Andolana originals

ಇಂಜಿನಿಯರಿಂಗ್ ಕಾಲೇಜು ಫಲಿತಾಂಶ ಪ್ರಕಟ

‘ಆಂದೋಲನ’ ವರದಿಗೆ ಎಚ್ಚೆತ್ತುಕೊಂಡ ವಿವಿ ಆಡಳಿತ ಮಂಡಳಿ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ೨೦೨೪-೨೫ನೇ ಶೈಕ್ಷಣಿಕ ಸಾಲಿನ ೨, ೪ ಹಾಗೂ ೬ನೇ ಸೆಮಿಸ್ಟರ್ಗಳ ಫಲಿತಾಂಶ ಬುಧವಾರ ಬಿಡುಗಡೆಯಾಗಿದೆ.

‘ಆಂದೋಲನ’ ದಿನ ಪತ್ರಿಕೆ ನ.೧೨ರಂದು ‘ಪರೀಕ್ಷೆ ಮುಗಿದು ನಾಲ್ಕು ತಿಂಗಳು; ಫಲಿತಾಂಶ ಗೋಜಲು’ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ವರದಿ ಪ್ರಕಟಗೊಂಡ ಕೂಡಲೇ ಎಚ್ಚೆತ್ತುಕೊಂಡು ವಿವಿಯ ಆಡಳಿತ ಮಂಡಳಿ ರೆಗ್ಯುಲರ್ ಮತ್ತು ಬಾಕಿ ವಿಷಯಗಳ ಫಲಿತಾಂಶ ಬಿಡುಗಡೆ ಮಾಡಿದೆ.

ಕಾಲೇಜಿನ ಪ್ರಾಂಶುಪಾಲ ಎಂ.ಎಸ್.ಗೋವಿಂದೇ ಗೌಡ ಅವರು ಫಲಿತಾಂಶ ಪ್ರಕಟಣೆಯ ಸುತ್ತೋಲೆ ಹೊರಡಿಸಿದ್ದು, ಕಾಲೇಜಿನ ಸೂಚನಾ ಫಲಕದಲ್ಲಿ ಫಲಿತಾಂಶ ಪಟ್ಟಿ ಪ್ರಕಟಿಸಿದ್ದಾರೆ.

ಮುಗಿಯದ ಡೇಟಾ ಎಂಟ್ರಿ ಸಮಸ್ಯೆ: ನಾಲ್ಕು ತಿಂಗಳ ಬಳಿಕ ಫಲಿತಾಂಶ ಬಿಡುಗಡೆಗೊಂಡಿರುವುದು ಸಂತಸವೇ. ಆದರೆ, ಆನ್ ಲೈನ್‌ನಲ್ಲಿ ಫಲಿತಾಂಶ ಬಿಡುಗಡೆಯಾಗದಿರುವುದು ಡೇಟಾ ಎಂಟ್ರಿ ಸಮಸ್ಯೆಗೆ ಹಿಡಿದ ಕನ್ನಡಿಯಾಗಿದೆ.

ಫಲಿತಾಂಶ ಆನ್ ಲೈನ್‌ನಲ್ಲಿ ಬಿಡುಗಡೆಗೊಂಡಿದ್ದರೆ ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅನುಕೂಲವಾಗುತ್ತಿತ್ತು. ಆದರೆ, ಈಗ ಮತ್ತೆ ಅಂಕಪಟ್ಟಿಗಾಗಿ ಕಾಯಬೇಕಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೀಘ್ರದಲ್ಲಿ ಆನ್‌ಲೈನ್‌ನಲ್ಲಿ ಫಲಿತಾಂಶ ಬಿಡುಗಡೆ ಮಾಡಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.

” ತಾಂತ್ರಿಕ ಸಮಸ್ಯೆಯಿಂದ ಫಲಿತಾಂಶವನ್ನು ಆನ್ ಲೈನ್‌ನಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಕೂಡಲೇ ಸಮಸ್ಯೆ ಬಗೆಹರಿಸಲಾಗುವುದು. ಅಂಕಪಟ್ಟಿ ಅತ್ಯಂತ ಅವಶ್ಯವಾಗಿರುವ ವಿದ್ಯಾರ್ಥಿಗಳು ಕಾಲೇಜಿನ ಆಡಳಿತ ಮಂಡಳಿಯನ್ನು ಸಂಪರ್ಕಿಸಿದರೆ ತಾತ್ಕಾಲಿಕ ಅಂಕಪಟ್ಟಿ ನೀಡಲಾಗುವುದು.”

-ಎಂ.ಎಸ್.ಗೋವಿಂದೇಗೌಡ, ಪ್ರಾಂಶುಪಾಲ, ಮೈಸೂರು ವಿವಿ ಸ್ಕೂಲ್ ಆಫ್‌ ಇಂಜಿನಿಯರಿಂಗ್

ಆಂದೋಲನ ಡೆಸ್ಕ್

Recent Posts

ಪತಿ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ತಮಿಳು ನಟಿ

ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ …

8 mins ago

ಇರಾನ್‌ಗೆ ತೆರಳಲಾಗದೆ ಕೊಡಗಿನಲ್ಲಿ ಸಿಲುಕಿದ ದಂಪತಿ

ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…

2 hours ago

ಬಿಜೆಪಿ-ಆರ್‌ಎಸ್‌ಎಸ್-ಮೋದಿ ವಿರುದ್ಧ ಏನೆಲ್ಲಾ ಮಾತಾಡಿದ್ದಾರೆ ಗೊತ್ತಾ? ; ಸಿಎಂ ಹೀಗಂದಿದ್ಯಾರಿಗೆ

ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ…

3 hours ago

ಅಮೇರಿಕಾ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್‌ ಖಾದೇಮಿ ಹತ್ಯೆ

ಟೆಹರಾನ್:‌ ಅಮೇರಿಕಾ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ಗುಪ್ತಚರ ಮುಖ್ಯಸ್ಥ ಮಜೀದ್‌ ಖಾದೇಮಿ ಹತ್ಯೆಯಾಗಿದ್ದಾರೆ…

3 hours ago

ಬೂತ್ ಮಟ್ಟದಲ್ಲಿ ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು: ಯಡಿಯೂರಪ್ಪ ಸಲಹೆ

ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ…

3 hours ago